ಆ್ಯಪ್ನಗರ

ಮಕರ ಸಂಕ್ರಾತಿ ದಿನದಿಂದ ಅಯೋಧ್ಯೆ ರಾಮ ಮಂದಿರಕ್ಕೆ ದೇಣಿಗೆ ಸಂಗ್ರಹ: ವಿಶ್ವಪ್ರಸನ್ನ ಶ್ರೀ

ಶ್ರೀರಾಮ ಮಂದಿರ ನಿರ್ಮಾಣಕ್ಕೆ ಮಕರ ಸಂಕ್ರಾತಿಯ ದಿನದಿಂದ 45 ದಿನಗಳ ಕಾಲ ಧನ ಸಂಗ್ರಹ ಕಾರ್ಯ ನಡೆಯಲಿದೆ ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

Vijaya Karnataka Web 18 Nov 2020, 1:25 pm
ಮಂಗಳೂರು: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಮಕರ ಸಂಕ್ರಾಂತಿಯ ದಿನವಾದ ಜ.15ರಿಂದ 45 ದಿನಗಳ ಕಾಲ ಧನ ಸಂಗ್ರಹ ನಡೆಯಲಿದೆ ಎಂದು ಅಯೋಧ್ಯೆ ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ವಿಶ್ವಸ್ಥರಾದ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದರು.
Vijaya Karnataka Web vishwa Prasanna Theertha Swamiji


ಅಯೋಧ್ಯೆಯಲ್ಲಿ ನಡೆದ ಟ್ರಸ್ಟ್‌ ಸಭೆಯಲ್ಲಿ ಭಾಗವಹಿಸಿ ಮರಳಿದ ಬಳಿಕ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಡಿಯಲ್ಲಿರುವ ವಿಶ್ವಹಿಂದೂ ಪರಿಷತ್‌ಗೆ ದೇಣಿಗೆ ಸಂಗ್ರಹ ಜವಾಬ್ದಾರಿ ನೀಡಲಾಗಿದ್ದು, 10 ರೂ.ನಿಂದ 2 ಸಾವಿರವರೆಗೆ ಕೂಪನ್‌ ಹಾಗೂ ಅದಕ್ಕಿಂತ ಹೆಚ್ಚಿಗೆ ನೀಡುವುದಾದರೆ ರಶೀದಿ ನೀಡಲಾಗುವುದು. ಟ್ರಸ್ಟ್‌ನ ನೇರ ಖಾತೆಗೂ ಸಂದಾಯ ಮಾಡಬಹುದು. ಅಯೋಧ್ಯೆ ನಿರ್ಮಾಣ ಕಾರ್ಯದಲ್ಲಿ ರಾಮ ಸೇತುವೆಗೆ ಅಳಿಲು ಸೇವೆ ನೀಡಿದ ಹಾಗೆ ಪ್ರತಿ ಕುಟುಂಬದಿಂದಲೂ ದೇಣಿಗೆ ಬರಬೇಕೆಂಬುದು ಇದರ ಹಿಂದಿನ ಉದ್ದೇಶ ಎಂದರು.
ಅಯೋಧ್ಯೆ: ರಾಮ ಮಂದಿರ ಸಮೀಪ ಗುರುಕುಲ, ವಸ್ತು ಸಂಗ್ರಹಾಲಯ, ಗೋ ಶಾಲೆ ನಿರ್ಮಾಣ!

ಧಾರಣ ಸಾಮರ್ಥ್ಯ ಬಳಿಕ ದೇಗುಲ
ಅಯೋಧ್ಯೆಯ ಶ್ರೀರಾಮ ಮಂದಿರ ಸಂಪೂರ್ಣವಾಗಿ ಶಿಲಾಮಯವಾಗಿ ರೂಪುಗೊಳ್ಳುತ್ತಿದ್ದು, ಅಲ್ಲಿಯ ಮಣ್ಣು ಧೂಳು ತುಂಬಿ ನುಣುಪಾದ ಕಾರಣ ಭೂಮಿಯ ಧಾರಣಾ ಸಾಮರ್ಥ್ಯದ ಬಗ್ಗೆ ಬಗ್ಗೆ ಪರಿಶೀಲನೆ ನಡೆಯುತ್ತಿದ್ದು, 200 ಅಡಿ ಆಳದವರೆಗೆ ಪರೀಕ್ಷೆ ನಡೆಯುತ್ತಿದೆ. ಧಾರಣಾ ಸಾಮರ್ಥ್ಯ ಪರಿಶೀಲನೆ ಬಳಿಕ ಮಂದಿರ ರೂಪುಗೊಳ್ಳಲಿದೆ. ಕೆಲಸ ಆರಂಭಗೊಂಡ ಸುಮಾರು ಮೂರುವರೆ ವರ್ಷದಲ್ಲಿ ಮಂದಿರ ಕಾರ್ಯಪೂರ್ಣಗೊಳ್ಳಲಿದೆ ಎಂದರು.

ದೇವಸ್ಥಾನದ ಸುತ್ತುಪೌಳಿಯಲ್ಲಿ ಒಂದು ಹಂತ ಹೆಚ್ಚುವರಿಯಾಗಿ ನಿರ್ಮಿಸಲು ಉದ್ದೇಶಿಸಲಾಗಿದೆ. ಮಂದಿರ ನಿರ್ಮಾಣದ ಜವಾಬ್ದಾರಿಯನ್ನು ಎಲ್‌ ಆ್ಯಂಡ್‌ ಟಿ ಕಂಪನಿಗೆ ವಹಿಸಲಾಗಿದ್ದು, ಪರಿಶೀಲನೆ ನಡೆಸಲು ಟಾಟಾ ಕನ್ಸಲ್ಟೆನ್ಸಿ ಕಂಪೆನಿಯನ್ನು ನಿಯೋಜಿಸಲಾಗಿದೆ. ಪ್ರತಿ ಹಂತದ ಪರಿಶೀಲನಾ ವರದಿಯನ್ನು ಈ ಕಂಪನಿಯು ರಾಮಜನ್ಮಭೂಮಿ ಟ್ರಸ್ಟ್‌ಗೆ ನೀಡಲಿದೆ ಎಂದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ಪ್ರದೀಪ್‌ ಕುಮಾರ್‌ ಕಲ್ಕೂರ ಮತ್ತಿತರರಿದ್ದರು.
ಅಯೋಧ್ಯೆಯ ರಾಮ ಮಂದಿರಕ್ಕಿಂತ ದೊಡ್ಡದಾದ ಸೀತಾ ಮಂದಿರ ನಿರ್ಮಾಣದ ಭರವಸೆ ನೀಡಿದ ಚಿರಾಗ್ ಪಾಸ್ವಾನ್!

ಪ್ರಧಾನಿಯಿಂದ ಎರಡು ಸೂಚನೆ

ನೂತನ ಶ್ರೀರಾಮ ಮಂದಿರದಲ್ಲಿ ರಾಮನವಮಿಯಂದು ಶ್ರೀರಾಮನ ವಿಗ್ರಹವನ್ನು ಸೂರ್ಯನ ಕಿರಣಗಳು ಸ್ಪರ್ಶಿಸುವಂತೆ ವ್ಯವಸ್ಥೆ ಮಾಡುವುದು ಹಾಗೂ ಭಕ್ತರು ದೇವರಿಗೆ ನಮಸ್ಕರಿಸುವಾಗ ಸ್ವತಃ ದೇವರ ಪಾದಸ್ಪರ್ಶ ಅನುಭೂತಿ ಸಿಗುವಂತಾಗಲು ತ್ರಿಡಿ ತಂತ್ರಜ್ಞಾನ ಅಳವಡಿಕೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೂಚಿಸಿದ್ದಾರೆ. ದೇವರ ಮೂರ್ತಿಗೆ ಸೂರ್ಯ ಕಿರಣ ಸ್ಪರ್ಶ ವ್ಯವಸ್ಥೆಯ ಜವಾಬ್ದಾರಿಯನ್ನು ಕೌನ್ಸಿಲ್‌ ಫಾರ್‌ ಸೈಂಟಿಫಿಕ್‌ ಆ್ಯಂಡ್‌ ಇಂಡಸ್ಟ್ರಿಯಲ್‌ ರಿಸರ್ಚ್ ಗೆ ವಹಿಸಲಾಗಿದ್ದು, ತ್ರೀಡಿ ತಂತ್ರಜ್ಞಾನಕ್ಕೆ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯನ್ನು ನಿಯೋಜಿಸಲಾಗಿದೆ ಎಂದರು.
1885 ರಿಂದ ಇದುವರೆಗಿನ ಅಯೋಧ್ಯೆ, ಬಾಬರಿ ಮಸೀದಿ ವಿವಾದದ ಸಂಪೂರ್ಣ ಇತಿಹಾಸ

ಕರಾವಳಿಯ ವಾಸ್ತುತಜ್ಞರು

ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣದ ವಾಸ್ತುಶೈಲಿಗೆ ಸಂಬಂಧಪಟ್ಟಂತೆ ದೇಶದ ನಾನಾ ಕಡೆಯ ವೈದಿಕ ವಾಸ್ತುಶಾಸ್ತ್ರಜ್ಞರು ಮಾರ್ಗದರ್ಶನ ನೀಡಲಿದ್ದಾರೆ. ಮಂಗಳೂರು ಕುಡುಪು ಕ್ಷೇತ್ರದ ಕೃಷ್ಣರಾಜ ತಂತ್ರಿಗಳು, ಗುಂಡಿಬೈಲಿನ ತಜ್ಞರು ಸೇರಿದಂತೆ ಕೇರಳದ ಒಬ್ಬರು, ಉತ್ತರ ಭಾರತದ ಇಬ್ಬರು ಮಹನೀಯರು ವಾಸ್ತುತಜ್ಞರ ತಂಡದಲ್ಲಿದ್ದಾರೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ