ಆ್ಯಪ್ನಗರ

ಸ್ಮಾರ್ಟ್‌ ಸಿಟಿ ಬಸ್‌ ಸ್ಟಾಪ್‌ಗಳ ತನಿಖೆ

ಸ್ಮಾರ್ಟ್‌ ಸಿಟಿ ಯೋಜನೆಯಡಿ ನಗರದ ನಾನಾ ಕಡೆ ನಿರ್ಮಿಸಿರುವ ಬಸ್‌ ಶೆಲ್ಟರ್‌ಗಳ ಯೋಜನಾ ವೆಚ್ಚ ಅಧಿಕವಾಗಿರುವ ಬಗ್ಗೆ ತನಿಖೆ ನಡೆಸುವಂತೆ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಸೂಚಿಸಿದರು.

Vijaya Karnataka 14 Sep 2019, 5:00 am
ಮಂಗಳೂರು: ಸ್ಮಾರ್ಟ್‌ ಸಿಟಿ ಯೋಜನೆಯಡಿ ನಗರದ ನಾನಾ ಕಡೆ ನಿರ್ಮಿಸಿರುವ ಬಸ್‌ ಶೆಲ್ಟರ್‌ಗಳ ಯೋಜನಾ ವೆಚ್ಚ ಅಧಿಕವಾಗಿರುವ ಬಗ್ಗೆ ತನಿಖೆ ನಡೆಸುವಂತೆ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಸೂಚಿಸಿದರು.
Vijaya Karnataka Web investigate smartcity bus stop saya nalin
ಸ್ಮಾರ್ಟ್‌ ಸಿಟಿ ಬಸ್‌ ಸ್ಟಾಪ್‌ಗಳ ತನಿಖೆ


ಜಿಲ್ಲಾಪಂಚಾಯಿತಿ ಸಭಾಂಗಣದಲ್ಲಿಅವರು ಗುರುವಾರ ಜಿಲ್ಲಾಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸ್ಮಾರ್ಟ್‌ ಸಿಟಿಯಡಿ ಪ್ರತಿ ಬಸ್‌ ಶೆಲ್ಟರ್‌ಗೆ 12 ಲಕ್ಷ ರೂ. ಖರ್ಚು ಮಾಡಲಾಗಿದೆ. ಇದರ ವಿನ್ಯಾಸ ಅವೈಜ್ಞಾನಿಕವಾಗಿದೆ. ಬಸ್‌ ಶೆಲ್ಟರ್‌ನ ವಿಸ್ತೀರ್ಣ 600 ಚದರ ಅಡಿಯಿದೆ ಎಂದು ತಿಳಿಸಲಾಗಿದೆ. ಆದರೆ ಅಷ್ಟೊಂದು ವಿಸ್ತೀರ್ಣ ಕಂಡು ಬರುತ್ತಿಲ್ಲ. ದಿಲ್ಲಿಯಲ್ಲಿಕೇವಲ 6 ಲಕ್ಷ ರೂ. ವೆಚ್ಚದಲ್ಲಿಇಂತಹ ಬಸ್‌ ಶೆಲ್ಟರ್‌ ನಿರ್ಮಿಸಲಾಗಿದೆ. ಈ ಹಿನ್ನಲೆಯಲ್ಲಿಇಷ್ಟೊಂದು ಅಪಾರ ವೆಚ್ಚ ಆಗಿರುವ ಬಗ್ಗೆ ತನಿಖೆ ನಡೆಸಬೇಕು. ಮುಂದೆ ಯಾವುದೇ ಕಾರಣಕ್ಕೂ ಸ್ಮಾರ್ಟ್‌ ಸಿಟಿಯಡಿ ಬಸ್‌ ಶೆಲ್ಟರ್‌ ನಿರ್ಮಾಣ ಕೈಗೆತ್ತಿಕೊಳ್ಳಬಾರದು ಎಂದು ಸ್ಮಾರ್ಟ್‌ ಸಿಟಿ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಿದರು.

ಸ್ಮಾರ್ಟ್‌ಸಿಟಿ ಯೋಜನೆಯಡಿ ನಗರದ ಹಂಪನಕಟ್ಟೆ ಕ್ಲಾಕ್‌ ಟವರ್‌ ನಿರ್ಮಾಣವನ್ನು ಒಂದು ಕೋಟಿ ರೂ. ವೆಚ್ಚದಲ್ಲಿಕೈಗೆತ್ತಿಕೊಳ್ಳಲಾಗಿದೆ. ಆದರೆ ಇದನ್ನು ಅವೈಜ್ಞಾನಿಕವಾಗಿ ನಿರ್ಮಿಸಲಾಗಿದೆ. ಇದರಿಂದ ಈ ಪ್ರದೇಶದಲ್ಲಿಸಂಚಾರ ಸಮಸ್ಯೆ ಇನ್ನಷ್ಟು ಬಿಗಡಾಯಿಸುವ ಸಾಧ್ಯತೆ ಇದೆ ಎಂದು ಸಂಸದರು ಆಕ್ಷೇಪಿಸಿದರು.

ಕ್ಲಾಕ್‌ ಟವರ್‌ನಿಂದ ಆರ್‌ಟಿಒ ಸರ್ಕಲ್‌ ವರೆಗೆ ಕೇವಲ 300 ಮೀ. ರಸ್ತೆಗೆ ಕಾಂಕ್ರಿಟೀಕರಣ ಮಾಡಲು 6 ಕೋಟಿ ರೂ. ಮೊತ್ತ ನಿಗದಿ ಮಾಡಿರುವುದಕ್ಕೆ ಅವರು ಅಸಮಾಧಾನ ವ್ಯಕ್ತಪಡಿಸಿದರು.

ನಗರದ ಒಳಚರಂಡಿ ಮಿಸ್‌ಲಿಂಕಿಂಗ್‌ ಸರಿಪಡಿಸಲು 55 ಕೋಟಿ ರೂ. ಅಮೃತ್‌ ಯೋಜನೆಯಡಿ ಇಡಲಾಗಿದೆ. ಆದರೂ ಸ್ಮಾರ್ಟ್‌ಸಿಟಿಯಲ್ಲಿಮತ್ತೆ ಇದೇ ಯೋಜನೆಗೆ ಹಣ ನಿಗದಿಪಡಿಸಿರುವುದು ಸರಿಯಲ್ಲ. ಯಾವುದೇ ಕಾರಣಕ್ಕೂ ಈ ಯೋಜನೆಗೆ ಸ್ಮಾರ್ಟ್‌ ಸಿಟಿ ವತಿಯಿಂದ ಹಣ ನೀಡದಂತೆ ಅವರು ಸೂಚಿಸಿದರು.

ಕಂಕನಾಡಿ ರೈಲ್ವೆ ಸ್ಟೇಷನ್‌ ರಸ್ತೆಯನ್ನು ಪಡೀಲ್‌ನಿಂದ ರೈಲ್ವೆ ಸ್ಟೇಷನ್‌ ಮೂಲಕ ನಾಗುರಿವರೆಗೆ ರಿಂಗ್‌ ರಸ್ತೆ ಮಾದರಿಯಲ್ಲಿಸ್ಮಾರ್ಟ್‌ಸಿಟಿ ಅಡಿಯಲ್ಲಿಅಭಿವೃದ್ಧಿಪಡಿಸಲು ಅವರು ಸೂಚಿಸಿದರು.

ಪಂಪ್‌ವೆಲ್‌ನಲ್ಲಿಕೇಂದ್ರ ಬಸ್‌ ನಿಲ್ದಾಣ ನಿರ್ಮಾಣ ತ್ವರಿತ ರೀತಿಯಲ್ಲಿಯೋಜನೆ ಜಾರಿಗೆ ತರಬೇಕು. ಹಂಪನಕಟ್ಟೆ ಹಳೆ ಸರ್ವಿಸ್‌ ಬಸ್‌ ನಿಲ್ದಾಣದಲ್ಲಿಬಹುಮಹಡಿ ಪಾರ್ಕಿಂಗ್‌ ಸಂಕೀರ್ಣವನ್ನು ಆದಷ್ಟು ಬೇಗ ಕೈಗೆತ್ತಿಕೊಳ್ಳಲು ಅವರು ಸೂಚಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ