ಆ್ಯಪ್ನಗರ

ಸ್ವಾತಂತ್ರ್ಯ ದಿನಾಚರಣೆ: 'ಹಸಿರು ಕರ್ನಾಟಕ' ಯೋಜನೆಗೆ ದ.ಕ ಜಿಲ್ಲೆಯಲ್ಲಿ ಚಾಲನೆ

ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಬಜೆಟ್ ಮಂಡನೆ ವೇಳೆ ಪ್ರಕಟಿಸಿದ್ದ ಮಹತ್ವಾಕಾಂಕ್ಷಿ 'ಹಸಿರು ಕರ್ನಾಟಕ' ಯೋಜನೆಗೆ ಅಧಿಕೃತ ಚಾಲನೆ ನೀಡುವುದರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 72ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.

TIMESOFINDIA.COM 15 Aug 2018, 8:03 pm
ಮಂಗಳೂರು: ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಬಜೆಟ್ ಮಂಡನೆ ವೇಳೆ ಪ್ರಕಟಿಸಿದ್ದ ಮಹತ್ವಾಕಾಂಕ್ಷಿ 'ಹಸಿರು ಕರ್ನಾಟಕ' ಯೋಜನೆಗೆ ಅಧಿಕೃತ ಚಾಲನೆ ನೀಡುವುದರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 72ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.
Vijaya Karnataka Web UT Khader


ಜನರ ಸಹಭಾಗಿತ್ವದೊಂದಿಗೆ ಪ್ರತಿ ಮನೆಗೊಂದು ಮರ ನೆಡುವ, ಪ್ರತಿ ನಗರಕ್ಕೊಂದು ತೋಟ, ಪ್ರತಿ ತಾಲೂಕಿಗೊಂದು ಕಿರು ಅರಣ್ಯ ಹಾಗೂ ಪ್ರತಿ ಜಿಲ್ಲೆಗೊಂದು ಅರಣ್ಯ ಬೆಳೆಸುವ ಯೋಜನೆ ಇದಾಗಿದೆ.

ನಗರಾಭಿವೃದ್ಧಿ ಹಾಗೂ ವಸತಿ ಸಚಿವ ಯು.ಟಿ ಖಾದರ್‌ ಅವರು ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ವೇಳೆ ಜಿಲ್ಲಾ ಮಟ್ಟದ ಯೋಜನೆಗೆ ಚಾಲನೆ ನೀಡಿ ಜಿಲ್ಲೆಗೆ ಹಸಿರು ಹೊದಿಕೆ ಹೊದೆಸುವ ಪ್ರತಿಜ್ಞಾವಿಧಿ ಬೋಧಿಸಿದರು.

ಶಾಲಾ ಕಾಲೇಜು ವಿದ್ಯಾರ್ಥಿಗಳು, ಪರಿಸರ ಪ್ರೇಮಿ ಸಂಘಟನೆಗಳು, ಸ್ಥಳೀಯ ಸ್ವಯಂಸೇವಾ ಸಂಘಟನೆಗಳು, ವೈಯಕ್ತಿಕ ಹಸಿರು ಕಾರ್ಯಕರ್ತರು, ಸಾರ್ವಜನಿಕರು ಮತ್ತು ಇತರರ ಸಹಯೋಗದಲ್ಲಿ ಈ ಯೋಜನೆ ಜಾರಿಗೊಳಿಸಲಾಗುವುದು ಎಂದು ಖಾದರ್‌ ತಿಳಿಸಿದರು.

ಮುಂದಿನ ನಾಲ್ಕು ದಿನಗಳಲ್ಲಿ ಜಿಲ್ಲೆಯಾದ್ಯಂತ ಯೋಜನೆ ಜಾರಿಗೊಳಿಸಲಾಗುವುದು. ಬೃಹತ್ ಅರಣ್ಯೀಕರಣ ಕಾರ್ಯಕ್ರಮದಲ್ಲಿ ಎಲ್ಲ ಇಲಾಖೆಗಳು ಒಗ್ಗೂಡಿ ಅರಣ್ಯ ಇಲಾಖೆ ಜತೆ ಸಹಕರಿಸಿ ಯೋಜನೆಯನ್ನು ಯಶಸ್ವಿಗೊಳಿಸಬೇಕು ಎಂದು ಅವರು ಕರೆ ನೀಡಿದರು.

ಸ್ಥಳೀಯ ಚುನಾಯಿತ ಜನಪ್ರತಿನಿಧಿಗಳ ನಾಯಕತ್ವದಲ್ಲಿ ಹಸಿರು ಕರ್ನಾಟಕದ ಕಾರ್ಯಕರ್ತರು ಒಗ್ಗೂಡಿ, ಖಾಲಿ ಬಿದ್ದಿರುವ ಸರಕಾರಿ ಮತ್ತು ಖಾಸಗಿ ಭೂಮಿಯಲ್ಲಿ, ಎಲ್ಲಾ ಇಲಾಖೆ ಕಚೇರಿಗಳ ಆವರಣದಲ್ಲಿ, ಶಾಲೆ ಮತ್ತು ಕಾಲೇಜುಗಳ ಆವರಣದಲ್ಲಿ ಗಿಡ ನೆಡಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ