ಆ್ಯಪ್ನಗರ

ಅಕ್ರಮ ಜಾನುವಾರು ಸಾಗಾಟ ಪತ್ತೆ: ಪರಾರಿಯಾಗುವ ಭರದಲ್ಲಿ ಮನೆಯ ಗೋಡೆಗೆ ಡಿಕ್ಕಿ ಹೊಡೆದ ಪಿಕಪ್‌

ಪಿಕಪ್‌ ವಾಹನವೊಂದರಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುವ ಪ್ರಕರಣವನ್ನು ಹಿಂದು ಸಂಘಟನೆಯ ಕಾರ್ಯಕರ್ತರು ಬೇಧಿಸಿದ್ದು, ಪಿಕಪ್ ಅನ್ನು ಹಿಂಬಾಲಿಸಿದ್ದಾರೆ. ಈ ಸಂದರ್ಭ ಪಿಕಪ್‌ ಪರಾರಿಯಾಗುವ ಭರದಲ್ಲಿ ಮನೆಯ ಗೋಡೆಗೆ ಡಿಕ್ಕಿ ಹೊಡೆದಿದೆ. ಚಾಲಕ ಪರಾರಿಯಾಗಿದ್ದಾನೆ.

Vijaya Karnataka Web 10 Aug 2020, 2:25 pm
ಬಂಟ್ವಾಳ: ಪಿಕಪ್‌ ವಾಹನವೊಂದರಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುವ ಪ್ರಕರಣವೊಂದು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದೆ. ಬಂಟ್ವಾಳ ತಾಲೂಕಿನ ದೇವಸ್ಯಪಡೂರು ಗ್ರಾಮದ ಮಾಲಬೆ ಎಂಬಲ್ಲಿ ನಡೆದಿದೆ.
Vijaya Karnataka Web ಸಾಂದರ್ಭಿಕ ಚಿತ್ರ


ಅಕ್ರಮ ಜಾನುವಾರು ಸಾಗಾಟದ ಟೆಂಪೋವನ್ನು ಗಮನಿಸಿದ್ದ ಹಿಂದು ಸಂಘಟನೆಯ ಕಾರ್ಯಕರ್ತರು ಹಿಂಬಾಲಿಸುತ್ತಿದ್ದ ಸಂದರ್ಭ ಪಿಕಪ್‌ ಪರಾರಿಯಾಗುವ ಭರದಲ್ಲಿ ಮಾಲಬೆಯ ಸುಲೈಮಾನ್‌ ಎಂಬವರ ಮನೆಯ ಗೋಡೆಗೆ ಡಿಕ್ಕಿ ಹೊಡೆದಿದೆ. ತಕ್ಷಣ ಚಾಲಕ ಪಿಕಪ್‌ ನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.

ಈ ಸಂದರ್ಭ ಹಸುವೊಂದು ಕೆಳಕ್ಕೆ ಜಿಗಿದಿದ್ದರೆ, ಉಳಿದೆರಡು ದನಗಳು ಪಿಕಪ್‌ ನಲ್ಲೇ ಕಾಲುಗಳನ್ನು ಕಟ್ಟಿಹಾಕಿದ ಸ್ಥಿತಿಯಲ್ಲಿತ್ತು. ಇದೇ ವೇಳೆಯಲ್ಲಿ ರಾತ್ರಿ ಗಸ್ತಿನಲ್ಲಿದ್ದು, ಮಣಿಹಳ್ಳ ಜಂಕ್ಷನ್‌ ನಲ್ಲಿ ವಾಹನ ತಪಾಸಣೆಯಲ್ಲಿ ನಿರತರಾಗಿದ್ದ ಬಂಟ್ವಾಳ ಗ್ರಾಮಾಂತರ ಠಾಣೆಯ ಎಸ್‌ ಐ ಪ್ರಸನ್ನ ಮತ್ತವರ ಸಿಬ್ಬಂದಿಗಳು ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದಾಗ ಪಿಕಪ್‌ ನಲ್ಲಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಕಟ್ಟಿಹಾಕಿರುವುದು ಕಂಡು ಬಂದಿದೆ. ಕೂಡಲೇ ಪಿಕಪ್‌ ವಾಹನ ಸಹಿತ ಮೂರು ಜಾನುವಾರುಗಳನ್ನು ವಶಪಡಿಸಿದ್ದಾರೆ.

ಪಿಕಪ್‌ ಮನೆಯ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ವಾಹನದ ಮುಂಭಾಗ ಜಖಂಗೊಂಡಿದ್ದು, ಸುಲೈಮಾನ್‌ ಅವರ ಮನೆಗೋಡೆಗೂ ಹಾನಿಯಾಗಿದೆ. ಆರೋಪಿ ಜಾನುವಾರುಗಳನ್ನು ಎಲ್ಲಿಂದಲೋ ಕಳವುಗೈದು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ದೃಢಪಟ್ಟಿದ್ದು, ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಕೇಸು ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ