ಆ್ಯಪ್ನಗರ

SSLC ಪರೀಕ್ಷೆಯನ್ನು ಹಬ್ಬದಂತೆ ಸಂಭ್ರಮಿಸಿದರು!

ವಿದ್ಯಾರ್ಥಿಗಳು ಶೈಕ್ಷಣಿಕ ಬದುಕಿನಲ್ಲಿ ಸಾಕಷ್ಟು ಪರೀಕ್ಷೆಗಳನ್ನು ಬರೆದಿದ್ದಾರೆ. ಆದರೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಎಂದಾಗ ಅವರಿಗೆ ಭಯ ಶುರುವಾಗುತ್ತದೆ.

Vijaya Karnataka Web 21 Mar 2019, 11:23 am
ಮಂಗಳೂರು: ವಿದ್ಯಾರ್ಥಿಗಳು ಶೈಕ್ಷಣಿಕ ಬದುಕಿನಲ್ಲಿ ಸಾಕಷ್ಟು ಪರೀಕ್ಷೆಗಳನ್ನು ಬರೆದಿದ್ದಾರೆ. ಆದರೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಎಂದಾಗ ಅವರಿಗೆ ಭಯ ಶುರುವಾಗುತ್ತದೆ. ಬದುಕಿನ ಬಹುದೊಡ್ಡ ಪರೀಕ್ಷೆ ಎಂದುಕೊಂಡು ಬಿಡುತ್ತಾರೆ. ಆದರೆ ಇದನ್ನು ಸಂಭ್ರಮ ಎನ್ನುವ ದೃಷ್ಟಿಯಲ್ಲಿ ನೋಡುವ ವಾತಾವರಣವನ್ನು ಪರೀಕ್ಷಾ ಕೇಂದ್ರವೊಂದರಲ್ಲಿ ಮಾಡಲಾಗಿದೆ.

ಪರೀಕ್ಷಾ ಭಯ ತೊಲಗಿಸುವ ಸದುದ್ದೇಶದಿಂದ ಬಂಟ್ವಾಳದ ಮೊಂಟೆಪದವು ಕೇಂದ್ರದಲ್ಲಿ ಹಬ್ಬದ ವಾತಾವರಣ ನಿರ್ಮಿಸಲಾಗಿತ್ತು. ಡೋಲು ಬಾರಿಸುತ್ತ ವಿದ್ಯಾರ್ಥಿಗಳಿಗೆ ಗುಲಾಬಿ ಹೂ ನೀಡಿ ಪರೀಕ್ಷಾ ಕೇಂದ್ರಕ್ಕೆ ಬರಮಾಡಿಕೊಳ್ಳಲಾಯಿತು. ಸರ್ವಧರ್ಮದ ಗುರುಗಳು ಆಗಮಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಪರೀಕ್ಷೆಗೂ ಮುನ್ನ ವಿದ್ಯಾರ್ಥಿಗಳಿಗೆ ಬೆಳಗಿನ ಉಪಹಾರ ವಿತರಿಸಲಾಯಿತು.

ಇಂದಿನಿಂದ (21-3-2019) ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಾರಂಭವಾಗಿದ್ದು, ರಾಜ್ಯಾದ್ಯಂತ ಒಟ್ಟು 2,847 ಪರೀಕ್ಷಾ ಕೇಂದ್ರಗಳಲ್ಲಿ 8,41,666 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸುತ್ತಿದ್ದಾರೆ.

ಪರೀಕ್ಷೆ ಎಂದರೆ ಹಬ್ಬ ಎಂದೇ ವಿದ್ಯಾರ್ಥಿಗಳು ಪರಿಗಣಿಸಬೇಕು. ವಿಶೇಷವಾಗಿ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಬಂದಾಗ ಅವರನ್ನು ನಗುಮೊಗದಿಂದ ಸ್ವಾಗತಿಸಿ ಅವರು ಕುಳಿತುಕೊಳ್ಳುವ ಸ್ಥಳ ತೋರಿಸುವ ಕೆಲಸ ಮಾಡಬೇಕು. ಇದರ ಜತೆಯಲ್ಲಿ ಯಾವುದೇ ರೀತಿಯಲ್ಲೂ ಪರೀಕ್ಷೆ ಬರೆಯುವಾಗ ವಿದ್ಯಾರ್ಥಿಗೆ ಯಾವುದೇ ರೀತಿಯ ಭಂಗವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನೀಡಲಾಗಿದೆ.
-ವೈ. ಶಿವರಾಮಯ್ಯ, ಡಿಡಿಪಿಐ, ದ.ಕ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ