ಆ್ಯಪ್ನಗರ

ಕರಾವಳಿಯಲ್ಲಿ ಸಂಭ್ರಮದ ಈದುಲ್‌ ಫಿತ್ರ್‌

ರಮ್ಜಾನ್‌ ತಿಂಗಳ ಉಪವಾಸದ ಬಳಿಕ ಶವ್ವಾಲ್‌ ತಿಂಗಳ ಆರಂಭದ ದಿನ ಈದುಲ್‌ ಫಿತ್ರ್‌ ಹಬ್ಬವನ್ನು ಮಂಗಳೂರು ಸಹಿತ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಂಭ್ರಮ, ಸಡಗರದಿಂದ ಬುಧವಾರ ಆಚರಿಸಲಾಯಿತು.

Vijaya Karnataka 6 Jun 2019, 5:00 am
ಮಂಗಳೂರು : ರಮ್ಜಾನ್‌ ತಿಂಗಳ ಉಪವಾಸದ ಬಳಿಕ ಶವ್ವಾಲ್‌ ತಿಂಗಳ ಆರಂಭದ ದಿನ ಈದುಲ್‌ ಫಿತ್ರ್‌ ಹಬ್ಬವನ್ನು ಮಂಗಳೂರು ಸಹಿತ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಂಭ್ರಮ, ಸಡಗರದಿಂದ ಬುಧವಾರ ಆಚರಿಸಲಾಯಿತು.
Vijaya Karnataka Web 5 my edi (3)


ಮಂಗಳೂರು ಬಾವುಟಗುಡ್ಡ ಈದ್ಗಾ ಮಸೀದಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಖಾ ಅಹ್ಮದ್‌ ಮುಸ್ಲಿಯಾರ್‌ ನೇತೃತ್ವದಲ್ಲಿ ಈದ್‌ ನಮಾಝ್‌, ಪ್ರವಚನ ಮತ್ತು ಸಂದೇಶ ನಡೆಯಿತು. ಈದ್‌ ನಮಾಝ್‌ ಬಳಿಕ ಮಸೀದಿ ಆವರಣದಲ್ಲಿ ಸರ್ವಧರ್ಮೀಯ ಗಣ್ಯರ ಸಮ್ಮುಖದಲ್ಲಿ ಸೌಹಾರ್ದ ಸಭೆ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್‌, ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಐವನ್‌ ಡಿಸೋಜ, ಖಾಝಿ ತ್ವಾಖಾ ಅಹ್ಮದ್‌ ಮುಸ್ಲಿಯಾರ್‌, ಮಸ್ಜಿದ್‌ ಝೀನತ್‌ ಬಕ್ಷ್‌ ಅಧ್ಯಕ್ಷ ವೈ.ಅಬ್ದುಲ್ಲ ಕುಂಞಿ ಹಬ್ಬದ ಸಂದೇಶ ನೀಡಿದರು. ಮಾಜಿ ಶಾಸಕ ಜೆ.ಆರ್‌.ಲೋಬೊ, ಸಂತ ಅಲೋಶಿಯಸ್‌ ಕಾಲೇಜು ಪ್ರಿನ್ಸಿಪಾಲ್‌ ಫಾ. ಪ್ರವೀಣ್‌ ಮಾರ್ಟಿಸ್‌, ಮಂಗಳೂರು ಪೊಲೀಸ್‌ ಕಮೀಷನರ್‌ ಸಂದೀಪ್‌ ಪಾಟೀಲ್‌, ಡಿಸಿಪಿ ಹನುಮಂತರಾಯ ಮತ್ತಿತರರು ಉಪಸ್ಥಿತರಿದ್ದರು. ಮಂಗಳೂರಿನ ವಿವಿಧ ಮಸೀದಿಗಳಲ್ಲಿ ವಿಶೇಷ ನಮಾಝ್‌, ಪ್ರವಚನ ಬಳಿಕ ಪರಸ್ಪರ ಹಸ್ತಲಾಘವ, ಆಲಿಂಗನ ಮೂಲಕ ಹಬ್ಬದ ಶುಭಾಶಯ ವಿನಿಮಯ ಹಾಗೂ ಮನೆಗಳಲ್ಲಿ ಹಬ್ಬದ ಸಂಭ್ರಮ ನಡೆಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ