ಆ್ಯಪ್ನಗರ

ಕೊರೊನಾ ಭೀತಿ; ಮಾಜಿ ಸಚಿವ ರಮಾನಾಥ ರೈ ಹೋಂ ಕ್ವಾರೆಂಟೈನ್..!

ಮಾಜಿ ಸಚಿವ ರಮಾನಾಥ ರೈ ಅವರು ಐವನ್ ಡಿಸೋಜಾ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದರು. ಹೀಗಾಗಿ ಅವರಿಗೂ ಕೂಡ ಕೊರೊನಾ ಭೀತಿ ಎದುರಾಗಿದ್ದು ಈ ಹಿನ್ನೆಲೆ ರಮಾನಾಥ ರೈ ಅವರು ಸ್ವಯಂ ಕ್ವಾರೆಂಟೈನ್‌ಗೆ ಒಳಗಾಗಿದ್ದಾರೆ.

Vijaya Karnataka Web 3 Aug 2020, 11:42 am
ಮಂಗಳೂರು: ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜಾ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿರುವುದರಿಂದ ಅನೇಕ ಕಾಂಗ್ರೆಸ್‌ ನಾಯಕರಿಗೆ ಭೀತಿ ಎದುರಾಗಿದ್ದು, ಇದೀಗ ಅವರ ಜೊತೆ ಸಂಪರ್ಕ ಸಾಧಿಸಿದ್ದ ಅನೇಕರು ಆತಂಕಕ್ಕೆ ಒಳಗಾಗಿದ್ದಾರೆ.
Vijaya Karnataka Web Ramanath rai


ಕಳೆದ ವಾರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಂಗಳೂರು ಪ್ರವಾಸ ಹಮ್ಮಿಕೊಂಡಿದ್ದರು. ಈ ವೇಳೆ ಐವನ್ ಡಿಸೋಜಾ ಸೇರಿದಂತೆ ಜಿಲ್ಲೆಯ ಬಹುತೇಕ ಕಾಂಗ್ರೆಸ್‌ ನಾಯಕರು ಡಿಕೆಶಿ ಜೊತೆ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. ಆದರೆ ಮರುದಿನವೇ ಐವನ್ ಡಿಸೋಜಾಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಹೀಗಾಗಿ ಆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಎಲ್ಲರಿಗೂ ಕೊರೊನಾ ಭೀತಿ ಎದುರಾಗಿದೆ.

ಮಾಜಿ ಎಂಎಲ್‌ಸಿ ಐವನ್‌ ಡಿಸೋಜ ಅವರಿಗೆ ಪಾಸಿಟಿವ್: ಕಾಂಗ್ರೆಸ್ ಮುಖಂಡರಿಗೆ ಆತಂಕ!

ಹೀಗಾಗಿ ಡಿಕೆ ಶಿವಕುಮಾರ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮಾಜಿ ಸಚಿವ ರಮಾನಾಥ ರೈ ಅವರು ಐವನ್ ಡಿಸೋಜಾ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದರು. ಹೀಗಾಗಿ ಅವರಿಗೂ ಕೂಡ ಕೊರೊನಾ ಭೀತಿ ಎದುರಾಗಿದ್ದು ಈ ಹಿನ್ನೆಲೆ ರಮಾನಾಥ ರೈ ಅವರು ಸ್ವಯಂ ಕ್ವಾರೆಂಟೈನ್‌ಗೆ ಒಳಗಾಗಿದ್ದಾರೆ.

'ಬಿಜೆಪಿಗರೇ, ನೋಡ್ತಿರಿ.. ನಿಮ್ಮನ್ನು ಜನರೇ ಹಳೆ ಪೊರಕೆಯಲ್ಲಿ ಕ್ಲೀನ್ ಮಾಡ್ತಾರೆ' : ಡಿ.ಕೆ.ಶಿವಕುಮಾರ್

ಈ ಬಗ್ಗೆ ನಾನು ಕೆಲವು ದಿನಗಳ ಕಾಲ ಸ್ವಯಂ ಕ್ವಾರಂಟೈನ್‌ಗೆ ಒಳಗಾಗಿದ್ದೇನೆ ಎಂದಿರುವ ರೈ, ಈಗಾಗಲೇ ನಿಗದಿಯಾಗಿರುವ ಜನ ಸಾಮಾನ್ಯರ ಭೇಟಿ, ಕ್ಷೇತ್ರದಲ್ಲಿನಿಗದಿಯಾಗಿದ್ದ ನಾನಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ ಕ್ಷೇತ್ರದ ಜನರು ಯಾವುದೇ ಸಮಸ್ಯೆಗಳಿದ್ದರೆ ದೂರವಾಣಿ ಮೂಲಕ ನನ್ನನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.


ಇದೇ ವೇಳೆ ಐವನ್‌ ಡಿಸೋಜ ಅವರ ಜತೆ ಪ್ರಾಥಮಿಕ ಸಂಪರ್ಕದಲ್ಲಿದ್ದವರಿಗೆ ಕೆಮ್ಮು, ಜ್ವರ ಮುಂತಾದ ಸೋಂಕಿನ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡಿದ್ದಾರೆ. ಜತೆ ಐವನ್‌ ಡಿಸೋಜ ಹಾಗೂ ಕೋವಿಡ್‌ ಸೋಂಕಿತರೆಲ್ಲರೂ ಶೀಘ್ರದಲ್ಲಿ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಅಂಗಾರರಿಗೆ ಮಂತ್ರಿ ಸ್ಥಾನ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿದ್ದು - ನಳಿನ್ ‌ಕುಮಾರ್‌

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ