ಆ್ಯಪ್ನಗರ

ಸಾಲಮನ್ನಾ ಬೇಡಿಕೆ ಈಡೇರಿಸದಿದ್ದರೆ ಮೀನುಗಾರಿಕೆ ಸ್ಥಗಿತ : ಮೀನುಗಾರರ ಎಚ್ಚರಿಕೆ

ಮೀನುಗಾರರ ಬ್ಯಾಂಕ್‌ ಸಾಲ ಮನ್ನಾ ಮಾಡಬೇಕು ಎಂದು ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸರಕಾರವನ್ನು ಒತ್ತಾಯಿಸಿದ್ದು, ನಮ್ಮ ಬೇಡಿಕೆಗಳನ್ನು ಸರಕಾರ ಈಡೇರಿಸದಿದ್ದರೆ ಸಂಪೂರ್ಣ ಮೀನುಗಾರಿಕೆಯನ್ನು ಸ್ಥಗಿತಗೊಳಿಸಿ ಅನಿರ್ದಿಷ್ಟ ಕಾಲ ಮುಷ್ಕರ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದೆ.

Agencies 24 Feb 2021, 8:36 pm

ಹೈಲೈಟ್ಸ್‌:

  • ಮೀನುಗಾರರ ಬ್ಯಾಂಕ್‌ ಸಾಲ ಮನ್ನಾ ಮಾಡುವಂತೆ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಒತ್ತಾಯ
  • ಬೇಡಿಕೆ ಈಡೇರಿಸದಿದ್ದರೆ ಸಂಪೂರ್ಣ ಮೀನುಗಾರಿಕೆಯನ್ನು ಸ್ಥಗಿತಗೊಳಿಸಿ ಅನಿರ್ದಿಷ್ಟ ಕಾಲ ಮುಷ್ಕರದ ಎಚ್ಚರಿಕೆ
  • ಕಳೆದ 5 ವರ್ಷಗಳಿಂದ ಭೀಕರ ಮತ್ಸ್ಯಕ್ಷಾಮ ಎದುರಾಗಿದ್ದು, ಮೀನುಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆ
  • ಮೀನುಗಾರಿಕೆ ಸಂಬಂಧಪಟ್ಟ ಸಾಲಗಳಿಗೆ ಕನಿಷ್ಠ ಶೇ.4ರಷ್ಟು ಬಡ್ಡಿದರದಲ್ಲಿ ಸಾಲ ನೀಡುವಂತೆಯೂ ಬೇಡಿಕೆ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web fishing boats
ಬೆಂಗಳೂರು: ಕಳೆದ ಐದು ವರ್ಷಗಳಿಂದ ಭೀಕರ ಮತ್ಸ್ಯಕ್ಷಾಮ ಎದುರಾಗಿದ್ದು, ಮೀನುಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಮೀನುಗಾರರ ಬ್ಯಾಂಕ್‌ ಸಾಲ ಮನ್ನಾ ಮಾಡಬೇಕು ಎಂದು ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸರಕಾರವನ್ನು ಒತ್ತಾಯಿಸಿದೆ.
ನಮ್ಮ ಬೇಡಿಕೆಗಳನ್ನು ಸರಕಾರ ಈಡೇರಿಸದಿದ್ದರೆ ಸಂಪೂರ್ಣ ಮೀನುಗಾರಿಕೆಯನ್ನು ಸ್ಥಗಿತಗೊಳಿಸಿ ಅನಿರ್ದಿಷ್ಟ ಕಾಲ ಮುಷ್ಕರ ಮಾಡಬೇಕಾಗುತ್ತದೆ ಎಂದು ಆಳಸಮುದ್ರ ಮೀನುಗಾರರ ಸಂಘದ ಅಧ್ಯಕ್ಷ ಅಶೋಕ್‌ ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಎಚ್ಚರಿಕೆ ನೀಡಿದರು.

ಕರ್ನಾಟಕ ಕರಾವಳಿಯಲ್ಲಿ 4,750 ಯಾಂತ್ರಿಕ ಬೋಟ್‌ಗಳು, 7,500ಕ್ಕೂ ಹೆಚ್ಚು ನಾಡದೋಣಿಗಳು ಕೆಲಸ ಮಾಡುತ್ತಿದ್ದು, ಸುಮಾರು 5 ಸಾವಿರ ಕೋಟಿಗೂ ಹೆಚ್ಚು ವಿದೇಶಿ ವಿನಿಮಯ ಗಳಿಸುತ್ತಿದೆ. ಆದರೆ ಭೀಕರ ಮತ್ಸ್ಯ ಕ್ಷಾಮದಿಂದ ಮೀನುಗಾರರು ಉದ್ಯೋಗ ಕಳೆದುಕೊಂಡಿದ್ದಾರೆ. ಮೀನುಗಾರಿಕೆ ಸಂಬಂಧಪಟ್ಟ ಸಾಲಗಳಿಗೆ ಕನಿಷ್ಠ ಶೇ.4ರಷ್ಟು ಬಡ್ಡಿದರದಲ್ಲಿ ಸಾಲ ನೀಡಬೇಕು ಎಂದು ಒತ್ತಾಯಿಸಿದರು.

ಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್‌, ಉಪಾಧ್ಯಕ್ಷ ದೇವದಾಸ್‌ ಬೋಳೂರು, ಸುಧಾಕರ್‌ ಕುಂದನ್‌ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ