ಮಂಗಳೂರು: ನೀತಿ ಸಂಹಿತೆ ಹಿನ್ನೆಲೆಯಲ್ಲಿ ಐದು ತಿಂಗಳ ಬಳಿಕ ಗುರುವಾರ ನಿಗದಿಯಾದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸದಸ್ಯರಿಂದ ಅಹವಾಲು ಸಲ್ಲಿಕೆಯ ಸಭೆಯಾಗಿ ಮಾರ್ಪಟ್ಟಿದ್ದು, ಸದಸ್ಯರು ಒಬ್ಬರ ಮೇಲೊಬ್ಬರು ಮುಗಿಬಿದ್ದು, ಸಚಿವರ ಮುಂದೆ ಸಮಸ್ಯೆಯ ಪಟ್ಟಿಯನ್ನು ಮುಂದಿಟ್ಟರು.
ಗುರುವಾರ ಮಧ್ಯಾಹ್ನ 11.30ರ ಸುಮಾರಿಗೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅಧ್ಯಕ್ಷತೆಯಲ್ಲಿ ಸಭೆ ಆರಂಭವಾಯಿತು. ಈ ವೇಳೆಗೆ ಸಚಿವ ಯು.ಟಿ.ಖಾದರ್ ಸಭೆಗೆ ಹಾಜರಾದರು. ನನಗೆ ಜಿಲ್ಲಾ ಪಂಚಾಯಿತಿ ಸದಸ್ಯರಿಂದ ಇದುವರೆಗೆ ಯಾವುದೇ ಸಮಸ್ಯೆಗಳು/ ಬೇಡಿಕೆಗಳು ಬಾರದ ಕಾರಣ ನಾನೇ ಖುದ್ದಾಗಿ ಸಭೆಗೆ ಬಂದಿದ್ದು, ನಿಮ್ಮ ಅಹವಾಲುಗಳಿದ್ದರೆ ತಿಳಿಸಿ ಎಂದು ವಿನಂತಿಸಿದರು.
ಜಿಲ್ಲಾ ಪಂಚಾಯಿತಿ ಸದಸ್ಯರೆಲ್ಲರೂ ಹಲವು ಅಹವಾಲು, ಸಮಸ್ಯೆಗಳನ್ನು ಸಚಿವರ ಮುಂದಿಟ್ಟರು. ಸದಸ್ಯರಿಂದ ಮುಖ್ಯವಾಗಿ ವೆನ್ಲಾಕ್ ಆಸ್ಪತ್ರೆಯ ಹಾಗೂ ಆಯುಷ್ಮಾನ್ ಆರೋಗ್ಯ ಯೋಜನೆಯ ಅವ್ಯವಸ್ಥೆ ಬಗ್ಗೆ ದೂರುಗಳ ಮಹಾಪೂರವೇ ಹರಿದು ಬಂತು.
ಸದಸ್ಯರಾದ ತುಂಗಪ್ಪ ಬಂಗೇರ, ಶಾಹುಲ್ ಹಮೀದ್, ಮಮತಾ ಗಟ್ಟಿ, ಧನಲಕ್ಷ್ಮಿ, ಮುಹಮ್ಮದ್, ವಿನೋದ್ ಕುಮಾರ್ ಮತ್ತಿತರರು ಮಾತನಾಡಿ, ವೆನ್ಲಾಕ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ಲಭ್ಯವಾಗುತ್ತಿಲ್ಲ. ಆಯುಷ್ಮಾನ್ ಆರೋಗ್ಯ ಯೋಜನೆಗೆ ರೋಗಿಗಳು ಅನಗತ್ಯವಾಗಿ ಅಲೆದಾಡಬೇಕಾಗುತ್ತದೆ. ಇದರಿಂದ ಇಡೀ ಕುಟುಂಬಕ್ಕೆ ಸಮಸ್ಯೆಯಾಗುತ್ತಿದೆ ಎಂದು ದೂರಿದರು. ಉಪಾಧ್ಯಕ್ಷೆ ಕಸ್ತೂರಿ ಪಂಜ, ಸ್ಥಾಯಿ ಸಮಿತಿ ಅಧ್ಯಕ್ಷ ಜನಾರ್ದನ ಗೌಡ ಆರೋಗ್ಯ ಸ್ಕೀಂನಲ್ಲಿ ಆಗುತ್ತಿರುವ ಅವ್ಯವಸ್ಥೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು.
ಸದಸ್ಯರ ದೂರುಗಳಿಗೆ ಸ್ಪಂದಿಸಿದ ಸಚಿವ ಯು.ಟಿ.ಖಾದರ್, ಮುಂದಿನ ವಾರ ಜಿಲ್ಲಾಧಿಕಾರಿ ಉಪಸ್ಥಿತಿಯಲ್ಲಿ ವಿವಿಧ ಸರಕಾರಿ ಯೋಜನೆಗಳು ಲಭ್ಯವಿರುವ ಜಿಲ್ಲೆಯ 24 ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು, ಜಿಲ್ಲಾ ಆರೋಗ್ಯಾಧಿಕಾರಿ, ಆರೋಗ್ಯ ಇಲಾಖೆಯ ಕಾರ್ಯದರ್ಶಿಯನ್ನು ಕರೆಯಿಸಿ ಸಭೆ ನಡೆಸುವುದಾಗಿ ಭರವಸೆ ನೀಡಿದರು.
ಶಿಫಾರಸು ಪತ್ರಕ್ಕೆ ಅಲೆದಾಟ: ಆಯುಷ್ಮಾನ್ ಆರೋಗ್ಯ ಯೋಜನೆಗೆ ಸಂಬಂಧಿಸಿ 169 ತುರ್ತು ಚಿಕಿತ್ಸೆಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಬಡ ರೋಗಿಗೆ ಚಿಕಿತ್ಸೆ ಒದಗಿಸಬೇಕಾದರೆ ವೆನ್ಲಾಕ್ ಆಸ್ಪತ್ರೆಯಿಂದ ಶಿಫಾರಸ್ಸು ಪತ್ರ ತರುವಂತೆ ರೋಗಿ ಅಥವಾ ಅವರ ಕುಟುಂಬವನ್ನು ಪೀಡಿಸಲಾಗುತ್ತಿದೆ. ಇದಕ್ಕೆ ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಸದಸ್ಯರು ಆಗ್ರಹಿಸಿದರು.
ರೋಗಿಗಳಿಗೆ ಶಿಫಾರಸಿನ ಅಗತ್ಯವಿದ್ದಲ್ಲಿ ತಕ್ಷಣ ಒದಗಿಸಬೇಕು. ಜಿಲ್ಲಾಸ್ಪತ್ರೆಯಾದ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಸೌಲಭ್ಯ ಲಭ್ಯವಿಲ್ಲದಾಗ, ವ್ಯವಸ್ಥೆ ಇರುವ ಆಸ್ಪತ್ರೆಗೇ ರೋಗಿಯನ್ನು ಕಳುಹಿಸಬೇಕು. ಮಾತ್ರವಲ್ಲದೆ, ಆರೋಗ್ಯ ಮಿತ್ರದ ಮೂಲಕ ರೋಗಿ ಅಥವಾ ಅವರ ಕುಟುಂಬಕ್ಕೆ ಸಂಪೂರ್ಣ ಮಾಹಿತಿಯನ್ನು ಒದಗಿಸುವ ವ್ಯವಸ್ಥೆಯನ್ನು ಮಾಡಬೇಕು ಎಂದು ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕಿ ಡಾ.ರಾಜೇಶ್ವರಿದೇವಿ ಅವರಿಗೆ ಸಚಿವರು ನಿರ್ದೇಶನ ನೀಡಿದರು.
ವೆನ್ಲಾಕ್ ಆಸ್ಪತ್ರೆಯಲ್ಲಿ ಬಡ ರೋಗಿಗಳ ತುರ್ತು ಚಿಕಿತ್ಸೆಗಾಗಿ ಜನಪ್ರತಿನಿಧಿಗಳು ಹಿರಿಯ ಅಧಿಕಾರಿಗಳಿಗೆ ಕರೆ ಮಾಡಿದಾಗ ಸೂಕ್ತ ಸ್ಪಂದನ ದೊರೆಯುವುದಿಲ್ಲ ಎಂಬ ಸದಸ್ಯರ ದೂರಿಗೆ ಪ್ರತಿಕ್ರಿಯಿಸಿದ ಸಚಿವ ಯು.ಟಿ.ಖಾದರ್, ಜಿಲ್ಲಾಸ್ಪತ್ರೆಯ ಸಮಿತಿಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರನ್ನು ಕೂಡ ಸೇರ್ಪಡೆಗೊಳಿಸಲಾಗುವುದು. ಯಾವುದೇ ಯೋಜನೆಗಳಿಗೆ ಸಂಬಂಧಿಸಿ ಕಾನೂನಾತ್ಮಕ ಬದಲಾವಣೆ ಆಗಬೇಕಿದ್ದಲ್ಲಿ ಅದನ್ನು ಸಂಬಂಧಪಟ್ಟ ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
ವಿವಿಧ ಯೋಜನೆಗಳಿಗೆ ಒಳಪಡುವ ಆಸ್ಪತ್ರೆಗಳಲ್ಲಿ ಯಾವೆಲ್ಲಾ ಚಿಕಿತ್ಸೆಗಳು ರೋಗಿಗಳಿಗೆ ಲಭ್ಯವಿದೆ ಹಾಗೂ ಆರೋಗ್ಯ ಮಿತ್ರಗೆ ಸಂಬಂಧಿಸಿ ಕಿರು ಪುಸ್ತಕವನ್ನು ತಯಾರಿಸಿ ಎಲ್ಲ ಜಿಲ್ಲಾ ಪಂಚಾಯಿತಿ ಸದಸ್ಯರು ಹಾಗೂ ತಾಲೂಕು ಪಂಚಾಯಿತಿ ಅಧ್ಯಕ್ಷರಿಗೆ ಒದಗಿಸುವಂತೆಯೂ ಆರೋಗ್ಯ ಇಲಾಖೆಗೆ ಸಚಿವರು ಸೂಚನೆ ನೀಡಿದರು.
ಸಭೆಯಲ್ಲಿ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಅನಿತಾ ಹೇಮನಾಥ್, ಯು.ಬಿ.ಇಬ್ರಾಹಿಂ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೆಲ್ವಮಣಿ ಉಪಸ್ಥಿತರಿದ್ದರು.
ಗುರುವಾರ ಮಧ್ಯಾಹ್ನ 11.30ರ ಸುಮಾರಿಗೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅಧ್ಯಕ್ಷತೆಯಲ್ಲಿ ಸಭೆ ಆರಂಭವಾಯಿತು. ಈ ವೇಳೆಗೆ ಸಚಿವ ಯು.ಟಿ.ಖಾದರ್ ಸಭೆಗೆ ಹಾಜರಾದರು. ನನಗೆ ಜಿಲ್ಲಾ ಪಂಚಾಯಿತಿ ಸದಸ್ಯರಿಂದ ಇದುವರೆಗೆ ಯಾವುದೇ ಸಮಸ್ಯೆಗಳು/ ಬೇಡಿಕೆಗಳು ಬಾರದ ಕಾರಣ ನಾನೇ ಖುದ್ದಾಗಿ ಸಭೆಗೆ ಬಂದಿದ್ದು, ನಿಮ್ಮ ಅಹವಾಲುಗಳಿದ್ದರೆ ತಿಳಿಸಿ ಎಂದು ವಿನಂತಿಸಿದರು.
ಜಿಲ್ಲಾ ಪಂಚಾಯಿತಿ ಸದಸ್ಯರೆಲ್ಲರೂ ಹಲವು ಅಹವಾಲು, ಸಮಸ್ಯೆಗಳನ್ನು ಸಚಿವರ ಮುಂದಿಟ್ಟರು. ಸದಸ್ಯರಿಂದ ಮುಖ್ಯವಾಗಿ ವೆನ್ಲಾಕ್ ಆಸ್ಪತ್ರೆಯ ಹಾಗೂ ಆಯುಷ್ಮಾನ್ ಆರೋಗ್ಯ ಯೋಜನೆಯ ಅವ್ಯವಸ್ಥೆ ಬಗ್ಗೆ ದೂರುಗಳ ಮಹಾಪೂರವೇ ಹರಿದು ಬಂತು.
ಸದಸ್ಯರಾದ ತುಂಗಪ್ಪ ಬಂಗೇರ, ಶಾಹುಲ್ ಹಮೀದ್, ಮಮತಾ ಗಟ್ಟಿ, ಧನಲಕ್ಷ್ಮಿ, ಮುಹಮ್ಮದ್, ವಿನೋದ್ ಕುಮಾರ್ ಮತ್ತಿತರರು ಮಾತನಾಡಿ, ವೆನ್ಲಾಕ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ಲಭ್ಯವಾಗುತ್ತಿಲ್ಲ. ಆಯುಷ್ಮಾನ್ ಆರೋಗ್ಯ ಯೋಜನೆಗೆ ರೋಗಿಗಳು ಅನಗತ್ಯವಾಗಿ ಅಲೆದಾಡಬೇಕಾಗುತ್ತದೆ. ಇದರಿಂದ ಇಡೀ ಕುಟುಂಬಕ್ಕೆ ಸಮಸ್ಯೆಯಾಗುತ್ತಿದೆ ಎಂದು ದೂರಿದರು. ಉಪಾಧ್ಯಕ್ಷೆ ಕಸ್ತೂರಿ ಪಂಜ, ಸ್ಥಾಯಿ ಸಮಿತಿ ಅಧ್ಯಕ್ಷ ಜನಾರ್ದನ ಗೌಡ ಆರೋಗ್ಯ ಸ್ಕೀಂನಲ್ಲಿ ಆಗುತ್ತಿರುವ ಅವ್ಯವಸ್ಥೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು.
ಸದಸ್ಯರ ದೂರುಗಳಿಗೆ ಸ್ಪಂದಿಸಿದ ಸಚಿವ ಯು.ಟಿ.ಖಾದರ್, ಮುಂದಿನ ವಾರ ಜಿಲ್ಲಾಧಿಕಾರಿ ಉಪಸ್ಥಿತಿಯಲ್ಲಿ ವಿವಿಧ ಸರಕಾರಿ ಯೋಜನೆಗಳು ಲಭ್ಯವಿರುವ ಜಿಲ್ಲೆಯ 24 ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು, ಜಿಲ್ಲಾ ಆರೋಗ್ಯಾಧಿಕಾರಿ, ಆರೋಗ್ಯ ಇಲಾಖೆಯ ಕಾರ್ಯದರ್ಶಿಯನ್ನು ಕರೆಯಿಸಿ ಸಭೆ ನಡೆಸುವುದಾಗಿ ಭರವಸೆ ನೀಡಿದರು.
ಶಿಫಾರಸು ಪತ್ರಕ್ಕೆ ಅಲೆದಾಟ: ಆಯುಷ್ಮಾನ್ ಆರೋಗ್ಯ ಯೋಜನೆಗೆ ಸಂಬಂಧಿಸಿ 169 ತುರ್ತು ಚಿಕಿತ್ಸೆಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಬಡ ರೋಗಿಗೆ ಚಿಕಿತ್ಸೆ ಒದಗಿಸಬೇಕಾದರೆ ವೆನ್ಲಾಕ್ ಆಸ್ಪತ್ರೆಯಿಂದ ಶಿಫಾರಸ್ಸು ಪತ್ರ ತರುವಂತೆ ರೋಗಿ ಅಥವಾ ಅವರ ಕುಟುಂಬವನ್ನು ಪೀಡಿಸಲಾಗುತ್ತಿದೆ. ಇದಕ್ಕೆ ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಸದಸ್ಯರು ಆಗ್ರಹಿಸಿದರು.
ರೋಗಿಗಳಿಗೆ ಶಿಫಾರಸಿನ ಅಗತ್ಯವಿದ್ದಲ್ಲಿ ತಕ್ಷಣ ಒದಗಿಸಬೇಕು. ಜಿಲ್ಲಾಸ್ಪತ್ರೆಯಾದ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಸೌಲಭ್ಯ ಲಭ್ಯವಿಲ್ಲದಾಗ, ವ್ಯವಸ್ಥೆ ಇರುವ ಆಸ್ಪತ್ರೆಗೇ ರೋಗಿಯನ್ನು ಕಳುಹಿಸಬೇಕು. ಮಾತ್ರವಲ್ಲದೆ, ಆರೋಗ್ಯ ಮಿತ್ರದ ಮೂಲಕ ರೋಗಿ ಅಥವಾ ಅವರ ಕುಟುಂಬಕ್ಕೆ ಸಂಪೂರ್ಣ ಮಾಹಿತಿಯನ್ನು ಒದಗಿಸುವ ವ್ಯವಸ್ಥೆಯನ್ನು ಮಾಡಬೇಕು ಎಂದು ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕಿ ಡಾ.ರಾಜೇಶ್ವರಿದೇವಿ ಅವರಿಗೆ ಸಚಿವರು ನಿರ್ದೇಶನ ನೀಡಿದರು.
ವೆನ್ಲಾಕ್ ಆಸ್ಪತ್ರೆಯಲ್ಲಿ ಬಡ ರೋಗಿಗಳ ತುರ್ತು ಚಿಕಿತ್ಸೆಗಾಗಿ ಜನಪ್ರತಿನಿಧಿಗಳು ಹಿರಿಯ ಅಧಿಕಾರಿಗಳಿಗೆ ಕರೆ ಮಾಡಿದಾಗ ಸೂಕ್ತ ಸ್ಪಂದನ ದೊರೆಯುವುದಿಲ್ಲ ಎಂಬ ಸದಸ್ಯರ ದೂರಿಗೆ ಪ್ರತಿಕ್ರಿಯಿಸಿದ ಸಚಿವ ಯು.ಟಿ.ಖಾದರ್, ಜಿಲ್ಲಾಸ್ಪತ್ರೆಯ ಸಮಿತಿಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರನ್ನು ಕೂಡ ಸೇರ್ಪಡೆಗೊಳಿಸಲಾಗುವುದು. ಯಾವುದೇ ಯೋಜನೆಗಳಿಗೆ ಸಂಬಂಧಿಸಿ ಕಾನೂನಾತ್ಮಕ ಬದಲಾವಣೆ ಆಗಬೇಕಿದ್ದಲ್ಲಿ ಅದನ್ನು ಸಂಬಂಧಪಟ್ಟ ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
ವಿವಿಧ ಯೋಜನೆಗಳಿಗೆ ಒಳಪಡುವ ಆಸ್ಪತ್ರೆಗಳಲ್ಲಿ ಯಾವೆಲ್ಲಾ ಚಿಕಿತ್ಸೆಗಳು ರೋಗಿಗಳಿಗೆ ಲಭ್ಯವಿದೆ ಹಾಗೂ ಆರೋಗ್ಯ ಮಿತ್ರಗೆ ಸಂಬಂಧಿಸಿ ಕಿರು ಪುಸ್ತಕವನ್ನು ತಯಾರಿಸಿ ಎಲ್ಲ ಜಿಲ್ಲಾ ಪಂಚಾಯಿತಿ ಸದಸ್ಯರು ಹಾಗೂ ತಾಲೂಕು ಪಂಚಾಯಿತಿ ಅಧ್ಯಕ್ಷರಿಗೆ ಒದಗಿಸುವಂತೆಯೂ ಆರೋಗ್ಯ ಇಲಾಖೆಗೆ ಸಚಿವರು ಸೂಚನೆ ನೀಡಿದರು.
ಸಭೆಯಲ್ಲಿ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಅನಿತಾ ಹೇಮನಾಥ್, ಯು.ಬಿ.ಇಬ್ರಾಹಿಂ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೆಲ್ವಮಣಿ ಉಪಸ್ಥಿತರಿದ್ದರು.