ಆ್ಯಪ್ನಗರ

ಕರಾವಳಿಯಲ್ಲಿ ಭಾರೀ ಮಳೆ ಸೂಚನೆ; ಇನ್ನೂ ಎರಡು ದಿನ ಎಲ್ಲೋ ಅಲರ್ಟ್‌

ಭಾರತೀಯ ಹವಾಮಾನ ಇಲಾಖೆಯ ಪ್ರಕಾರ ಇನ್ನೆರಡು ದಿನಗಳ ಕಾಲ ಕರಾವಳಿಯ ದ.ಕ., ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಮಲೆನಾಡು ಪ್ರದೇಶದಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ.

Vijaya Karnataka Web 4 Jul 2020, 10:16 am
ಮಂಗಳೂರು: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆ ಶುಕ್ರವಾರ ಕೂಡ ಮುಂದುವರಿದಿದ್ದು, ಇನ್ನೆರಡು ದಿನಗಳ ಕಾಲ ಮತ್ತಷ್ಟು ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
Vijaya Karnataka Web ಮಳೆ ಮೋಡ
ಮಳೆ ಮೋಡ


ಶುಕ್ರವಾರ ಬೆಳಗ್ಗಿನಿಂದ ಸಾಧಾರಣವಾಗಿ ಕಾಣಿಸಿಕೊಂಡ ಮಳೆ ಸಂಜೆಯಾಗುತ್ತಿದ್ದಂತೆ ತನ್ನ ತೀವ್ರತೆ ಹೆಚ್ಚಿಸಿಕೊಳ್ಳುವ ಜತೆಗೆ ಗ್ರಾಮೀಣ ಭಾಗವಾದ ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ ಭಾಗದಲ್ಲಿಉತ್ತಮ ಮಳೆಯಾಗುವ ಜತೆಗೆ ಸಣ್ಣಪುಟ್ಟ ಹಾನಿಯ ಘಟನೆಗಳು ವರದಿಯಾಗಿದೆ.

ಮಂಗಳೂರು ನಗರ ವ್ಯಾಪ್ತಿಯಲ್ಲಿ ಪಿವಿಎಸ್‌ ಹತ್ತಿರದ ಮಾನಸ ಟವರ್‌ ಮುಂಭಾಗದಲ್ಲಿ ಕಾಮಗಾರಿ ನಡೆಯುತ್ತಿದ್ದ ಪರಿಣಾಮ ಮಳೆಯ ನೀರು ಸರಾಗ ಸಾಗದೇ ರಸ್ತೆಯಲ್ಲಿಯೇ ಮಳೆಯ ನೀರು ಸಾಗಿ ವಾಹನ ಸವಾರರಿಗೆ ಸಮಸ್ಯೆ ತಂದು ಹಾಕಿತು. ಹೊಯಿಗೆ ಬಜಾರ್‌ ಹತ್ತಿರದ ಧೂಮಾವತಿ ದೇವಸ್ಥಾನದ ಪಕ್ಕದಲ್ಲಿ ದೊಡ್ಡ ಮರವೊಂದು ಬಿದ್ದು ಹಾನಿಯಾದರೆ, ನಗರದ ಆರ್‌ಟಿಒ ಕಚೇರಿ ಸಮೀಪ ಹಳೆಯ ಮರವೊಂದು ಬಿದ್ದು ಸಂಚಾರಕ್ಕೆ ಸಮಸ್ಯೆಯಾಗಿತ್ತು.

ಪಡೀಲ್‌ ಅಂಡರ್‌ಪಾಸ್‌ನಲ್ಲಿ ನೀರು ತುಂಬಿ ವಾಹನಗಳು ಮಳೆಯ ನೀರಿನ ಮೇಲೆ ಸಾಗುತ್ತಿದ್ದ ದೃಶ್ಯ ಕಂಡುಬಂತು. ಪಂಪ್‌ವೆಲ್‌ ಮೇಲ್ಸೇತುವೆಯ ಕೆಳ ಭಾಗದಲ್ಲೂ ಇದೇ ರೀತಿಯಲ್ಲಿ ನೀರು ನಿಂತು ಸವಾರರಿಗೆ ಸಮಸ್ಯೆಯಾಗಿದೆ. ನಗರದ ಕೆ.ಎಸ್‌. ರಾವ್‌ ರಸ್ತೆಯ ಸಿಟಿ ಸೆಂಟರ್‌ ಮುಂಭಾಗದ ರಸ್ತೆಯಲ್ಲಿ ಮಳೆ ನೀರು ಸರಾಗ ಸಾಗದೇ ಕಿರಿಕಿರಿಯಾದರೆ ಉರ್ವ ಸ್ಟೋರ್‌ ಇನ್ಫೋಸಿಸ್‌ ಮುಂಭಾಗದ ರಸ್ತೆಯಲ್ಲಿ ಮಳೆ ನೀರು ರಸ್ತೆಯಲ್ಲೇ ಹರಿಯುತ್ತಿತ್ತು. ಕೊಟ್ಟಾರ ಚೌಕಿಯಲ್ಲಿ ಮಳೆಗಾಲಕ್ಕೂ ಮೊದಲೇ ಹೂಳು ತೆಗೆಯುವ ಕಾರ್ಯ ಆರಂಭವಾದರೂ ಕೂಡ ಮಳೆ ನೀರು ಸರಿಯಾಗಿ ಹರಿಯದೆ ಸವಾರರಿಗೆ ಸಂಕಷ್ಟ ತಂದೊಡ್ಡಿತು.

ಇನ್ನೆರಡು ದಿನ ಆರೆಂಜ್‌ ಅಲರ್ಟ್‌: ಭಾರತೀಯ ಹವಾಮಾನ ಇಲಾಖೆಯ ಪ್ರಕಾರ ಇನ್ನೆರಡು ದಿನಗಳ ಕಾಲ ಕರಾವಳಿಯ ದ.ಕ., ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಮಲೆನಾಡು ಪ್ರದೇಶದಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ.

ಶುಕ್ರವಾರ ಸಂಜೆಯ ವರದಿ ಪ್ರಕಾರ ಬಂಟ್ವಾಳದ ಕಳ್ಳಿಗೆಯಲ್ಲಿ ಜಿಲ್ಲೆಯಲ್ಲಿ ಅತೀ ಹೆಚ್ಚು 56.5 ಮಿ.ಮೀ. ಮಳೆಯಾಗಿದೆ. ಮಂಗಳೂರಿನ ಅಡ್ಯಾರು ಪ್ರದೇಶದಲ್ಲಿ49 ಮಿ.ಮೀ., ಪುತ್ತೂರಿನ ಬಡಗನ್ನೂರು ಪ್ರದೇಶದಲ್ಲಿ41.5 ಮಿ.ಮೀ., ಸುಳ್ಯದ ಕೊಲ್ಲಮೊಗರು ಪ್ರದೇಶದಲ್ಲಿ31 ಮಿ.ಮೀ. ಹಾಗೂ ಬೆಳ್ತಂಗಡಿಯ ಕೊಕ್ಕಡದಲ್ಲಿ 46 ಮಿ.ಮೀ. ಮಳೆಯಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ