ಆ್ಯಪ್ನಗರ

ಕೇಂದ್ರದ ಮುಂದಿನ ಗೈಡ್‌ಲೈನ್ಸ್‌ ಬಳಿಕ ಕಂಬಳ ಆಯೋಜನೆ: ಕೋಟ ಶ್ರೀನಿವಾಸ ಪೂಜಾರಿ

ಕರಾವಳಿಯ ಜಾನಪದ ಕ್ರೀಡೆ ಕಂಬಳ ಆಯೋಜನೆಗೆ ಕೇಂದ್ರ ಸರಕಾರದ ಮುಂದಿನ ಗೈಡ್‌ಲೈನ್ಸ್‌ ಬಳಿಕ ನಿರ್ಧರಿಸಲಾಗಿದೆ ಎಂದು ಶ್ರೀನಿವಾಸ ಪೂಜಾರಿ ಮತ್ತು ಸಂಸದ ನಳಿನ್‌ ಕುಮಾರ್‌ ಕಟೀಲ್ ಹೇಳಿದ್ದಾರೆ.

Vijaya Karnataka Web 13 Nov 2020, 6:45 pm
ಮಂಗಳೂರು: ತುಳುನಾಡಿನ ಜಾನಪದ ಕ್ರೀಡೆ ಕಂಬಳ ಆಯೋಜನೆಗೆ ಕೇಂದ್ರ ಸರಕಾರದ ಮುಂದಿನ ಗೈಡ್‌ಲೈನ್ಸ್‌ ಬಳಿಕ ನಿರ್ಧರಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಸಂಸದ ನಳಿನ್‌ ಕುಮಾರ್‌ ಕಟೀಲ್‌ ಭರವಸೆ ನೀಡಿದ್ದಾರೆ.
Vijaya Karnataka Web kambala


ಅವಿಭಜಿತ ದಕ್ಷಿಣ ಕನ್ನಡ, ಕಾಸರಗೊಡು ಜಿಲ್ಲಾ ಕಂಬಳ ಸಮಿತಿಯು ಶುಕ್ರವಾರ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಸಂಸದ ನಳಿನ್‌ ಕುಮಾರ್‌ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ವೇಳೆ ಈ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಧಾರ್ಮಿಕ ನಂಬಿಕೆ ಮತ್ತು ಕೃಷಿ ಸಂಸ್ಕೃತಿಯನ್ನೊಳಗೊಂಡ ತುಳುನಾಡಿನ ಜಾನಪದ ಕ್ರೀಡೆ ಕಂಬಳ ನಡೆಸಲು ಜಿಲ್ಲಾಡಳಿತ ಉತ್ಸುಕವಾಗಿದೆ ಮತ್ತು ಜಿಲ್ಲಾಡಳಿತ ಸಂಪೂರ್ಣ ಸಹಕಾರ ನೀಡಲಿದೆ ಎಂದು ಕೋಟ ತಿಳಿಸಿದರು.

ತುಳುನಾಡ ಜನಪ್ರಿಯ ಕಂಬಳ ಸೀಸನ್ ಡಿಸೆಂಬರ್‌ ಬಳಿಕ ಆರಂಭ

ಸಂಸದ ನಳಿನ್‌ ಕುಮಾರ್‌ ಕಟೀಲು ಮಾತನಾಡಿ, ದೇಶಾದ್ಯಂತ ಈಗಾಗಲೇ ಬಹುತೇಕ ಅನ್‌ಲಾಕ್‌ ಆಗಿದ್ದು, ವ್ಯಾಪಾರ-ವಹಿವಾಟು ಯಥಾಸ್ಥಿತಿಗೆ ಮರಳುತ್ತಿವೆ. ಸದ್ಯದ ಪರಿಸ್ಥಿತಿ ಅವಲೋಕಿಸಿ ಕೇಂದ್ರದಿಂದ ಮತ್ತೊಂದು ಗೈಡ್‌ಲೈನ್ಸ್‌ ಬರಲಿದ್ದು, ಆ ಮಾರ್ಗಸೂಚಿ ಬಂದ ಬಳಿಕ ಕಂಬಳವನ್ನು ಯಾವ ರೀತಿ ಆಯೋಜನೆ ಮಾಡಬಹುದು ಎಂಬುದನ್ನು ನಿರ್ಧರಿಸಲಾಗುವುದು ಎಂದರು.

ತುಳುನಾಡಿನ ದೇವಾಲಯ, ಅಂಗಡಿಗಳಲ್ಲಿ ತುಳು ಲಿಪಿಯ ನಾಮಫಲಕ ಹಾಕಬೇಕಿದೆ; ದಯಾನಂದ್‌ ಕತ್ತಲ್ಸಾರ್

ಜಾನಪದ ಕ್ರೀಡೆ ಕಂಬಳದ ಹಿಂದೆ ದೈವಾರಾಧನೆ, ಕೃಷಿ ವೈಭವವಿದ್ದು, ಇದನ್ನು ಪ್ರವಾಸೋದ್ಯಮದ ನೆಲೆಯಲ್ಲೂ ಪರಿಗಣಿಸಲಾಗುತ್ತಿದೆ. ಕರಾವಳಿ ಆರ್ಥಿಕತೆಗೂ ಕಂಬಳ ಸಹಕಾರಿಯಾಗಿದೆ. ಕಂಬಳ ಆಯೋಜನೆ ವಿಚಾರದಲ್ಲಿ ಕಂಬಳ ಸಮಿತಿಗೆ ಸಂಪೂರ್ಣ ಸಹಕಾರ ನೀಡಲು ನಾವು ಬದ್ಧರಾಗಿದ್ದೇವೆ ಎಂದು ಸಂಸದ ನಳಿನ್‌ ಕುಮಾರ್‌ ತಿಳಿಸಿದರು.

ಕಂಬಳ ಕ್ಷೇತ್ರದ ನಾಲ್ವರಿಗೆ ಪ್ರಶಸ್ತಿಯ ಗರಿ: ಕರಾವಳಿಯ ಕ್ರೀಡಾಪಟುಗಳಿಗೆ ಒಲಿದ ಏಕಲವ್ಯ, ಕ್ರೀಡಾ ರತ್ನ

ಸಮಿತಿ ಬೇಡಿಕೆಯೇನು?: ಅನಾದಿ ಕಾಲದಿಂದ ದೈವ-ದೇವರ ಚಾರಿತ್ರಿಕ ಹಿನ್ನೆಲೆ, ಸಾಂಸ್ಕೃತಿಕ ಪರಂಪರೆ, ಸಾಮರಸ್ಯದ ಸಂಕೇತವಾಗಿರುವ ಕಂಬಳ ಕ್ರೀಡೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿಕಂಬಳ ಸಮಿತಿ ಶ್ರಮಿಸುತ್ತಿದೆ. ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿಆಚರಣೆಗೆ ಅಡ್ಡಿಯಾಗಿದ್ದು, ಸರಕಾರದ ಷರತ್ತು ಪಾಲಿಸಿಕೊಂಡು ಸೀಮಿತ ಕಂಬಳ ಆಚರಣೆಗೆ ಅವಕಾಶ ನೀಡಬೇಕೆಂದು ಕಂಬಳ ಸಮಿತಿ ಆಗ್ರಹಿಸಿದೆ.

ಕಂಬಳದಲ್ಲಿ 46 ಪದಕ ಪಡೆದು ಸಾರ್ವಕಾಲಿಕ ದಾಖಲೆ ಬರೆದ ಶ್ರೀನಿವಾಸ ಗೌಡ

ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಪಿ.ಆರ್‌. ಶೆಟ್ಟಿ, ಉಪಾಧ್ಯಕ್ಷ ನವೀನ್‌ಚಂದ್ರ ಆಳ್ವ ತಿರುವೈಲುಗುತ್ತು, ಗೌರವಾಧ್ಯಕ್ಷ ಬಾರ್ಕೂರು ಶಾಂತಾರಾಮ ಶೆಟ್ಟಿ, ಮಾಜಿ ಕಾರ್ಯದರ್ಶಿ ವಿಜಯ ಕುಮಾರ್‌ ಕಂಗಿನಮನೆ, ಮಂಗಳೂರು ಕಂಬಳ ಸಮಿತಿ ಅಧ್ಯಕ್ಷ ಬ್ರಿಜೇಶ್‌ ಚೌಟ, ಪ್ರಧಾನ ಕಾರ್ಯದರ್ಶಿ ಸುಜಿತ್‌, ಕಂಬಳ ಕೋಣಗಳ ಯಜಮಾನ ಮುಚ್ಚೂರು ಕಲ್ಕುಡ ಲೋಕೇಶ್‌ ಶೆಟ್ಟಿ, ತಿರುವೈಲು ಪಾಣಿಲ ಸತೀಶ್ಚಂದ್ರ ಸಾಲ್ಯಾನ್‌ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ