ಚಿಕ್ಕಮಗಳೂರು : ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಳೆ ವಿಪರಿತ ಅಗಿದ್ದು ಅದರಲ್ಲಿಯೂ ಚಾರ್ಮಾಡಿ ಘಾಟ್ ಪ್ರದೇಶದ ಏಳನೇ ತಿರುವಿನಲ್ಲಿ ಸಣ್ಣ ಮಟ್ಟದ ಭೂಕುಸಿತ ಉಂಟಾಗಿದೆ. ಯಾವ ಸಂದರ್ಭದಲ್ಲಿಯೂ ಭೂಕುಸಿತ ಹೆಚ್ಚಾಗುವ ಸಾಧ್ಯತೆ ಹೆಚ್ಚಾಗಿದ್ದು ಅದಕ್ಕೆ ಬೆಳ್ತಂಗಡಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಎಲ್ಲಾ ಪರಿಕರಗಳನ್ನು ಹಿಡಿದು ಚಾರ್ಮಾಡಿ ಘಾಟಿಯಲ್ಲಿ ಯಾವುದೇ ತೊಂದರೆಯಾದರೂ ಬಗೆಹರಿಸಲು ಅಧಿಕಾರಿಗಳು ಸಿದ್ದರಿದ್ದಾರೆ ಎಂದು ಚಾರ್ಮಾಡಿ ಫಾರೆಸ್ಟರ್ ರವೀಂದ್ರ ಅಂಕಲಗಿ ತಿಳಿಸಿದ್ದಾರೆ. ಇನ್ನೂ ಏಳನೇ ತಿರುವಿನಲ್ಲಿ ಸಣ್ಣ ಮಟ್ಟದ ಭೂಕುಸಿತ ಉಂಟಾದ ಪ್ರದೇಶಕ್ಕೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಹಾಗೂ ಬೆಳ್ತಂಗಡಿ ತಹಶಿಲ್ದಾರ್ ಮಹೇಶ್.ಜೆ ಹಾಗೂ ಸಿಬ್ಬಂದಿಗಳು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಚಾರ್ಮಾಡಿ ಭಾಗದಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿರುವುದರಿಂದ ಭೂ ಕುಸಿತಗೊಳ್ಳುವ ಆತಂಕ ಸಹ ಎದುರಾಗಿದೆ
ಭಾರೀ ಮಳೆ ಹಿನ್ನೆಲೆ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಭೂಕುಸಿತ, ಸ್ಥಳಕ್ಕೆ ಅಧಿಕಾರಿಗಳ ದೌಡು.
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯಾಗಿತ್ತಿರುವ ಪರಿಣಾಮ ಚಾರ್ಮಾಡಿ ಘಾಟ್ ಪ್ರದೇಶದ ಏಳನೇ ತಿರುವಿನಲ್ಲಿ ಸಣ್ಣ ಮಟ್ಟದ ಭೂಕುಸಿತ ಉಂಟಾಗಿದೆ. ಯಾವ ಸಂದರ್ಭದಲ್ಲಿಯೂ ಭೂಕುಸಿತ ಹೆಚ್ಚಾಗುವ ಸಾಧ್ಯತೆ ಹೆಚ್ಚಾಗಿದ್ದು ಅದಕ್ಕೆ ಬೆಳ್ತಂಗಡಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಎಲ್ಲಾ ಪರಿಕರಗಳನ್ನು ಹಿಡಿದು ಚಾರ್ಮಾಡಿ ಘಾಟಿಯಲ್ಲಿ ಯಾವುದೇ ತೊಂದರೆಯಾದರೂ ಬಗೆಹರಿಸಲು ಅಧಿಕಾರಿಗಳು ಸಿದ್ದರಿದ್ದಾರೆ.
Vijaya Karnataka Web 23 Jul 2021, 3:15 pm
ಹೈಲೈಟ್ಸ್:
- ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಭೂಕುಸಿತ
- ಘಟನಾ ಸ್ಥಳಕ್ಕೆ ಅಧಿಕಾರಿಗಳ ದೌಡು
- ಭಾರೀ ಮಳೆ ಹಿನ್ನೆಲೆ ರಸ್ತೆ ಕುಸಿತ