ಆ್ಯಪ್ನಗರ

ದ.ಕ. ಜಿಲ್ಲಾಧಿಕಾರಿ ತುರ್ತು ಸಭೆ ನಿರಂತರ ನಿಗಾ ವಹಿಸಲು ಅಧಿಕಾರಿಗಳಿಗೆ ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಂಟಾಗಿರುವ ನೆರೆ-ಪ್ರವಾಹ ಪರಿಸ್ಥಿತಿ ಮೇಲೆ ಎಲ್ಲ ಅಧಿಕಾರಿಗಳು ನಿರಂತರ ನಿಗಾ ವಹಿಸಿ, ಸಾರ್ವಜನಿಕ ಜೀವ ಹಾನಿ ತಪ್ಪಿಸಲು ಪ್ರಯತ್ನಿಸಬೇಕು ಎಂದು ದ.ಕ. ಜಿಲ್ಲಾಧಿಕಾರಿ ಸಸಿಕಾಂತ್‌ ಸೆಂಥಿಲ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Vijaya Karnataka 11 Aug 2019, 4:20 pm
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಂಟಾಗಿರುವ ನೆರೆ-ಪ್ರವಾಹ ಪರಿಸ್ಥಿತಿ ಮೇಲೆ ಎಲ್ಲ ಅಧಿಕಾರಿಗಳು ನಿರಂತರ ನಿಗಾ ವಹಿಸಿ, ಸಾರ್ವಜನಿಕ ಜೀವ ಹಾನಿ ತಪ್ಪಿಸಲು ಪ್ರಯತ್ನಿಸಬೇಕು ಎಂದು ದ.ಕ. ಜಿಲ್ಲಾಧಿಕಾರಿ ಸಸಿಕಾಂತ್‌ ಸೆಂಥಿಲ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
Vijaya Karnataka Web dk district commissione emergency meeting
ದ.ಕ. ಜಿಲ್ಲಾಧಿಕಾರಿ ತುರ್ತು ಸಭೆ ನಿರಂತರ ನಿಗಾ ವಹಿಸಲು ಅಧಿಕಾರಿಗಳಿಗೆ ಸೂಚನೆ


ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಅಧಿಕಾರಿಗಳ ತುರ್ತು ಸಭೆ ನಡೆಸಿದ ಅವರು, ಮುಖ್ಯವಾಗಿ ನದಿ ಪಾತ್ರದಲ್ಲಿ ವಾಸಿಸುತ್ತಿರುವವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು. ತಗ್ಗುಪ್ರದೇಶಗಳಿಗೆ ಈಗಾಗಲೇ ನೋಡೆಲ್‌ ಅಧಿಕಾರಿಗಳನ್ನು ನೇಮಿಸಲಾಗಿದೆ. ಅವರು ಅಲ್ಲಿಯೇ ಇದ್ದು, ಪರಿಸ್ಥಿತಿ ಗಮನಿಸಬೇಕು ಎಂದರು.

ಜಿಲ್ಲೆಯಲ್ಲಿರುವ ಕಾಳಜಿ ಕೇಂದ್ರಗಳಲ್ಲಿ ಎಲ್ಲ ಮೂಲಸೌಕರ್ಯ ಒದಗಿಸಬೇಕು. ಉತ್ತಮ ಆಹಾರ, ಪುರುಷರಿಗೆ, ಮಹಿಳೆಯರಿಗೆ ಪ್ರತ್ಯೇಕ ಕೋಣೆ, ಕುಡಿಯುವ ನೀರು ಸೇರಿದಂತೆ ಯಾವುದೇ ಕೊರತೆಯಾಗದಂತೆ ಎಲ್ಲ ಸೌಲಭ್ಯ ಒದಗಿಸಬೇಕು. ಪ್ರತಿ ಮೂರು ಗಂಟೆಗೊಮ್ಮೆ ತನಗೆ ವರದಿ ನೀಡಬೇಕು ಎಂದು ಸೂಚಿಸಿದರು.

ಹಾನಿಗೊಂಡಿರುವ ರಸ್ತೆಗಳು, ವಿದ್ಯುತ್‌ ಕಂಬಗಳ ಬಗ್ಗೆ ಶೀಘ್ರ ಪರಿಶೀಲನೆ ನಡೆಸಿ ಸಂಪರ್ಕ ಕಲ್ಪಿಸಬೇಕು. ಹಾನಿಯ ಅಂದಾಜು ಮಾಡಿ ತನಗೆ ವರದಿ ನೀಡಲು ಅವರು ತಿಳಿಸಿದರು.

ಹೆಚ್ಚುವರಿ ಬೋಟುಗಳನ್ನು ಜಿಲ್ಲೆಗೆ ತರಿಸಲಾಗುತ್ತಿದೆ. ಎಲ್ಲ ಅಧಿಕಾರಿಗಳು ಸನ್ನದ್ಧ ಸ್ಥಿತಿಯಲ್ಲಿರಲು ಜಿಲ್ಲಾಧಿಕಾರಿಗಳು ಸೂಚಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ