ಆ್ಯಪ್ನಗರ

ಮಂಗಳೂರಿನಲ್ಲಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ: ಪೊಲೀಸ್ ಕರ್ತವ್ಯಕ್ಕೂ ಅಡ್ಡಿ; 5 ಮಂದಿಯ ಬಂಧನ!

ಯೆನೆಪೋಯ ಪದವಿ ಕಾಲೇಜಿನ ವಿದ್ಯಾರ್ಥಿಗಳ ಎರಡು ತಂಡಗಳ ನಡುವೆ ಹೊಡೆದಾಟ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ 9 ಮಂದಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ.

Vijaya Karnataka Web 3 Dec 2021, 9:45 am
ಮಂಗಳೂರು: ನಗರದ ಯೆನೆಪೋಯ ಪದವಿ ಕಾಲೇಜಿನ ವಿದ್ಯಾರ್ಥಿಗಳ ಎರಡು ತಂಡಗಳ ನಡುವೆ ಹೊಡೆದಾಟ ನಡೆದಿದ್ದು, ಈ ಸಂದರ್ಭ ಸ್ಥಳಕ್ಕೆ ತೆರಳಿದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಕೃತ್ಯವೂ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿ 9 ಮಂದಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ.
Vijaya Karnataka Web ಬಂಧನ
ಸಾಂದರ್ಭಿಕ ಚಿತ್ರ


ಪ್ರಕರಣದಲ್ಲಿ 7 ಮಂದಿ ವಿದ್ಯಾರ್ಥಿಗಳು ಹಾಗೂ 5 ಮಂದಿ ಪೊಲೀಸರು ಗಾಯಗೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಆದಿತ್ಯ, ಕೆನ್ ಜಾನ್ಸನ್, ಮುಹಮ್ಮದ್, ಅಬ್ದುಲ್ ಶಾಹಿದ್, ವಿಮಲ್, ಫಹಾದ್ , ಅಬು ತಹರ್, ಮುಹಮ್ಮದ್ ನಾಸಿಫ್, ಆದರ್ಶ ಎಂದು ಗುರುತಿಸಲಾಗಿದೆ. ಎರಡು ಘಟನೆಗೆ ಸಂಬಂಧಿಸಿ ಒಟ್ಟು 19 ಮಂದಿ ವಿರುದ್ದ ಪ್ರಕರಣ ದಾಖಲಾಗಿದೆ.

ಪ್ರಕರಣ ವಿವರ
ಯೆನೆಪೋಯ ಕಾಲೇಜ್ ನಲ್ಲಿ 03 ನೇ ವರ್ಷದ ಬಿಎಸ್ಸಿ ಹಾಸ್ಪಿಟಾಲಿಟಿ ಸೈನ್ಸ್ ವಿದ್ಯಾರ್ಥಿ ಕೇರಳ ಮೂಲದ
ಆದರ್ಶ ಪ್ರೇಮಕುಮಾರ್ ನಿನ್ನೆ ಸಂಜೆ ಸುಮಾರು 7ಗಂಟೆಗೆ ವೇಳೆಗೆ ತನ್ನ ಸ್ನೇಹಿತ ಅಭಿರಾಮಿಯನ್ನು ಭೇಟಿ ಮಾಡಿ ಮಾತನಾಡುತ್ತಿರುವಾಗ ಸಿನಾನ್ ಇತರ 8 ಜನ ಇಂಟರ್ ಲಾಕ್ ಹಾಗೂ ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ. ಇದರಿಂದ ಪ್ರೇಮ್ ಕುಮಾರ್ ಎಡಕೈಗೆ ಗಾಯ ಆಗಿದ್ದು, ಮೊಹಮ್ಮದ್ ನಸಿಪ್ ಗೂ ಗಾಯವಾಗಿದೆ.
5.59 ಕೆಜಿ ಚಿನ್ನದ ಗಟ್ಟಿ ಕದ್ದ ಗ್ಯಾಂಗ್‌ ಬಂಧನ..! ದರೋಡೆಗೆ ಸಖತ್‌ ಪ್ಲಾನ್‌ ಹಾಕಿದ್ದ ಕಳ್ಳರು
ಗಲಾಟೆ ಬಿಡಿಸಲು ಬಂದಿದ್ದ ಪಿರ್ಯಾದಿ ಸ್ನೇಹಿತರಾದ ಅದೇ ಹಾಸ್ಟೇಲ್ ನ ಶನಿನ್ ಮತ್ತು ಶ್ರವಣರವರಿಗೆ ಜೀವ ಬೆದರಿಕೆ ಒಡ್ಡಿರುವುದಾಗಿ ಆದರ್ಶ ದೂರು ನೀಡಿದ್ದ. ಗಲಾಟೆ ಬಿಡಿಸಲು ಬಂದಿದ್ದ ತನ್ನ ಸ್ನೇಹಿತರಾದ ಶನಿನ್ ಮತ್ತು ಶ್ರವಣ್ ರವರು ಗುಜ್ಜರಕರೆ ಬಳಿ ಹಾಸ್ಟೆಲ್ ನಲ್ಲಿ ವಾಸ್ತವ ಇದ್ದು ಅವರು ಅಪಾಯದಲ್ಲಿದ್ದು ರಕ್ಷಣೆ ಮಾಡಲು ಕೋರಿಕೊಂಡಿದ್ದ. ಅದರಂತೆ ರಾತ್ರಿ 10 ಗಂಟೆ ಸುಮಾರಿಗೆ ಪಿಎಸ್‌ಐ ಶೀತಲ್ ಹಾಗೂ ಸಿಬ್ಬಂದಿಗಳು ಹಾಸ್ಟೆಲ್ ಬಳಿ ಹೋದಾಗ ಹಾಸ್ಟೆಲ್ ನ ನಿವಾಸಿ ವಿದ್ಯಾರ್ಥಿಗಳು ಇಂಟರ್ ಲಾಕ್, ಕಲ್ಲು ಹಾಗೂ ಕುರ್ಚಿಗಳನ್ನು ಪೊಲೀಸರತ್ತ ಎಸೆದು ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿದ್ದಾರೆ.
ಮಂಗಳೂರಿನಲ್ಲಿ ನಾಗನ ಕಲ್ಲಿಗೆ ಹಾನಿ: 8 ಮಂದಿ ಆರೋಪಿಗಳ ಬಂಧನ!
ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಪ್ರಸಕ್ತ ಪರಿಸ್ಥಿತಿ ಶಾಂತವಾಗಿದೆ ಎಂದು ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸ್ ಆಯುಕ್ತ ಎನ್ . ಶಶಿಕುಮಾರ್ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ