ಆ್ಯಪ್ನಗರ

ಪ್ರಸಿದ್ಧ ಪಣೋಲಿಬೈಲು ಕಲ್ಲುಟ್ಟಿ ದೈವಸ್ಥಾನದ ಅನುವಂಶಿಕ ಅರ್ಚಕ ರಮೇಶ್ ಮೂಲ್ಯ ನಿಧನ..!

ಸರಳ, ಸಜ್ಜನಿಕೆ ಹಾಗೂ ಸೌಮ್ಯ ಸ್ವಭಾವದ ರಮೇಶ್ ಅವರು ಪಣೋಲಿಬೈಲು ಕಲ್ಲುಟ್ಟಿ ದೈವದ ಭಕ್ತರಾಗಿದ್ದು,ಇವರ ಅಕಾಲಿಕ ನಿಧನ ಪಣೋಲಿಬೈಲು ದೈವಸ್ಥಾನದ ಭಕ್ತ ಸಮೂಹಕ್ಕೆ ದೊಡ್ಡ ಆಘಾತ ಉಂಟು ಮಾಡಿದೆ.

Vijaya Karnataka Web 21 Oct 2020, 11:17 am
ಬಂಟ್ವಾಳ: ತುಳುನಾಡಿನ ಇತಿಹಾಸ ಪ್ರಸಿದ್ಧ ಪಣೋಲಿಬೈಲು ಶ್ರೀ ಕಲ್ಲುಟ್ಟಿ ದೈವಸ್ಥಾನದ ಅನುವಂಶಿಕ ಎರಡನೇ ಅರ್ಚಕ ರಮೇಶ್‌ ಮೂಲ್ಯ (55)ಅವರು ಬುಧವಾರ ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
Vijaya Karnataka Web panolibail


ಕಳೆದ ಕೆಲವು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಅವರನ್ನು ಎರಡು ವಾರದ ಹಿಂದೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಅವರು ನಿನ್ನೆ ರಾತ್ರಿಯಿಂದ ಚಿಕಿತ್ಸೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಈ ಬಾರಿ ಯಕ್ಷಗಾನ ಕಲಾವಿದರು ಕೊರೊನಾ ಟೆಸ್ಟ್‌ ಮಾಡೋದು ಕಡ್ಡಾಯ: ಕೋಟ ಶ್ರೀನಿವಾಸ ಪೂಜಾರಿ

ಶ್ವಾಸಕೋಶದ ಸೋಂಕು ನ್ಯುಮೋನಿಯಾ ಅವರ ಸಾವಿಗೆ ಕಾರಣ ಎಂದು ಆಸ್ಪತ್ರೆ ಮೂಲಗಳಿಂದ ತಿಳಿದುಬಂದಿದ್ದು, ಸರಳ, ಸಜ್ಜನಿಕೆ ಹಾಗೂ ಸೌಮ್ಯ ಸ್ವಭಾವದ ರಮೇಶ್ ಅವರು ಪಣೋಲಿಬೈಲು ಕಲ್ಲುಟ್ಟಿ ದೈವದ ಭಕ್ತರಾಗಿದ್ದು,ಇವರ ಅಕಾಲಿಕ ನಿಧನ ಪಣೋಲಿಬೈಲು ದೈವಸ್ಥಾನದ ಭಕ್ತ ಸಮೂಹಕ್ಕೆ ದೊಡ್ಡ ಆಘಾತ ಉಂಟು ಮಾಡಿದೆ.

ಬೆಳ್ತಂಗಡಿಯಲ್ಲಿ ಚಿರತೆ ದಾಳಿ; ಹಸುವನ್ನು ಅರ್ಧ ತಿಂದು ಹಾಕಿದ ಗೋಭಕ್ಷಕ..!

ರಮೇಶ್ ಅವರು ಪತ್ನಿ ಮತ್ತು ಎರಡು ಗಂಡು ಒಂದು ಹೆಣ್ಣು ಹಾಗೂ ಮೊಮ್ಮಗಳು ಮತ್ತು ಅಪಾರ ಬಂಧುಗಳನ್ನು ಅವರು ಅಗಲಿದ್ದಾರೆ. ರಮೇಶ್ ಅವರ ಪಾರ್ಥಿವ ಶರೀರವನ್ನು ಅವರ ಪಣೋಲಿಬೈಲಿನಲ್ಲಿರುವ ಮನೆಗೆ ಬುಧವಾರ 10.30 ರ ವೇಳೆ ತರಲಾಗಿದ್ದು ಬಳಿಕ ಕಂಚಿನಡ್ಕ ಪದವಿನ ಸ್ಮಶಾನ ಭೂಮಿಯಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ಅವರ ಪುತ್ರ ಲೋಹಿತ್ ಪಣೋಲಿಬೈಲು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ