ಆ್ಯಪ್ನಗರ

ಶುದ್ಧ ಕನ್ನಡ ಯೋಗ್ಯತೆ: ಸಚಿವ ಅನಂತ ಕುಮಾರ ಹೆಗಡೆ ವಿವಾದಾತ್ಮಕ ಹೇಳಿಕೆ

ಶುದ್ಧ ಕನ್ನಡ ಯಾರಲ್ಲೂ ಇಲ್ಲ. ದಕ್ಷಿಣ ಕನ್ನಡ, ಶಿವಮೊಗ್ಗ, ಉತ್ತರ ಕನ್ನಡ ಪ್ರದೇಶದವರನ್ನು ಹೊರತುಪಡಿಸಿದರೆ ಇತರರಿಗೆ ಆ ಯೋಗ್ಯತೆಯೇ ಇಲ್ಲ ಎನ್ನುವ ಮೂಲಕ ಸಚಿವ ಅನಂತ ಕುಮಾರ್ ಹೆಗಡೆ ವಿವಾದ ಸೃಷ್ಟಿಸಿದ್ದಾರೆ.

Vijaya Karnataka Web 17 Feb 2018, 3:22 pm
ಪುತ್ತೂರು: ಇಂಗ್ಲಿಷ್‌ ಅನ್ನು ಶುದ್ಧ ಕನ್ನಡಕ್ಕೆ ಭಾಷಾಂತರ ಮಾಡುವುದೇ ಇಂದಿನ ಸವಾಲು. ಶುದ್ಧ ಕನ್ನಡ ಯಾರಲ್ಲೂ ಇಲ್ಲ. ಎಲ್ಲೋ ಒಂದು ಕಡೆ ದಕ್ಷಿಣ ಕನ್ನಡ, ಶಿವಮೊಗ್ಗ, ಉತ್ತರ ಕನ್ನಡ ಪ್ರದೇಶದವರನ್ನು ಹೊರತುಪಡಿಸಿದರೆ ಇತರರಿಗೆ ಆ ಯೋಗ್ಯತೆಯೇ ಇಲ್ಲ ಎನ್ನುವ ಮೂಲಕ ಕೇಂದ್ರ ಕೌಶಲ್ಯ ಅಭಿವೃದ್ದಿ ಸಚಿವ ಅನಂತ ಕುಮಾರ್ ಹೆಗಡೆ ವಿವಾದ ಸೃಷ್ಟಿಸಿದ್ದಾರೆ.
Vijaya Karnataka Web kannada and minister anant kumar hegde statement
ಶುದ್ಧ ಕನ್ನಡ ಯೋಗ್ಯತೆ: ಸಚಿವ ಅನಂತ ಕುಮಾರ ಹೆಗಡೆ ವಿವಾದಾತ್ಮಕ ಹೇಳಿಕೆ


ಪುತ್ತೂರು ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಧಾನ ಮಂತ್ರಿ ಕೌಶಲ್ಯ ಯೋಜನೆ ಅಡಿಯಲ್ಲಿ ಆರಂಭಿಸಲಾದ ಉಚಿತ ತಾಂತ್ರಿಕ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬೆಂಗಳೂರಿನ ಪರಿಸ್ಥಿತಿಯಂತೂ ಕೇಳುವುದೇ ಬೇಡ. ಅಲ್ಲಿನ ಸ್ಥಿತಿ ಚಿಂತಾ‌ಜನಕವಾಗಿದೆ. ಬೇಸಿಕ್ ಸ್ಕಿಲ್ ಇಲ್ಲದ ಸಿದ್ದಣ್ಣ ಸರಕಾರ ಇದೆ.
ರೀಜನಲ್ ಸ್ಕಿಲ್ ಗ್ಯಾಪ್ ಎನಾಲಿಸಿಸ್ ಮಾಡಲು ಕೇಂದ್ರ ಸರಕಾರ ನಮ್ಮ ರಾಜ್ಯ ಸರಕಾರಕ್ಕೆ ಅನುದಾನ ನೀಡಿದೆ. ಅದನ್ನು ನಮ್ಮ ಸಿದ್ದಣ್ಣ ಸರಕಾರ ಹೇಗೆ ಬಳಸುತ್ತದೋ ನೋಡಬೇಕು. ಬೇಸಿಕ್ ಸ್ಕಿಲ್ ಇಲ್ಲದವರು ಏನು ಮಾಡುತ್ತಾರೆ ಎಂದು ಲೇವಡಿ ಮಾಡಿದರು.


ಅಡಕೆ ಬಗ್ಗೆ ಚಿಂತೆ ಬೇಡ

ಇದಕ್ಕೂ ಮೊದಲು ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಸಚಿವರು, ಅಡಕೆ ಕ್ಯಾನ್ಸರ್ ಕಾರಕ ಎಂಬ ಕೇಂದ್ರ ಸರಕಾರದ ವರದಿಯ ಬಗ್ಗೆ ಬೆಳೆಗಾರರು ಚಿಂತೆ ಮಾಡಬೇಕಿಲ್ಲ ಎಂದರು.
ಕೇಂದ್ರ ಆರೋಗ್ಯ ಸಚಿವರು ಈ ವರದಿಯನ್ನು ಆಧರಿಸಿ ಸಂಸತ್ತಿನಲ್ಲಿ ಉತ್ತರ ನೀಡಿದ್ದು ಆ ಮೇಲೆ ನಮಗೆ ತಿಳಿಯಿತು. ಈ ಬಗ್ಗೆ ಸಚಿವರ ಜತೆ ಮಾತಾಡಿದ್ದೇವೆ. ಅಡಕೆಯ ಬಗ್ಗೆ ಮತ್ತೊಮ್ಮೆ ಸಿಪಿಸಿಆರ್ ಐ ಮೂಲಕ ಸಂಶೋಧನೆ ಮಾಡಿಸುವಂತೆ ಇಲಾಖೆಗೆ ಮನವರಿಕೆ ಮಾಡಲಾಗುವುದು ಎಂದು ಸಚಿವರು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ