ಆ್ಯಪ್ನಗರ

ಪಿಎಫ್ಐ ಮಾಜಿ ರಾಷ್ಟ್ರೀಯ ಅಧ್ಯಕ್ಷ ಕೆ.ಎಂ.ಶರೀಫ್ ಇನ್ನಿಲ್ಲ!

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಮಾಜಿ ರಾಷ್ಟ್ರೀಯ ಅಧ್ಯಕ್ಷ ಕೆ.ಎಂ. ಶರೀಫ್(56) ಕೆಲವು ದಿನಗಳ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧರಾಗಿದ್ದಾರೆ. ​​ ಶ್ವಾಸಕೋಶ, ರಕ್ತದೊತ್ತಡ, ಮಧುಮೇಹ, ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

Vijaya Karnataka Web 22 Dec 2020, 1:43 pm
ಮಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮಾಜಿ ರಾಷ್ಟ್ರೀಯ ಅಧ್ಯಕ್ಷ ಕೆ.ಎಂ.ಶರೀಫ್ ಅವರು ಡಿ.22ರಂದು ನಿಧನರಾದರು.
Vijaya Karnataka Web ಕೆ.ಎಂ. ಶರೀಪ್


ಶ್ವಾಸಕೋಶ, ರಕ್ತದೊತ್ತಡ, ಮಧುಮೇಹ, ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ನಿಧನರಾಗಿದ್ದಾರೆ.

ಬಂಟ್ವಾಳ ತಾಲೂಕಿನ ಮಿತ್ತಬೈಲ್‌ನ ಶರೀಫ್ ಅವರು ಕೆಎಫ್‌ಡಿ ಸ್ಥಾಪನೆ ಕಾಲದಲ್ಲಿ ಶ್ರಮಿಸಿದ್ದು, ಬಳಿಕ ಕೆಎಫ್‌ಡಿ, ಪಿಎಫ್ಐ ರಾಜ್ಯಾಧ್ಯಕ್ಷ, ರಾಷ್ಟ್ರೀಯ ಅಧ್ಯಕ್ಷರಾಗಿದ್ದರು. ವರದಕ್ಷಿಣೆ ವಿರುದ್ಧ ಹೋರಾಟ, ಮಕ್ಕಳ ಶೈಕ್ಷಣಿಕ ನೆರವು, ಸಂಘಟನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.

ಖ್ಯಾತ ಧಾರ್ಮಿಕ ವಿದ್ವಾಂಸ ದಿವಂಗತ ಮಿತ್ತಬೈಲ್ ಅಬ್ದುಲ್ ಹಾಜಿ ಮತ್ತು ನಫೀಸಾ ದಂಪತಿಯ ಪುತ್ರರಾದ ಕೆ.ಎಂ.ಶರೀಫ್ 1964ಸೆ. 1 ರಂದು ಜನಿಸಿದ್ದರು.

ಕೈಕಂಬ ಮುಹಮ್ಮದ್ ಶರೀಪ್ ಆದ ಅವರು ಊರಿನಲ್ಲಿ 'ಮುಹಮ್ಮದ್' ಎಂದೇ ಪರಿಚಿತರಾಗಿದ್ದರು. ಬಾಲ್ಯದಲ್ಲಿಯೇ ಸಾಮಾಜಿಕ ಕಳಕಳಿ ಹೊಂದಿದ್ದ ಅವರು ಸಮಸ್ತ ಕೇರಳದ ಆಧೀನ ಸಂಘಟನೆಯಲ್ಕಿ ತನ್ನನ್ನು ತೊಡಗಿಸಿಕೊಂಡಿದ್ದರು. ಬಿಎಸ್ ಸಿ ಪದವೀಧರ ಆಗಿರುವ ಅವರು ಖ್ಯಾತ ಧಾರ್ಮಿಕ ವಿದ್ವಾಂಸ ದಿ.ಮಿತ್ತಬೈಲ್ ಜಬ್ಬಾರ್ ಉಸ್ತಾದ್ ಅವರ ಶಿಷ್ಯರಾಗಿ ಧಾರ್ಮಿಕ ವಿದ್ಯಾಭ್ಯಾಸ ಪಡೆದಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ