ಆ್ಯಪ್ನಗರ

ಬಂಟ್ವಾಳ ಬಳಿ ಕಾರು-ಬಸ್ ಡಿಕ್ಕಿ, ಇಬ್ಬರ ಮೃತ್ಯು

ಮಂಗಳೂರು ಜಪ್ಪುಗುಡ್ಡೆ ನಿವಾಸಿಗಳಾದ ರುಕ್ಮಿಣಿ ಸಿ. ಮಲ್ಲಿ (63) ಮತ್ತು ಸರೋಜಿನಿ ಟಿ. ಶೆಟ್ಟಿ (65) ಮೃತಪಟ್ಟವರು. ಕಾರಿನಲ್ಲಿದ್ದ ಅನುಷಾ (40), ಕಾರು ಚಾಲಕ ಮಂಗಳೂರಿನ ಶಕ್ತಿನಗರ ನಿವಾಸಿ ಉಮೇಶ್ (45) ಗಾಯಗಳೊಂದಿಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮಾಹಿತಿ ಲಭಿಸಿದೆ.

Vijaya Karnataka Web 26 Apr 2019, 6:04 pm
Vijaya Karnataka Web Bantwal Accident
ಬಂಟ್ವಾಳ: ಬಿ.ಸಿ. ರೋಡಿನ ಪಾಣೆಮಂಗಳೂರು ರಾಷ್ಟ್ರೀಯ ಹೆದ್ದಾರಿ ಸಾಗರ್ ಆಡಿಟೋರಿಯಂ ಎದುರು ಶುಕ್ರವಾರ ಮಧ್ಯಾಹ್ನ ನಡೆದ ಭೀಕರ ಅಘಪಾತದಲ್ಲಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಕೆಎಸ್ಸಾರ್ಟಿಸಿ ಬಸ್ ಮತ್ತು ಸೆಲೆರಿಯೋ ಮಾರುತಿ ಕಾರ್ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತದ ರಭಸಕ್ಕೆ ಕಾರಿನ ಎದುರು ಭಾಗ ನಜ್ಜುಗುಜ್ಜಾಗಿದೆ.

ಮಂಗಳೂರು ಜಪ್ಪುಗುಡ್ಡೆ ನಿವಾಸಿಗಳಾದ ರುಕ್ಮಿಣಿ ಸಿ. ಮಲ್ಲಿ (63) ಮತ್ತು ಸರೋಜಿನಿ ಟಿ. ಶೆಟ್ಟಿ (65) ಮೃತಪಟ್ಟವರು. ಕಾರಿನಲ್ಲಿದ್ದ ಅನುಷಾ (40), ಕಾರು ಚಾಲಕ ಮಂಗಳೂರಿನ ಶಕ್ತಿನಗರ ನಿವಾಸಿ ಉಮೇಶ್ (45) ಗಾಯಗಳೊಂದಿಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮಾಹಿತಿ ಲಭಿಸಿದೆ.

ಕಾರಿನಲ್ಲಿದ್ದವರು ನರಿಕೊಂಬು ಪರಿಸರದಲ್ಲಿ ನಡೆಯುತ್ತಿದ್ದ ಗೃಹಪ್ರವೇಶಕ್ಕೆ ತೆರಳುತ್ತಿದ್ದರು ಎನ್ನಲಾಗಿದ್ದು, ಬಸ್ಸು ಉಪ್ಪಿನಂಗಡಿಯಿಂದ ಮಂಗಳೂರಿಗೆ ಬರುತ್ತಿದ್ದರೆ, ಕಾರು ಮಂಗಳೂರಿನಿಂದ ಪಾಣೆಮಂಗಳೂರು ಕಡೆಗೆ ಸಾಗುತ್ತಿತ್ತು.

ಬಂಟ್ವಾಳ ಟ್ರಾಫಿಕ್ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದು, ಹೆಚ್ಚಿನ ವಿವರಗಳು ಇನ್ನಷ್ಟೇ ದೊರಕಬೇಕಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ