ಆ್ಯಪ್ನಗರ

ಮಾಜಿ ಕೇಂದ್ರ ಸಚಿವ ವಿ. ಧನಂಜಯ ಕುಮಾರ್ ನಿಧನ

ಮಾಜಿ ಕೇಂದ್ರ ಸಚಿವ, ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಹಿರಿಯ ನಾಯಕ ವಿ. ಧನಂಜಯ ಕುಮಾರ್‌ ಸೋಮವಾರ ಮಧ್ಯಾಹ್ನ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

Vijaya Karnataka Web 4 Mar 2019, 4:27 pm
ಮಂಗಳೂರು: ಕೇಂದ್ರದ ಮಾಜಿ ಸಚಿವ ವಿ. ಧನಂಜಯ ಕುಮಾರ್ ಇಂದು ಮಧ್ಯಾಹ್ನ 1.30ರ ವೇಳೆಗೆ ಮಂಗಳೂರಿನ ಯುನಿಟಿ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಕಳೆದ ಕೆಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.
Vijaya Karnataka Web Dhananjay Kumar


ನಾಳೆ (ಮಂಗಳವಾರ) ಬೆಳಗ್ಗೆ ‌7 ಗಂಟೆಯಿಂದ ‌10 ರವರೆಗೆ ನಗರದ ಕದ್ರಿ‌ ಕಂಬಳದಲ್ಲಿ ಇರುವ ಅವರ ನಿವಾಸದಲ್ಲಿ ‌ಸಾರ್ವಜನಿಕರಿಗೆ‌ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಬಳಿಕ ಅವರ ಮೃತ‌ದೇಹವನ್ನು ವೇಣೂರಿಗೆ ಕೊಂಡೊಯ್ದು ಅಂತಿಮ ಸಂಸ್ಕಾರ ನಡೆಸಲಾಗುವುದು ಎಂದು ಮೂಲಗಳು ಹೇಳಿವೆ.

ಧನಂಜಯ ಕುಮಾರ್ ಅವರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸಂಪುಟದಲ್ಲಿ ಸಚಿವರಾಗಿದ್ದರು. ಮಂಗಳೂರು ಲೋಕಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಬಿಜೆಪಿ ಸಂಸದರಾಗಿ ಚುನಾಯಿತರಾಗಿದ್ದರು.

ವಿ ಧನಂಜಯ ಕುಮಾರ್: ಕೈ ಭದ್ರಕೋಟೆಯಲ್ಲಿ ಮೊದಲು ಕಮಲ ಅರಳಿಸಿದ ನಾಯಕ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ