ಆ್ಯಪ್ನಗರ

ದ.ಕ. ಜಿಲ್ಲೆಯಲ್ಲಿ ಜೂ.1ರಂದು ನಾಲ್ಕು ಕೊರೊನಾ ಪಾಸಿಟಿವ್‌ ಬೆಳಕಿಗೆ!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿಸೋಮವಾರ 4 ಮಂದಿಯಲ್ಲಿಕೊರೊನಾ ಸೋಂಕು ಪತ್ತೆಯಾಗಿದೆ ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 137ಕ್ಕೆ ಏರಿಕೆಯಾಗಿದೆ.

Vijaya Karnataka Web 2 Jun 2020, 11:39 am
ಮಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದೆ. ಜೂ. 1ರಂದು ಕೊರೊನಾ ಬುಲೆಟಿನ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 4 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 137ಕ್ಕೆ ಏರಿಕೆಯಾಗಿದೆ.
Vijaya Karnataka Web corona-agencies


ಸೋಮವಾರದ ವರದಿಯಲ್ಲಿ ದೃಢಪಟ್ಟ ಹೊಸ ಪ್ರಕರಣಗಳಲ್ಲಿ 50 ವರ್ಷದ ವ್ಯಕ್ತಿಯೊಬ್ಬರು ಗುಜರಾತ್‌ನಿಂದ ಬಂದಿದ್ದು, ಸಾಂಸ್ಥಿಕ ಕ್ವಾರಂಟೈನ್‌ನಲ್ಲಿದ್ದರು. ಅವರಿಗೆ ಪರೀಕ್ಷೆ ನಡೆಸಿದಾಗ ಕೊರೊನಾ ಪಾಸಿಟಿವ್‌ ವರದಿ ಬಂದಿದೆ. ಬೆಳ್ತಂಗಡಿಯ ಕಲ್ಲೇರಿಯ 45 ವರ್ಷದ ಮಹಿಳೆ ಉಸಿರಾಟದಲ್ಲಿಸಮಸ್ಯೆಯಿಂದ ಪರೀಕ್ಷೆ ಮಾಡಿಸಿದಾಗ ಕೊರೊನಾ ಸೋಂಕು ದೃಢಪಟ್ಟಿದೆ.

ಸುರತ್ಕಲ್‌ ನಿವಾಸಿ 24 ವರ್ಷದ ಮಹಿಳೆ ಫೆಬ್ರವರಿಯಲ್ಲಿ ಬಹರೈನ್‌ನಿಂದ ಪೂನಾ ಮಾರ್ಗವಾಗಿ ಸುರತ್ಕಲ್‌ಗೆ ಬಂದಿದ್ದರು. ಇದೀಗ ಮರಳಿ ಬಹರೈನ್‌ಗೆ ಹೋಗಲು ಸಿದ್ಧತೆ ನಡೆಸಿದ ಕಾರಣ ಖಾಸಗಿ ಪ್ರಯೋಗಾಲಯದಲ್ಲಿ ಪರೀಕ್ಷೆ ನಡೆಸಿದ್ದರು. ಇವರ ವರದಿಯಲ್ಲಿಕೊರೊನಾ ಪಾಸಿಟಿವ್‌ ಬಂದಿದೆ.

27 ವರ್ಷದ ವ್ಯಕ್ತಿಯೊಬ್ಬರು ವಿಮಾನ ಸಿಬ್ಬಂದಿಯಾಗಿದ್ದು, ಕರ್ತವ್ಯಕ್ಕೆ ಹಾಜರಾಗಬೇಕಾದರೆ ನಿಯಮಾವಳಿಯಂತೆ ತಮ್ಮ ಗಂಟಲಿನ ಮಾದರಿಯ ಪರೀಕ್ಷೆ ನಡೆಸಿದ್ದರು. ಸೋಮವಾರ ಇವರ ವರದಿ ಬಂದಿದ್ದು, ಕೊರೊನಾ ದೃಢಪಟ್ಟಿದೆ. ಜಿಲ್ಲಾಡಳಿತ ಕೂಡ ಕೊರೊನಾ ನಿಯಂತ್ರಣಕ್ಕೆ ಹರಸಾಹಸ ಪಡುತ್ತಿದೆ. ಕಟ್ಟು ನಿಟ್ಟಿನ ಕ್ರಮಗಳ ಮೂಲಕ ಕಂಟ್ರೋಲ್‌ಗೆ ಮುಂದಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ