ಆ್ಯಪ್ನಗರ

ಶಾಲಾ ವ್ಯಾನ್ ಮೇಲೆ ಉರುಳಿ ಬಿದ್ದ ಮರ; ವಿದ್ಯಾರ್ಥಿಗಳು ಅಪಾಯದಿಂದ ಪಾರು

ಶಾಲೆಗೆ ತೆರಳುತ್ತಿದ್ದ ಮಕ್ಕಳಿದ್ದ ಬಸ್ ಮೇಲೆ ಮರ ಉರುಳಿ ಬಿದ್ದಿದೆ.

Vijaya Karnataka Web 14 Aug 2019, 12:16 pm
ಮಂಗಳೂರು : ಸಂಚರಿಸುತ್ತಿದ್ದ ಖಾಸಗಿ ಶಾಲಾ ವ್ಯಾನ್ ಮೇಲೆ ಮರ ಉರುಳಿ ಬಿದ್ದ ಘಟನೆ ನಗರದ ನಂತೂರು ಬಳಿ ಬುಧವಾರ ಬೆಳಗ್ಗೆ ನಡೆದಿದೆ. ಅದೃಷ್ಟವಶಾತ್ ವ್ಯಾನ್ ನಲ್ಲಿದ್ದ ಎಲ್ಲ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ.
Vijaya Karnataka Web Bus


ನಗರದ ಹೊರವಲಯದ ಖಾಸಗಿ ಶಿಕ್ಷಣ ಸಂಸ್ಥೆ ಕ್ಯಾಂಬ್ರಿಜ್ಡ್ ಶಾಲೆಯ ವ್ಯಾನ್ ನಲ್ಲಿ ಮಕ್ಕಳನ್ನು ಕರೆದೊಯ್ಯುತ್ತಿದ್ದಾಗ ನಂತೂರು ಬಳಿ ಬೆಳಗ್ಗೆ 9 ಗಂಟೆ ಸುಮಾರಿಗೆ ಈ ಅನಾಹುತ ಸಂಭವಿಸಿದೆ.

ವ್ಯಾನ್ ನಲ್ಲಿ 17 ಮಂದಿ ಮಕ್ಕಳು ಇದ್ದರು. ಮರ ಬಿದ್ದಿದ್ದರಿಂದ ವ್ಯಾನ್ ಸ್ವಲ್ಪ ಜಖಂಗೊಂಡಿದ್ದು, ಅದರಲ್ಲಿದ್ದ ಎಲ್ಲ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಡಾ.ಹರ್ಷ ತಿಳಿಸಿದ್ದಾರೆ.

ಈ ಘಟನೆ ಪರಿಣಾಮ ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ಥವಾಯಿತು. ಸ್ಥಳಕ್ಕೆ ಡಿಸಿಪಿ ಹಾಗೂ ಕದ್ರಿ ಸಂಚಾರ ಠಾಣೆ ಪೊಲೀಸರು ತೆರಳಿ ಮರವನ್ನು ತೆರವುಗೊಳಿಸಲು ನೆರವಾದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ