ಆ್ಯಪ್ನಗರ

ಬಟ್ಟಂಪ್ಪಾಡಿ ಕಡಲ್ಕೊರೆತ ಪ್ರದೇಶಕ್ಕೆ ವಿಧಾನ ಪರಿಷತ್‌ ಸದಸ್ಯ, ಸಂಸದ ಭೇಟಿ

ಕಡಲ್ಕೊರೆತದ ತೀವ್ರತೆ ಹೆಚ್ಚಿರುವ ಸೋಮೇಶ್ವರ ಉಚ್ಚಿಲ ಭಾಗದಲ್ಲಿ ನೂರಕ್ಕೂ ಹೆಚ್ಚು ಮೀಟರ್‌ ವ್ಯಾಪ್ತಿಯಲ್ಲಿ ಕೊರೆತ ಉಂಟಾಗಿದೆ. ಕೂಡಲೇ ಸಂತ್ರಸ್ತ ಪೀಡಿತರಿಗೆ ನೆರವು ನೀಡುವಂತೆ ಮುಖ್ಯಮಂತ್ರಿಗಳ ಆದೇಶದಂತೆ ನೋಡೆಲ್‌ ಅಧಿಕಾರಿ ತಹಸೀಲ್ದಾರ್‌ ಮತ್ತು ಜಿಲ್ಲಾಧಿಕಾರಿಯಿಂದ ವರದಿ ಸಂಗ್ರಹಿಸಲಾಗುವುದು ಎಂದು ವಿಧಾನ ಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

Vijaya Karnataka 9 Aug 2019, 5:00 am
ತೊಕ್ಕೊಟ್ಟು: ಕಡಲ್ಕೊರೆತದ ತೀವ್ರತೆ ಹೆಚ್ಚಿರುವ ಸೋಮೇಶ್ವರ ಉಚ್ಚಿಲ ಭಾಗದಲ್ಲಿ ನೂರಕ್ಕೂ ಹೆಚ್ಚು ಮೀಟರ್‌ ವ್ಯಾಪ್ತಿಯಲ್ಲಿ ಕೊರೆತ ಉಂಟಾಗಿದೆ. ಕೂಡಲೇ ಸಂತ್ರಸ್ತ ಪೀಡಿತರಿಗೆ ನೆರವು ನೀಡುವಂತೆ ಮುಖ್ಯಮಂತ್ರಿಗಳ ಆದೇಶದಂತೆ ನೋಡೆಲ್‌ ಅಧಿಕಾರಿ ತಹಸೀಲ್ದಾರ್‌ ಮತ್ತು ಜಿಲ್ಲಾಧಿಕಾರಿಯಿಂದ ವರದಿ ಸಂಗ್ರಹಿಸಲಾಗುವುದು ಎಂದು ವಿಧಾನ ಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
Vijaya Karnataka Web MNR-8ULLAL KATEEL


ಸೋಮೇಶ್ವರ ಉಚ್ಚಿಲದ ಬಟ್ಟಂಪ್ಪಾಡಿ, ಸೋಮೇಶ್ವರ, ಉಚ್ಚಿಲದ ಸಮುದ್ರ ಕೊರೆತಕ್ಕೆ ಒಳಗಾದ ಪ್ರದೇಶಕ್ಕೆ ಭೇಟಿ ನೀಡಿ ಬಳಿಕ ಮಾತನಾಡಿದ ಅವರು, ರಾಜ್ಯಾದ್ಯಂತ ನಾಯಕರಿಗೆ ಆಯಾಯ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದೆ. ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಉಡುಪಿ, ಚಿಕ್ಕಮಗಳೂರು ಹಾಗೂ ಮಂಗಳೂರು ಮಳೆಹಾನಿ ಪ್ರದೇಶದ ಜವಾಬ್ದಾರಿ ನೀಡಲಾಗಿದೆ. ಸಂಸದ ನಳಿನ್‌ ಕುಮಾರ್‌ ಕಟೀಲ್‌ ಮತ್ತು ನಾನು ಉಡುಪಿ, ಬ್ರಹ್ಮಾವರ ಹಾಗೂ ಮಂಗಳೂರು ಭಾಗಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದೇವೆ. ತುರ್ತು ಪರಿಹಾರವಾಗಿ ಅದಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದರು.

ಸುಳ್ಯದ ಕಲ್ಮಡ್ಕ ಮತ್ತು ಕಡಬ ಪ್ರದೇಶದಲ್ಲಿ ಸಂತ್ರಸ್ತರ ಶಿಬಿರ ಏರ್ಪಡಿಸಲಾಗಿದೆ. ಜಿಲ್ಲೆಯಾದ್ಯಂತ ವಿಪತ್ತು ದಳವನ್ನು ಸಜ್ಜಾಗಿ ನಿಲ್ಲಿಸಲು ಸೂಚಿಸಲಾಗಿದ್ದು, ಎರಡು ಎನ್‌ಡಿಆರ್‌ಎಫ್‌ ಪಡೆ ಕಾರ್ಯಾಚರಿಸುತ್ತಿದೆ. ತಹಸೀಲ್ದಾರರನ್ನು ನೋಡೆಲ್‌ ಅಧಿಕಾರಿಯಾಗಿ ನೇಮಿಸಿ, ಜಿಲ್ಲಾಧಿಕಾರಿಗಳ ಜತೆ ತೊಂದರೆಗೀಡಾದ ಪ್ರದೇಶಗಳ ಕುರಿತು ಚರ್ಚಿಸಲಾಗಿದೆ. ಸಂದಿಗ್ಧ ಸ್ಥಿತಿಯಲ್ಲಿ ಸ್ಪಂದಿಸುವಂತೆ ಇಲಾಖೆಗಳಿಗೆ ಸೂಚಿಸಲಾಗಿದೆ. ಬ್ರಹ್ಮಾವರ ಕಡೆ ಮಳೆಯಿಂದ ಸಾವು ಸಂಭವಿಸಿದೆ. ಮನೆಮಂದಿಗೆ ನಾಳೆಯೇ ಪರಿಹಾರ ಕೊಡುತ್ತೇವೆ ಎಂದರು.

ಸಂಸದ ನಳಿನ್‌ ಕುಮಾರ್‌ ಕಟೀಲ್‌ ಮಾತನಾಡಿ, ಸಂತ್ರಸ್ತರಿಗೆ ಗಂಜಿ ಕೇಂದ್ರಗಳನ್ನು ತೆರೆಯುವಂತೆ ಸೂಚಿಸಲಾಗಿದೆ. ಮಂಗಳೂರಿನ ಎರಡು ಭಾಗಗಳಲ್ಲಿ ಅತಿವೃಷ್ಠಿ ಸಂಭವಿಸಿದೆ. ಉಚ್ಚಿಲದಲ್ಲಿ ಕಡಲ್ಕೊರೆತ, ಪಚ್ಚನಾಡಿಯಲ್ಲಿ ಮನೆ ಕುಸಿತ ಸಂಭವಿಸಿದೆ. ಸಂತ್ರಸ್ತರಿಗೆ ರಕ್ಷ ಣೆ ಕೊಡುವ ಕೆಲಸವಾಗಿದೆ. ಅಧಿಕಾರಿಗಳ ತಂಡ ಕ್ರಿಯಾಶೀಲವಾಗಿ ಇರುವಂತೆ ಆದೇಶಿಸಲಾಗಿದೆ ಎಂದರು.

ತಹಸೀಲ್ದಾರ್‌ ಗುರುಪ್ರಸಾದ್‌, ಕೋಟೆಕಾರು ಪಟ್ಟಣ ಪಂಚಾಯಿತಿ ಕಿರಿಯ ಅಭಿಯಂತರ ನಿತೇಶ್‌ ಹೊಸಗದ್ದೆ, ಬಿಜೆಪಿ ಜಿಲ್ಲಾ ವಕ್ತಾರ ಹರಿಕೃಷ್ಣ ಬಂಟ್ವಾಳ, ಮಂಗಳೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಸಂತೋಷ್‌ ಕುಮಾರ್‌ ರೈ ಬೋಳಿಯಾರ್‌, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಚಂದ್ರಹಾಸ್‌ ಉಳ್ಳಾಲ್‌, ಕಾರ್ಯದರ್ಶಿ ಸತೀಶ್‌ ಕುಂಪಲ, ಕ್ಷೇತ್ರ ಮಾಜಿ ಅಧ್ಯಕ್ಷ ಚಂದ್ರಶೇಖರ್‌ ಉಚ್ಚಿಲ್‌, ಜಿಲ್ಲಾ ಪಂಚಾಯಿತಿ ಸದಸ್ಯೆ ಧನಲಕ್ಷ್ಮಿಗಟ್ಟಿ ಸೋಮೇಶ್ವರ ಪುರಸಭೆಯ ಅಧ್ಯಕ್ಷ ರಾಜೇಶ್‌ ಉಚ್ಚಿಲ್‌, ಮುಖ್ಯಾಧಿಕಾರಿ ವಾಣಿ ವಿ. ಆಳ್ವ, ಕ್ಷೇತ್ರ ಉಪಾಧ್ಯಕ್ಷ ಪ್ರಕಾಶ್‌ ಸಿಂಪೊನಿ, ಚಂದ್ರಹಾಸ್‌ ಪಂಡಿತ್‌ ಹೌಸ್‌ ಹಾಗೂ ಪುರುಷೋತ್ತಮ ಕಲ್ಲಾಪು ಜತೆಗಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ