ಆ್ಯಪ್ನಗರ

ದ.ಕ. ಲಾಕ್ ಡೌನ್: ಸಿಎಂ ಜತೆ ಚರ್ಚಿಸಿ ತೀರ್ಮಾನ, ಕೋಟ ಸ್ಪಷ್ಟನೆ

ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್‌ಡೌನ್ ಮಾಡುವ ಕುರಿತಾಗಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರ ಜೊತೆಗೆ ಸೋಮವಾರ ಚರ್ಚೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದಾರೆ ಕೋಟ ಶ್ರೀನಿವಾಸ್‌ ಪೂಜಾರಿ.

Vijaya Karnataka Web 12 Jul 2020, 3:59 pm
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿಗೆ ತರುವ ಬಗ್ಗೆ ಯಾವುದೇ ನಿರ್ಧಾರ ಆಗಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟ ಪಡಿಸಿದ್ದಾರೆ.
Vijaya Karnataka Web kota shrinivas poojary


ಜಿಲ್ಲೆಯ ಕೋವಿಡ್ ಪರಿಸ್ಥಿತಿ ಅಧ್ಯಯನ ಮಾಡಲು ಭಾನುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಲೋಕಸಭಾ ಸದಸ್ಯ ನಳಿನ್ ಕುಮಾರ್ ಹಾಗೂ ಜಿಲ್ಲಾಧಿಕಾರಿ ಜತೆ ಸಭೆ ನಡೆಸಲಾಗಿದೆ. ಸಭೆಯಲ್ಲಿ ಲಾಕ್ ಡೌನ್ ಕುರಿತು ಯಾವುದೇ ತೀರ್ಮಾನ ಕೈಗೊಂಡಿಲ್ಲ.

ಕೊರೊನಾ ಕ್ವಾರಂಟೈನ್:ಕಾಲ ಕಳೆಯಲು ‘ಯಯಾತಿಯ’ ಮೊರೆ ಹೋದ ಬಿಎಸ್‌ವೈ

ಸೋಮವಾರ ಬೆಳಗ್ಗೆ 11 ಗಂಟೆಗೆ ಜಿಲ್ಲೆಯ ಪರಿಸ್ಥಿತಿ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಲಿದದ್ದು, ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಜಿಲ್ಲೆಯ ಅಲ್ಲಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಲಾಕ್ ಡೌನ್ ನಡೆಸುತ್ತಿರುವುದು ಗಮನಕ್ಕೆ ಬಂದಿದೆ. ಜನರಿಗೆ ತೊಂದರೆ ಆಗುವ ಯಾವುದೇ ನಿರ್ಧಾರವನ್ನು ಧಿಡೀರನೇ ಜಾರಿಗೆ ತರುವುದಿಲ್ಲ.

ಜನರು ಗೊಂದಲಕ್ಕೀಡಾಗಬಾರದು. ಯಾವುದೇ ತೀರ್ಮಾನವನ್ನು ನಾಳೆಯ ಸಭೆಯಲ್ಲಿ ಮುಖ್ಯಮಂತ್ರಿಗಳ ಸಲಹೆ ಸೂಚನೆಯಂತೆ ಅನುಸರಿಸಲಾಗುವುದು ಎಂದು ಸಚಿವ ಕೋಟ ಸ್ಪಷ್ಟಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ