ಮಂಗಳೂರು: ಭಾರಿ ಮಳೆ ಬೀಳುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡದ ಪ್ರಾಥಮಿಕ, ಪ್ರೌಢ ಹಾಗೂ ಪಿಯುಸಿ ಶಾಲಾ ಕಾಲೇಜುಗಳಿಗೆ ಜೂ.9ರ ವರೆಗೆ ರಜೆ ಘೋಷಣೆ ಮಾಡಲಾಗಿದೆ.
ಶುಕ್ರವಾರ ಮುಂಜಾನೆಯಿಂದಲೇ ಸುರಿಯುತ್ತಿದ್ದ ಭಾರಿ ಮಳೆಯ ಹಿನ್ನೆಲೆಯಲ್ಲಿ ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿ ನೀರು ಅಪಾಯದ ಮಟ್ಟ ತಲುಪಿದೆ. ಜೂ.5ರಿಂದ 11ರ ವರೆಗೆ ಭಾರಿ ಮಳೆ ಬೀಳುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಶುಕ್ರವಾರ ಬೆಳಗ್ಗೆಯಿಂದ ಮಳೆ ಸತತ ಬೀಳುತ್ತಿದ್ದ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ಶನಿವಾರದ ವರೆಗೆ ರಜೆ ಘೋಷಣೆ ಮಾಡಿ, ಜಿಲ್ಲಾಡಳಿತ ಆದೇಶ ಹೊರಡಿಸಿತ್ತು. ಉಡುಪಿ ಜಿಲ್ಲಾಡಳಿತ ಶುಕ್ರವಾರ, ಶನಿವಾರದಂದೂ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ.
ದಕ್ಷಿಣ ಕನ್ನಡ ಜಿಲ್ಲೆಯು ಕಳೆದ 24 ಗಂಟೆಗಳಲ್ಲಿ ಸರಾಸರಿ 12 ಸೆಂ.ಮೀ ಮಳೆಯಾಗಿದ್ದು, ಮಂಗಳೂರಿನಲ್ಲಿ ಅತ್ಯಧಿಕ 14.4 ಸೆಂ.ಮೀ, ಬಂಟ್ವಾಳದಲ್ಲಿ 12.9, ಪುತ್ತೂರಿನಲ್ಲಿ 12.1 ಹಾಗೂ ಸುಳ್ಯ ಭಾಗದಲ್ಲಿ 12.9 ಸೆಂ.ಮೀ ಮಳೆ ಬಿದ್ದಿದ್ದರೆ, ಬೆಳ್ತಂಗಡಿಯಲ್ಲಿ 8 ಸೆಂ.ಮೀ ಮಳೆಯಾಗಿರುವುದಾಗಿ ಕರ್ನಾಟಕ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮಾಹಿತಿ ನೀಡಿದೆ. ಅಲ್ಲದೆ ಮುಂದಿನ 2 ದಿನಗಳ ಕಾಲ ಹೆಚ್ಚು ಮಳೆ ಬೀಳುವ ಸಾಧ್ಯತೆಗಳಿವೆ ಎಂದು ಎಚ್ಚರಿಸಿದೆ.
ರಾಜ್ಯಾದ್ಯಂತ ಚುರುಕಾದ ಮುಂಗಾರು
ಜಿಲ್ಲಾಡಳಿತ ಶಾಲಾ ಕಾಲೇಜುಗಳಿಗೆ ಮಳೆ ಘೋಷಿಸಿದ ಬಳಿಕ ಮಳೆ ಮಾಯವಾಗಿದ್ದರೂ, ಭಾಗಶಃ ಮಳೆ ವಾತಾವರಣ, ದಟ್ಟ ಮೋಡ ಆವರಿಸಿದ ಆಗಸ ಕಂಡು ಬಂದಿದೆ. ಕಳೆದ ವಾರ ಮಂಗಳೂರಿನಲ್ಲಿ ಸುರಿದ ಭಾರಿ ಮಳೆಯಿಂದ ಕೃತಕ ಪ್ರವಾಹ ಸೃಷ್ಟಿಯಾಗಿತ್ತು. ಈ ಹಿನ್ನೆಲೆಯಲ್ಲಿ ಎನ್ಡಿಆರ್ಎಫ್ ತಂಡಗಳು ಮಂಗಳೂರಿನಲ್ಲಿ ಬೀಡು ಬಿಟ್ಟಿವೆ.
ಶುಕ್ರವಾರ ಮುಂಜಾನೆಯಿಂದಲೇ ಸುರಿಯುತ್ತಿದ್ದ ಭಾರಿ ಮಳೆಯ ಹಿನ್ನೆಲೆಯಲ್ಲಿ ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿ ನೀರು ಅಪಾಯದ ಮಟ್ಟ ತಲುಪಿದೆ. ಜೂ.5ರಿಂದ 11ರ ವರೆಗೆ ಭಾರಿ ಮಳೆ ಬೀಳುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಶುಕ್ರವಾರ ಬೆಳಗ್ಗೆಯಿಂದ ಮಳೆ ಸತತ ಬೀಳುತ್ತಿದ್ದ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ಶನಿವಾರದ ವರೆಗೆ ರಜೆ ಘೋಷಣೆ ಮಾಡಿ, ಜಿಲ್ಲಾಡಳಿತ ಆದೇಶ ಹೊರಡಿಸಿತ್ತು. ಉಡುಪಿ ಜಿಲ್ಲಾಡಳಿತ ಶುಕ್ರವಾರ, ಶನಿವಾರದಂದೂ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ.
ದಕ್ಷಿಣ ಕನ್ನಡ ಜಿಲ್ಲೆಯು ಕಳೆದ 24 ಗಂಟೆಗಳಲ್ಲಿ ಸರಾಸರಿ 12 ಸೆಂ.ಮೀ ಮಳೆಯಾಗಿದ್ದು, ಮಂಗಳೂರಿನಲ್ಲಿ ಅತ್ಯಧಿಕ 14.4 ಸೆಂ.ಮೀ, ಬಂಟ್ವಾಳದಲ್ಲಿ 12.9, ಪುತ್ತೂರಿನಲ್ಲಿ 12.1 ಹಾಗೂ ಸುಳ್ಯ ಭಾಗದಲ್ಲಿ 12.9 ಸೆಂ.ಮೀ ಮಳೆ ಬಿದ್ದಿದ್ದರೆ, ಬೆಳ್ತಂಗಡಿಯಲ್ಲಿ 8 ಸೆಂ.ಮೀ ಮಳೆಯಾಗಿರುವುದಾಗಿ ಕರ್ನಾಟಕ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮಾಹಿತಿ ನೀಡಿದೆ. ಅಲ್ಲದೆ ಮುಂದಿನ 2 ದಿನಗಳ ಕಾಲ ಹೆಚ್ಚು ಮಳೆ ಬೀಳುವ ಸಾಧ್ಯತೆಗಳಿವೆ ಎಂದು ಎಚ್ಚರಿಸಿದೆ.
ರಾಜ್ಯಾದ್ಯಂತ ಚುರುಕಾದ ಮುಂಗಾರು
ಜಿಲ್ಲಾಡಳಿತ ಶಾಲಾ ಕಾಲೇಜುಗಳಿಗೆ ಮಳೆ ಘೋಷಿಸಿದ ಬಳಿಕ ಮಳೆ ಮಾಯವಾಗಿದ್ದರೂ, ಭಾಗಶಃ ಮಳೆ ವಾತಾವರಣ, ದಟ್ಟ ಮೋಡ ಆವರಿಸಿದ ಆಗಸ ಕಂಡು ಬಂದಿದೆ. ಕಳೆದ ವಾರ ಮಂಗಳೂರಿನಲ್ಲಿ ಸುರಿದ ಭಾರಿ ಮಳೆಯಿಂದ ಕೃತಕ ಪ್ರವಾಹ ಸೃಷ್ಟಿಯಾಗಿತ್ತು. ಈ ಹಿನ್ನೆಲೆಯಲ್ಲಿ ಎನ್ಡಿಆರ್ಎಫ್ ತಂಡಗಳು ಮಂಗಳೂರಿನಲ್ಲಿ ಬೀಡು ಬಿಟ್ಟಿವೆ.