ಆ್ಯಪ್ನಗರ

ಮಂಗಳೂರಿನ ನೂತನ ಬಿಷಪ್ ಆಗಿ ವಂ.ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ

ದಕ್ಷಿಣ ಕನ್ನಡದ ಕಿರೆಂ ಮೂಲದ, ಪ್ರಸ್ತುತ ರೋಮಿನ ಫೊಂತಿಫಿಕಾಲ್ ಅರ್ಬನ್ ವಿಶ್ವವಿದ್ಯಾನಿಲಯದಲ್ಲಿ ದೇವತಾಶಾಸ್ತ್ರದಲ್ಲಿ ಪ್ರಾಧ್ಯಾಪಕರಾಗಿರುವ ವಂ.ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಇವರನ್ನು ಮಂಗಳೂರು ಧರ್ಮಪ್ರಾಂತ್ಯದ ನೂತನ ಬಿಷಪ್ ಆಗಿ ಕ್ರೈಸ್ತರ ಪರಮೋಚ್ಛ ಧಾರ್ಮಿಕ ಗುರು ಪೋಪ್ ಫ್ರಾನ್ಸಿಸ್ ಇವರು ನೇಮಕ ಮಾಡಿದ್ದಾರೆ.

Vijaya Karnataka Web 3 Jul 2018, 5:08 pm
ಮಂಗಳೂರು: ದಕ್ಷಿಣ ಕನ್ನಡದ ಕಿರೆಂ ಮೂಲದ, ಪ್ರಸ್ತುತ ರೋಮಿನ ಫೊಂತಿಫಿಕಾಲ್ ಅರ್ಬನ್ ವಿಶ್ವವಿದ್ಯಾನಿಲಯದಲ್ಲಿ ದೇವತಾಶಾಸ್ತ್ರದಲ್ಲಿ ಪ್ರಾಧ್ಯಾಪಕರಾಗಿರುವ ವಂ.ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಇವರನ್ನು ಮಂಗಳೂರು ಧರ್ಮಪ್ರಾಂತ್ಯದ ನೂತನ ಬಿಷಪ್ ಆಗಿ ಕ್ರೈಸ್ತರ ಪರಮೋಚ್ಛ ಧಾರ್ಮಿಕ ಗುರು ಪೋಪ್ ಫ್ರಾನ್ಸಿಸ್ ಇವರು ನೇಮಕ ಮಾಡಿದ್ದಾರೆ.
Vijaya Karnataka Web Bishop


ಮಂಗಳವಾರ ಭಾರತಕ್ಕೆ ಬಂದ, ಯೇಸುವಿನ ಶಿಷ್ಯ ಸಂತ ತೋಮಸರ ಹಬ್ಬವಾಗಿದ್ದು, ಭಾರತೀಯ ಸಮಯ ಅಪರಾಹ್ನ 3.30 ಗಂಟೆಗೆ ವ್ಯಾಟಿಕನ್, ದೆಹಲಿ ಮತ್ತು ಮಂಗಳೂರಿನಲ್ಲಿ ಏಕಕಾಲದಲ್ಲಿ ಈ ಘೋಷಣೆ ಮಾಡಲಾಯಿತು.

1964 ಎಪ್ರಿಲ್ 27 ರಂದು ಜನಿಸಿದ ಶ್ರೀಯುತರು 1991 ಮೇ 06 ರಂದು ಬಿಜಯ್ ಚರ್ಚ್‌ನಲ್ಲಿ ಅಂದಿನ ಬಿಷಪ್ ಸಾಲ್ವಾದೊರ್ ಡಿಸೋಜ ಅವರಿಂದ ಗುರು ದೀಕ್ಷೆ ಪಡೆದು ನಂತರ ಉಡುಪಿ ಜಿಲ್ಲೆಯ ಮೂಡುಬೆಳ್ಳೆ ಹಾಗೂ ಮಂಗಳೂರಿನ ಮಿಲಾಗ್ರಿಸ್ ಚರ್ಚ್‌ಗಳಲ್ಲಿ ಸೇವೆ ಸಲ್ಲಿಸಿದ್ದರು.ಬಳಿಕ ಉನ್ನತ ವ್ಯಾಸಂಗಕ್ಕಾಗಿ ರೋಮ್‌ಗೆ ತೆರಳಿದ ಅವರು ಬೈಬಲ್ ಅಧ್ಯಯನದಲ್ಲಿ 2005ರಲ್ಲಿ ಫೊಂತಿಫಿಕಾಲ್ ಅರ್ಬನ್ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ಪಡೆದರು. ನಂತರ ಅಲ್ಲಿಯೇ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದರು. ಅವರು`ದಿ ಚರ್ಚ್: ಮಿಸ್ಟರಿ ಆಫ್ ಲವ್ ಎಂಡ್ ಕಮ್ಯೂನಿಯನ್' ಪುಸ್ತಕ ಬರೆದಿದ್ದಾರೆ.

1886ರಲ್ಲಿ ಮಂಗಳೂರು ಧರ್ಮಪ್ರಾಂತ್ಯವಾಗಿ ಅಸ್ತಿತ್ವಕ್ಕೆ ಬಂದ, ದಕ್ಷಿಣ ಕನ್ನಡ ಮತ್ತು ಕಾಸರಗೋಡಿನ ಸುಮಾರು 117 ಧರ್ಮಕೇಂದ್ರಗಳ ವ್ಯಾಪ್ತಿ ಹೊಂದಿರುವ ಈ ರೋಮನ್ ಕ್ರೈಸ್ತ ಧರ್ಮಪ್ರಾಂತ್ಯಕ್ಕೆ ಇವರು ಹತ್ತನೇ ಬಿಷಪ್ ಆಗಿ ಮಾರ್ಗದರ್ಶನ ನೀಡುವರು. (1674ರಿಂದ ಲೆಕ್ಕ ಹಾಕಿದರೆ 14 ನೇ ಬಿಷಪ್).

ಹಿಂದಿನ ಬಿಷಪ್ ಎಲೋಶಿಯಸ್ ಪಾವ್ಲ್ ಡಿಸೋಜ ಇವರು ಸುಮಾರು 20 ವರ್ಷ ಸೇವೆ ಸಲ್ಲಿಸಿ ಎರಡು ವರ್ಷಗಳ ಮೊದಲು ನಿವೃತ್ತರಾಗಿದ್ದು, ನೂತನ ಬಿಷಪರ ಅಧಿಕಾರ ಸ್ವೀಕಾರ ತನಕ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ