ಆ್ಯಪ್ನಗರ

ಕಂಕನಾಡಿ ಗರೋಡಿ ಬ್ರಹ್ಮಬೈದರ್ಕಳ ಕ್ಷೇತ್ರದ ಅಧ್ಯಕ್ಷ ಕೇಶವ ಅಂಗಡಿಮಾರು ನಿಧನ

ಮಂಗಳೂರು: ಕಂಕನಾಡಿ ಗರೋಡಿ ಬ್ರಹ್ಮಬೈದರ್ಕಳ ಕ್ಷೇತ್ರದ ಅಧ್ಯಕ್ಷರು, ಧಾರ್ಮಿಕ ಮುಂದಾಳು, ಕೊಡುಗೈದಾನಿ ಜಪ್ಪಿನಮೊಗರು ನಿವಾಸಿ ಜೆ. ಕೇಶವ ಅಂಗಡಿಮಾರು (52) ಹೃದಯಾಘಾತದಿಂದ ಭಾನುವಾರ ನಿಧನರಾದರು.

Vijaya Karnataka 24 Jun 2019, 5:00 am
ಮಂಗಳೂರು: ಕಂಕನಾಡಿ ಗರೋಡಿ ಬ್ರಹ್ಮಬೈದರ್ಕಳ ಕ್ಷೇತ್ರದ ಅಧ್ಯಕ್ಷರು, ಧಾರ್ಮಿಕ ಮುಂದಾಳು, ಕೊಡುಗೈದಾನಿ ಜಪ್ಪಿನಮೊಗರು ನಿವಾಸಿ ಜೆ. ಕೇಶವ ಅಂಗಡಿಮಾರು (52) ಹೃದಯಾಘಾತದಿಂದ ಭಾನುವಾರ ನಿಧನರಾದರು.
Vijaya Karnataka Web kesava angadimaaru dead
ಕಂಕನಾಡಿ ಗರೋಡಿ ಬ್ರಹ್ಮಬೈದರ್ಕಳ ಕ್ಷೇತ್ರದ ಅಧ್ಯಕ್ಷ ಕೇಶವ ಅಂಗಡಿಮಾರು ನಿಧನ


ಶನಿವಾರ ಹಠಾತ್‌ ಅಸ್ವಸ್ಥಕ್ಕೀಡಾದ ಅವರನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಭಾನುವಾರ ಸಂಜೆಯ ವೇಳೆಗೆ ಮೃತಪಟ್ಟಿದ್ದಾರೆ. ಅವರಿಗೆ ಪತ್ನಿ, ಮಕ್ಕಳು ಇದ್ದಾರೆ.

ಗೃಹರಕ್ಷಕದಳದಲ್ಲಿ ಸುಮಾರು 2 ದಶಕಗಳ ಕಾಲ ಸೇವೆ ಸಲ್ಲಿಸಿದ ಅವರು ಸæೕವೆಗೆ ವಿಶೇಷ ಪ್ರಶಸ್ತಿ ಪಡೆದಿದ್ದರು. ಕಂಕನಾಡಿ ಗರೋಡಿ ಕ್ಷೇತ್ರದ ಅಧ್ಯಕ್ಷರಾಗಿ 4 ತಿಂಗಳ ಹಿಂದೆಯಷ್ಟೇ ಆಯ್ಕೆಯಾಗಿದ್ದರು. ಧಾರ್ಮಿಕ ಸಾಮಾಜಿಕ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡ ಇವರು ಕೊಡುಗೈದಾನಿಯಾಗಿ ಶಿಕ್ಷಣ ಸಂಸ್ಥೆ, ಸಂಘಸಂಸ್ಥೆಗಳಿಗೆ ನೆರವು ನೀಡಿದ್ದರು. ಜಪ್ಪಿನಮೊಗರು ನಾರಾಯಣಗುರು ಮಂದಿರದ ಮಾಜಿ ಅಧ್ಯಕ್ಷ, ಜಪ್ಪಿನಮೊಗರು ಕಂರ್ಭಿಸ್ಥಾನ ಶ್ರೀ ವೈದ್ಯನಾಥ ದೈವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ, ಸೂರ್ಯನಾರಾಯಣ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷ, ಜಪ್ಪಿನಮೊಗರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ, ಜಪ್ಪಿನಮೊಗರು ಜಯ-ವಿಜಯ ಜೋಡುಕರೆ ಕಂಬಳದ ವ್ಯವಸ್ಥಾಪನಾ ಸಮಿತಿಯ ಪ್ರಧಾನ ಸಂಚಾಲಕರಾಗಿ,ಬಿಕರ್ನಕಟ್ಟೆ ಬಜ್ಜೋಡಿ ಶ್ರೀ ವೀರಮಾರುತಿ ವ್ಯಾಯಾಮ ಶಾಲೆಯ ಸ್ಥಾಪಕರಾಗಿದ್ದು ಹಲವಾರು ಯುವಕರಿಗೆ ತಾಲೀಮು ತರಬೇತಿ ನೀಡುವ ಮೂಲಕ ಸೇವೆ ಸಲ್ಲಿಸಿದ್ದರು.

ನೂರಾರು ಮಂದಿಗೆ ಉದ್ಯೋಗದಾತರು: ಸುಮಾರು 30 ವರ್ಷಗಳಿಂದ ನಗರದಲ್ಲಿ ಸೆಂಟ್ರಿಂಗ್‌ ಕಂಟ್ರಾಕ್ಟುದಾರರಾಗಿದ್ದು, ನೂರಾರು ಮಂದಿಗೆ ಉದ್ಯೋಗ ನೀಡಿದವರು. ಇವರ ಅಂತ್ಯಕ್ರಿಯೆ ಸೋಮವಾರ (ಜೂ.24) 11ಗಂಟೆಗೆ ಜಪ್ಪಿನಮೊಗರು ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ