ಆ್ಯಪ್ನಗರ

ಡಾ.ವಿಜಯಾರಿಗೆ ಶಿವರಾಮ ಕಾರಂತ ಪ್ರಶಸ್ತಿ

ಶಿವರಾಮ ಕಾರಂತ ಪ್ರತಿಷ್ಠಾನದ ವತಿಯಿಂದ ನೀಡುವ ಇಪ್ಪತ್ತನೇ ವರ್ಷದ ಶಿವರಾಮ ಕಾರಂತ ಪ್ರಶಸ್ತಿಗೆ ಚಿಂತನಶೀಲ ಲೇಖಕಿ, ಸಂಘಟಕಿ ಡಾ.ವಿಜಯಾ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ಇಪ್ಪತ್ತು ಸಾವಿರ ನಗದು ಗೌರವ ಸಂಭಾವನೆಯನ್ನು ಒಳಗೊಂಡಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಅಮರನಾಥ ಶೆಟ್ಟಿ ಪ್ರಧಾನ ಕಾರ‍್ಯದರ್ಶಿ ಡಾ.ಜಯಪ್ರಕಾಶ್‌ ಮಾವಿನಕುಳಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Vijaya Karnataka 13 Feb 2019, 4:34 pm
ಮೂಡುಬಿದಿರೆ: ಶಿವರಾಮ ಕಾರಂತ ಪ್ರತಿಷ್ಠಾನದ ವತಿಯಿಂದ ನೀಡುವ ಇಪ್ಪತ್ತನೇ ವರ್ಷದ ಶಿವರಾಮ ಕಾರಂತ ಪ್ರಶಸ್ತಿಗೆ ಚಿಂತನಶೀಲ ಲೇಖಕಿ, ಸಂಘಟಕಿ ಡಾ.ವಿಜಯಾ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ಇಪ್ಪತ್ತು ಸಾವಿರ ನಗದು ಗೌರವ ಸಂಭಾವನೆಯನ್ನು ಒಳಗೊಂಡಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಅಮರನಾಥ ಶೆಟ್ಟಿ ಪ್ರಧಾನ ಕಾರ‍್ಯದರ್ಶಿ ಡಾ.ಜಯಪ್ರಕಾಶ್‌ ಮಾವಿನಕುಳಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Vijaya Karnataka Web dr vijaya shivaram karanth award
ಡಾ.ವಿಜಯಾರಿಗೆ ಶಿವರಾಮ ಕಾರಂತ ಪ್ರಶಸ್ತಿ


ವಿಜಯ ಅವರು ಜನಪರ ಹೋರಾಟಗಾರ್ತಿಯಾಗಿದ್ದು ಕಳೆದ ಮೂರು ದಶಕಗಳಿಂದ ನಾನಾ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದಾರೆ. ಇಪ್ಪತ್ತೆರಡಕ್ಕೂ ಹೆಚ್ಚು ಕೃತಿಗಳನ್ನು ಬರೆದು ಪ್ರಕಟಿಸಿದ್ದಾರೆ. ಇಳಾ ಮತ್ತು ಜನಸಾಹಿತ್ಯ ಪ್ರಕಾಶನಗಳನ್ನು ಸ್ಥಾಪಿಸಿಕೊಂಡು ಕನ್ನಡ ಸಾಹಿತ್ಯ ರಂಗದ ಖ್ಯಾತ ನಾಮರ ಇನ್ನೂರಕ್ಕೂ ಹೆಚ್ಚು ಕೃತಿಗಳನ್ನು ಹೊರತಂದು ಕನ್ನಡ ಸಾರಸ್ವತ ಲೋಕವನ್ನು ಶ್ರೀಮಂತಗೊಳಿಸಿದ್ದು ಅವರ ಈ ಕೊಡುಗೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ