ಆ್ಯಪ್ನಗರ

ಮಂಗಳೂರು: ರೈಸ್ ಕುಕ್ಕರ್‌ನಲ್ಲಿಟ್ಟು ಚಿನ್ನ ಸಾಗಾಟಕ್ಕೆ ಯತ್ನ, 25 ಲಕ್ಷದ ಚಿನ್ನ ವಶಕ್ಕೆ!

ದುಬೈನಿಂದ ಏರ್‌ ಇಂಡಿಯಾ ಎಕ್ಸ್‌ ಪ್ರೆಸ್ ವಿಮಾನದಲ್ಲಿ ಮಂಗಳೂರಿಗೆ ಬಂದಿಳಿದ ವ್ಯಕ್ತಿಯೊಬ್ಬ ಅನುಮಾನಸ್ಪಾದ ರೀತಿಯಲ್ಲಿ ವರ್ತಿಸುತ್ತಿದ್ದ. ಈ ಹಿನ್ನೆಲೆ ಏರ್‌ಪೋರ್ಟ್‌ನ ಕಸ್ಟಮ್ಸ್‌ ಅಧಿಕಾರಿಗಳು ಆತನನ್ನು ತೀವ್ರ ತಪಾಸಣೆಗೊಳಪಡಿಸಿದ್ದಾರೆ. ಈ ವೇಳೆ ರೈಸ್‌ ಕುಕ್ಕರಿನ ಹೀಟಿಂಗ್ ಕಾಯಿಲ್ ಒಳಗಡೆ ಚಿನ್ನ ಬಚ್ಚಿಟ್ಟಿರುವುದು ಗೊತ್ತಾಗಿದೆ.

Vijaya Karnataka Web 9 Oct 2020, 11:27 am
ಮಂಗಳೂರು: ರೈಸ್‌ ಕುಕ್ಕರಿನಲ್ಲಿ ಚಿನ್ನ ಇಟ್ಟು ಸಾಗಿಸಲು ಯತ್ನಿಸಿದ ಖದೀಮನೊಬ್ಬನನ್ನು ಮಂಗಳೂರು ವಿಮಾನ ನಿಲ್ಧಾಣದಲ್ಲಿ ಬಂಧಿಸಲಾಗಿದೆ. ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಚಾಣಾಕ್ಷತನದಿಂದ ಆರೋಪಿಯನ್ನ ಅರೆಸ್ಟ್‌ ಮಾಡಿದ್ದಾರೆ.
Vijaya Karnataka Web Ej27EkNU0AAiO6B


ದುಬೈನಿಂದ ಏರ್‌ ಇಂಡಿಯಾ ಎಕ್ಸ್‌ ಪ್ರೆಸ್ ವಿಮಾನದಲ್ಲಿ ಮಂಗಳೂರಿಗೆ ಬಂದಿಳಿದ ವ್ಯಕ್ತಿಯೊಬ್ಬ ಅನುಮಾನಸ್ಪಾದ ರೀತಿಯಲ್ಲಿ ವರ್ತಿಸುತ್ತಿದ್ದ. ಈ ಹಿನ್ನೆಲೆ ಏರ್‌ಪೋರ್ಟ್‌ನ ಕಸ್ಟಮ್ಸ್‌ ಅಧಿಕಾರಿಗಳು ಆತನನ್ನು ತೀವ್ರ ತಪಾಸಣೆಗೊಳಪಡಿಸಿದ್ದಾರೆ. ಈ ವೇಳೆ ರೈಸ್‌ ಕುಕ್ಕರಿನ ಹೀಟಿಂಗ್ ಕಾಯಿಲ್ ಒಳಗಡೆ ಚಿನ್ನ ಬಚ್ಚಿಟ್ಟಿರುವುದು ಗೊತ್ತಾಗಿದೆ.

ಚಿನ್ನದ ಗಟ್ಟಿಯನ್ನು ಸರಿಯಾಗಿ ಕುಕ್ಕರಿನಲ್ಲಿ ಇಡುವಂತಹ ರೀತಿಯಲ್ಲಿ ವ್ಯವಸ್ಥೆ ಮಾಡಿಕೊಂಡಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಕಸ್ಟಮ್ಸ್‌ ಅಧಿಕಾರಿಗಳು 25, 45, 920 ಬೆಲೆಯ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಆರೋಪಿಯನ್ನ ಬಂಧಿಸಿದ್ದು ಕೋರ್ಟ್‌ಗೆ ಹಾಜರುಪಡಿಸಿದ್ದಾರೆ. ಮಂಗಳೂರು ವಿಮಾನ ನಿಲ್ಧಾಣದಲ್ಲಿ ಇಂತಹ ಹಲವು ಘಟನೆಗಳು ನಡೆದಿದೆ. ಮಧ್ಯಪ್ರಾಚ್ಯ ದೇಶಗಳಿಂದ ಕೆಲವು ಖದೀಮರು ಚಿನ್ನ ಸಾಗಿಸುವ ದುಸ್ಸಾಹಸಕ್ಕೆ ಕೈ ಹಾಕುತ್ತಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ