ಆ್ಯಪ್ನಗರ

ಕುಕ್ಕೆ ಸುಬ್ರಹ್ಮಣ್ಯ: ಭಕ್ತಿ ಸಂಭ್ರಮದ ಕಿರುಷಷ್ಠಿ ರಥೋತ್ಸವ

ಮಹತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಪುಷ್ಯ ಶುದ್ಧ ಕಿರುಷಷ್ಠಿಯ ದಿನವಾದ ಶನಿವಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರ ಕಿರುಷಷ್ಠಿ ರಥೋತ್ಸವ ಭಕ್ತಿ ಸಡಗರದಿಂದ ನೆರವೇರಿತು.

Vijaya Karnataka 13 Jan 2019, 3:02 pm
ಸುಬ್ರಹ್ಮಣ್ಯ : ಮಹತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಪುಷ್ಯ ಶುದ್ಧ ಕಿರುಷಷ್ಠಿಯ ದಿನವಾದ ಶನಿವಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರ ಕಿರುಷಷ್ಠಿ ರಥೋತ್ಸವ ಭಕ್ತಿ ಸಡಗರದಿಂದ ನೆರವೇರಿತು.
Vijaya Karnataka Web kukke subhramanya kiru sasti
ಕುಕ್ಕೆ ಸುಬ್ರಹ್ಮಣ್ಯ: ಭಕ್ತಿ ಸಂಭ್ರಮದ ಕಿರುಷಷ್ಠಿ ರಥೋತ್ಸವ


ರಥಾರೋಹಣದ ಬಳಿಕ ಶ್ರೀದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತರಾಮ ಯಡಪಡಿತ್ತಾಯ ಅವರು ಶ್ರೀದೇವರಿಗೆ ಪೂಜೆ ನೆರವೇರಿಸಿದರು. ಬಳಿಕ ಸವಾರಿಮಂಟಪದ ಕಿರುಷಷ್ಠಿ ಕಟ್ಟೆಯಲ್ಲಿ ದೇವರಿಗೆ ಪೂಜೆ ನೆರವೇರಿತು. ಬಳಿಕ ದೇವಳದ ಹೊರಾಂಗಣದಲ್ಲಿ ಪಾಲಕಿ ಉತ್ಸವ, ಬಂಡಿ ಉತ್ಸವ ನಡೆಯಿತು.

ರಥೋತ್ಸವದ ಬಳಿಕ ನಡೆದ ಒಳಾಂಗಣ ಉತ್ಸವದಲ್ಲಿ ಅನೇಕ ಸಂಗೀತಮಯ ಉತ್ಸವದ ಸುತ್ತುಗಳು ನೆರವೇರಿತು. ತಮಿಳುನಾಡು, ಕೇರಳ, ಮೈಸೂರು, ಶ್ರೀರಂಗಪಟ್ಟಣದ ಕಲಾವಿದರಿಂದ ಸ್ಯಾಕ್ಸೋಫೋನ್‌, ನಾದಸ್ವರ, ತವಿಲ್‌, ಬ್ಯಾಂಡ್‌ ಮೊದಲಾದ ಸಂಗೀತ ವಾದ್ಯಗಳ ಉತ್ಸವಗಳ ಸುತ್ತುಗಳು ಭಕ್ತಾಧಿಗಳನ್ನು ಭಾವಪರವಶವಾಗುವಂತೆ ಮಾಡಿತು. ಕೇರಳ ಶೈಲಿಯ ಚೆಂಡೆ ವಾದನದ ಕೂಡಾ ನಡೆಯಿತು.

80 ಭಕ್ತರಿಂದ ಎಡೆಸ್ನಾನ: ಮಧ್ಯಾಹ್ನ ಮಹಾಪೂಜೆಯ ನಂತರ ಹೊರಾಂಗಣದಲ್ಲಿ 80 ಭಕ್ತರು ಎಡಸ್ನಾನ ಸೇವೆ ನೆರವೇರಿಸಿದರು. ಧಾರ್ಮಿಕ ದತ್ತಿ ಇಲಾಖೆಯ ಶೈವಾಗಮ ಪಂಡಿತ ಪ್ರೊ.ಶಿವಕುಮಾರ್‌ ಅವರು ಎಡೆಸ್ನಾನ ಕುರಿತು ಮಾರ್ಗದರ್ಶನ ನೀಡಿದರು. ಹೊರಾಂಗಣದ ಸುತ್ತಲೂ 432 ಬಾಳೆಎಲೆಗಳನ್ನು ಹಾಕಿ ಅದರ ಮೇಲೆ ದೇವರ ನೈವೇಧ್ಯ ಹಾಕಲಾಯಿತು. ಬಳಿಕ ದೇವಳದ ಗೋವುಗಳು ಎಲೆಗಳಲ್ಲಿದ್ದ ಅನ್ನಪ್ರಸಾದ ಸ್ವೀಕರಿಸಿದವು. ಹಸುಗಳು ತಿಂದ ಅನ್ನಪ್ರಸಾದದ ಮೇಲೆ ದೇವಳದೆದುರಿನ ದರ್ಪಣತೀರ್ಥ ನದಿಯಲ್ಲಿ ಮಿಂದು ನಿಂತಿದ್ದ ಎಲ್ಲ ವಯೋಮಾನದ ಭಕ್ತರು ಉರುಳು ಸೇವೆ ಕೈಗೊಂಡರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ