ಆ್ಯಪ್ನಗರ

ವಿಟ್ಲದ ಒಂಟಿ ಮಹಿಳೆಯ ಮನೆಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿ ದರೋಡೆಗೈದ ಕಿರಾತಕರು..!

ಮಹಿಳೆಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಲ್ಲದೇ, ಬಳಿಕ ಬಾಯಿಗೆ ಬಟ್ಟೆ ತುರುಕಿ, ಕೈ ಕಾಲು ಕಟ್ಟಿ ಹಾಕಿದ್ದಾರೆ. ಬಳಿಕ ಮನೆಯೊಳಗಡೆ ಚಿನ್ನಕ್ಕಾಗಿ ಹುಡುಕಾಟ ನಡೆಸಿದ್ದು, ಬಳಿಕ ಕುತ್ತಿಗೆಯಲ್ಲಿರುವ ಬೆಳ್ಳಿಯ ಸರ ಎಗರಿಸಿ, ಮನೆ ಮುಂಭಾಗದ ಬಾಗಿಲಿಗೆ ಬೀಗ ಹಾಕಿ ಪರಾರಿಯಾಗಿದ್ದಾರೆ.

Vijaya Karnataka Web 9 Oct 2020, 4:03 pm
ವಿಟ್ಲ: ಒಂಟಿ ಮಹಿಳೆಯಿರುವ ಮನೆಗೆ ನುಗ್ಗಿದ ಬೆಳ್ಳಂ ಬೆಳಿಗ್ಗೆ ಕಿರಾತಕರು ಮಹಿಳೆಗೆ ಹಲ್ಲೆ ನಡೆಸಿ, ಕೈಕಾಲು ಕಟ್ಟಿ ಹಾಕಿ ದರೋಡೆ ಮಾಡಿರುವ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಮೇಗಿನಪೇಟೆಯಲ್ಲಿ ನಡೆದಿದೆ.
Vijaya Karnataka Web robbery


ಮೇಗಿನಪೇಟೆ ನಿವಾಸಿ, ಒಂಟಿಯಾಗಿ ಜೀವನ ನಡೆಸುತ್ತಿರುವ ಲಲಿತಾ ಅವರ ಮನೆಯ ಮುಂಬಾಗಿಲು ಮೂಲಕ ನುಗ್ಗಿದ ದುಷ್ಕರ್ಮಿಗಳು ಮಹಿಳೆಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಲ್ಲದೇ, ಬಳಿಕ ಬಾಯಿಗೆ ಬಟ್ಟೆ ತುರುಕಿ, ಕೈ ಕಾಲು ಕಟ್ಟಿ ಹಾಕಿದ್ದಾರೆ. ಬಳಿಕ ಮನೆಯೊಳಗಡೆ ಚಿನ್ನಕ್ಕಾಗಿ ಹುಡುಕಾಟ ನಡೆಸಿದ್ದು, ಬಳಿಕ ಕುತ್ತಿಗೆಯಲ್ಲಿರುವ ಬೆಳ್ಳಿಯ ಸರ ಎಗರಿಸಿ, ಮನೆ ಮುಂಭಾಗದ ಬಾಗಿಲಿಗೆ ಬೀಗ ಹಾಕಿ ಪರಾರಿಯಾಗಿದ್ದಾರೆ.

ಎಂ.ಬಿ.ಪಾಟೀಲ್ ಗೂಂಡಾಗಿರಿ ರಾಜಕಾರಣ ಬಿಡಬೇಕು; ನಳಿನ್ ಕುಮಾರ್ ಕಟೀಲ್

ಬೆಳಿಗ್ಗೆ ಜೋರಾಗಿ ಸುರಿಯುತ್ತಿರುವ ಮಳೆಯ ವೇಳೆ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದ್ದು, ಮಹಿಳೆಯ ಮುಖಕ್ಕೆ ಮತ್ತು ಎದೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ವಿಟ್ಲ ಎಸೈ ವಿನೋದ್ ಕುಮಾರ್ ರೆಡ್ಡಿ ಮತ್ತು ಸಿಬ್ಬಂದಿಗಳು ಭೇಟಿ ನೀಡಿದ್ದು, ಪಕ್ಕದ ಸಿಸಿ ಕ್ಯಾಮೆರಾವನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ