ಆ್ಯಪ್ನಗರ

ಸಹಕಾರಿ ಸಂಘಗಳ ಪ್ರತಿನಿಧಿಗಳಿಗೆ ಇಸ್ರೇಲ್‌ ಪ್ರವಾಸ ಯೋಗ

ಸಹಕಾರಿ ಸಂಘಗಳ ಪದಾಧಿಕಾರಿಗಳಿಗೆ ಪಾಶ್ಚಿಮಾತ್ಯ ದೇಶಗಳಿಗೆ ಭೇಟಿ ನೀಡುವ ಅಧ್ಯಯನ ಪ್ರವಾಸವನ್ನು ಕೈಗೊಳ್ಳಲಾಗಿದ್ದು, ಪ್ರಥಮ ಹಂತದಲ್ಲಿ ಇಸ್ರೇಲ್‌ ರಾಷ್ಟ್ರಕ್ಕೆ ಅಧ್ಯಯನ ಪ್ರವಾಸವನ್ನು ಜೂ.20ರಿಂದ ಜೂ.26ರವರೆಗೆ ಆಯೋಜಿಸಲಾಗಿದೆ ಎಂದು ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ.ಎಂ.ಎನ್‌.ರಾಜೇಂದ್ರ ಕುಮಾರ್‌ ತಿಳಿಸಿದ್ದಾರೆ.

Vijaya Karnataka 17 Jun 2019, 3:47 pm
ಮಂಗಳೂರು: ಸಹಕಾರಿ ಸಂಘಗಳ ಪದಾಧಿಕಾರಿಗಳಿಗೆ ಪಾಶ್ಚಿಮಾತ್ಯ ದೇಶಗಳಿಗೆ ಭೇಟಿ ನೀಡುವ ಅಧ್ಯಯನ ಪ್ರವಾಸವನ್ನು ಕೈಗೊಳ್ಳಲಾಗಿದ್ದು, ಪ್ರಥಮ ಹಂತದಲ್ಲಿ ಇಸ್ರೇಲ್‌ ರಾಷ್ಟ್ರಕ್ಕೆ ಅಧ್ಯಯನ ಪ್ರವಾಸವನ್ನು ಜೂ.20ರಿಂದ ಜೂ.26ರವರೆಗೆ ಆಯೋಜಿಸಲಾಗಿದೆ ಎಂದು ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ.ಎಂ.ಎನ್‌.ರಾಜೇಂದ್ರ ಕುಮಾರ್‌ ತಿಳಿಸಿದ್ದಾರೆ.
Vijaya Karnataka Web 16M-SCDCC


ನಗರದ ಎಸ್‌ಸಿಡಿಸಿಸಿ ಬ್ಯಾಂಕ್‌ ಸಭಾಂಗಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಸ್ರೇಲ್‌ ಅಧ್ಯಯನ ಪ್ರವಾಸದಲ್ಲಿ ಆಧುನಿಕ ಕೃಷಿ ಪದ್ಧತಿ, ಹನಿ ನೀರಾವರಿ ಮತ್ತು ಈ ರಾಷ್ಟ್ರ ಅಭಿವೃದ್ಧಿಯನ್ನು ಹೊಂದಿದ ನೈಜ ಸ್ಥಿತಿಗತಿಗಳ ಬಗ್ಗೆ ವಿಶೇಷ ಅಧ್ಯಯನವನ್ನು ತಂಡ ಮಾಡಲಿದೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಪದಾಧಿಕಾರಿಗಳನ್ನು ಅಧ್ಯಯನ ಪ್ರವಾಸಕ್ಕೆ ವಿದೇಶಕ್ಕೆ ಕಳುಹಿಸುತ್ತಿರುವುದು ರಾಜ್ಯದಲ್ಲೇ ಪ್ರಥಮ. ಇದುವರೆಗೆ ಯಾವುದೇ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಕೈಗೊಳ್ಳದ ವಿಶೇಷ ಕಾರ್ಯಯೋಜನೆಯನ್ನು ಎಸ್‌ಸಿಡಿಸಿಸಿ ಬ್ಯಾಂಕ್‌ ಆಯೋಜಿಸಿದೆ ಎಂದು ಅವರು ತಿಳಿಸಿದರು.

ಅಧ್ಯಯನ ತಂಡ ಮುಂಬಯಿ ಮೂಲಕ ಜೆರುಸಲೇಮ್‌ಗೆ ತೆರಳಿ, ಇಸ್ರೇಲ್‌ ಪಾರ್ಲಿಮೆಂಟ್‌ಗೆ ಭೇಟಿ ಮತ್ತು ಆಧುನಿಕ ಕೃಷಿಯ ಬಗ್ಗೆ ಮಾಹಿತಿ ಪಡೆಯುವುದು. ಬೆತ್ಲಹೇಮ್‌ನಲ್ಲಿ ಕುರಿ ಸಾಗಣೆ ಮತ್ತು ಹಾಲಿನ ಉತ್ಪಾದನೆ ಕುರಿತು ಅಧ್ಯಯನ. ಆಗ್ರ್ಯಾನಿಕ್‌ ಕೃಷಿ ಅಥವಾ ಅದಕ್ಕೆ ಸಮನಾದ ಆಗ್ರ್ಯಾನಿಕ್‌ ಕೃಷಿ ಉತ್ಪನ್ನಗಳ ಕುರಿತು ಅಧ್ಯಯನ. ಎಸ್‌ಸಿಆರ್‌ ಕಂಪನಿಗೆ ಭೇಟಿ ಕೊಟ್ಟು ಸ್ಮಾರ್ಟ್‌ ಡೈರಿ ಫಾರ್ಮ್‌ ಕುರಿತು ಅಧ್ಯಯನ. ನೀರಾವರಿ ಕಂಪನಿಗೆ ಭೇಟಿ ನೀಡಿ ಹನಿ ನೀರಾವರಿಯ ಬಗ್ಗೆ ವಿಶೇಷ ಅಧ್ಯಯನವನ್ನು ಪ್ರಾಯೋಜಕತ್ವದ ಅಧ್ಯಯನ ತಂಡ ಮಾಡಲಿದೆ ಎಂದು ಅವರು ತಿಳಿಸಿದರು.

ಈ ಅಧ್ಯಯನ ಪ್ರವಾಸ ತಂಡದಲ್ಲಿ ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಂ. ಮಹೇಶ್‌ ಹೆಗ್ಡೆ, ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್‌. ಪ್ರಕಾಶ್ಚಂದ್ರ ಶೆಟ್ಟಿ, ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಬ್ಯಾಂಕ್‌ನ ಅಧ್ಯಕ್ಷ ವೈ.ಸುಧೀರ್‌ ಕುಮಾರ್‌, ಗಣಪತಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಕೆ.ಸತೀಶ್‌ ಶೆಟ್ಟಿ, ಮಂದಾರ್ತಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಚ್‌. ಗಂಗಾಧರ ಶೆಟ್ಟಿ, ಟಿಎಪಿಸಿಎಂಎಸ್‌ ಉಡುಪಿ ಅಧ್ಯಕ್ಷ ಕರ್ಜೆ ಅಶೋಕ ಶೆಟ್ಟಿ, ಹಿರಿಯಡ್ಕ ಆರ್‌.ಎಸ್‌.ಎಸ್‌.ಎನ್‌ ಅಧ್ಯಕ್ಷ ಹಿರಿಯಡ್ಕ ಅಶೋಕ ಶೆಟ್ಟಿ, ಕೊಡವೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ನಾರಾಯಣ ಬಳ್ಳಾಲ್‌, ಕೋಟ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ತಿಮ್ಮ ಪೂಜಾರಿ, ಕಟಪಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಶಂಕರ ಪೂಜಾರಿ, ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಗ್ರೆಗರಿ ಕೊನ್ರಾಡ್‌, ಉಪ್ಪೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ರಮೇಶ್‌ ಶೆಟ್ಟಿ ಎನ್‌., ಸಾಸ್ತಾನ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಶ್ರೀಧರ ಪಾಂಡೇಶ್ವರ ಶಿವರಾಮ, ಬಂಗಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಲಕ್ಷ ್ಮಣ ಗೌಡ, ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸತೀಶ್‌ ಕೆ., ಅಜೆಕಾರು ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಕೆ.ಭವಾನಿ ಶಂಕರ್‌, ವರಂಗ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಕೆ.ಚಂದ್ರಶೇಖರ್‌ ಬಾಯರಿ, ಅಲಂಕಾರ್‌ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ರಮೇಶ್‌ ಭಟ್‌ ಉಪ್ಪಂಗಳ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಅಶ್ವಿನ್‌ ಎಲ್‌ ಶೆಟ್ಟಿ, ಪುತ್ತೂರು ಟಿಎಪಿಸಿಎಂಎಸ್‌ ಅಧ್ಯಕ್ಷ ಕೃಷ್ಣ ಕುಮಾರ್‌ ರೈ, ಏನೆಕಲ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ದಯಾನಂದ, ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ದಾಮೋದರ ಗೌಡ, ಕಜೆಕಾರು ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಮೋನಪ್ಪ ಪೂಜಾರಿ, ಮಣಿನಾಲ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೆ.ರಾಧಾಕೃಷ್ಣ ಮಯ್ಯ, ಹೊಸಬೆಟ್ಟು ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಪದ್ಮಪ್ರಸಾದ್‌ ಹೊಸಬೆಟ್ಟು, ಬಜಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ ಕಾರ್ಯದರ್ಶಿ ರತ್ನಾಕರ ಶೆಟ್ಟಿ ತಂಡದಲ್ಲಿದ್ದಾರೆ.

ಎಸ್‌ಸಿಡಿಸಿಸಿ ಬ್ಯಾಂಕ್‌ನ ನಿರ್ದೇಶಕರಾದ ಶಶಿ ಕುಮಾರ್‌ ರೈ ಬಾಲ್ಯೊಟ್ಟು, ಮಹೇಶ್‌ ಹೆಗ್ಡೆ, ಬಿ.ಅಶೋಕ್‌ ಕುಮಾರ್‌ ಶೆಟ್ಟಿ, ಸಿಇಒ ರವೀಂದ್ರ ಬಿ. ಹಾಗೂ ಅಧ್ಯಯನ ಪ್ರವಾಸ ಕೈಗೊಳ್ಳುವ ಪ್ರತಿನಿಧಿಗಳು ಮತ್ತು ಬ್ಯಾಂಕ್‌ನ ಮಹಾ ಪ್ರಬಂಧಕ ಗೋಪಿನಾಥ್‌ ಭಟ್‌ ಉಪಸ್ಥಿತರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ