ಆ್ಯಪ್ನಗರ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದು ಪಂಚಮಿ, ನಾಳೆ ಬ್ರಹ್ಮರಥೋತ್ಸವ

ಕುಕ್ಕೆಶ್ರೀ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ವಾರ್ಷಿಕ ಜಾತ್ರೆ ಪ್ರಯುಕ್ತ ಮಾರ್ಗಶಿರ ಶುದ್ಧ ಪಂಚಮಿಯ ದಿನವಾದ ಭಾನುವಾರ ರಾತ್ರಿ ಪಂಚಮಿ ತೇರು ನಾಳೆ ಬ್ರಹ್ಮರಥೋತ್ಸವ ನಡೆಯಲಿದೆ. ಜಾತ್ರಾ ಮಹೋತ್ಸವ ನಡೆಯುವ ಪ್ರಧಾನ ಮೂರು ದಿನಗಳಾದ ಚೌತಿ, ಪಂಚಮಿ ಹಾಗೂ ಷಷ್ಠಿಯಂದು ರಾತ್ರಿ ಪ್ರಾರ್ಥನೆ ಸೇವೆ ನಡೆಯುವುದಿಲ್ಲ.

Vijaya Karnataka Web 1 Dec 2019, 3:36 pm
ಸುಬ್ರಹ್ಮಣ್ಯ: ಕುಕ್ಕೆಶ್ರೀ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ವಾರ್ಷಿಕ ಜಾತ್ರೆ ಪ್ರಯುಕ್ತ ಮಾರ್ಗಶಿರ ಶುದ್ಧ ಪಂಚಮಿಯ ದಿನವಾದ ಭಾನುವಾರ ಮಧ್ಯಾಹ್ನ ಪಲ್ಲಪೂಜೆ, ರಾತ್ರಿ ತೈಲಾಭ್ಯಂಜನ, ಪಂಚಮಿ ರಥೋತ್ಸವ, ರಾತ್ರಿ ವಿಶೇಷ ಪಾಲಕಿ ಉತ್ಸವ ಮತ್ತು ಬಂಡಿ ಉತ್ಸವ ದೇಗುಲದ ಹೊರಾಂಗಣದಲ್ಲಿಜರುಗಲಿದ್ದು, ರಥೋತ್ಸವದ ಬಳಿಕ ಸವಾರಿ ಕಟ್ಟೆಯಲ್ಲಿಕಟ್ಟೆಪೂಜೆ ಮತ್ತು ಆಕರ್ಷಣೀಯ ಕುಕ್ಕೆ ಬೆಡಿ ಪ್ರದರ್ಶನಗೊಳ್ಳಲಿದೆ.
Vijaya Karnataka Web subba


ಪ್ರಾರ್ಥನೆ ಸೇವೆಯಿಲ್ಲ: ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರೆಯಾದ ಚಂಪಾಷಷ್ಠಿ ಜಾತ್ರಾ ಮಹೋತ್ಸವ ನಡೆಯುವ ಪ್ರಧಾನ ಮೂರು ದಿನಗಳಾದ ಚೌತಿ, ಪಂಚಮಿ ಹಾಗೂ ಷಷ್ಠಿಯಂದು ದೇವಸ್ಥಾನದಲ್ಲಿರಾತ್ರಿ ಪ್ರಾರ್ಥನೆ ಸೇವೆ ನಡೆಯುವುದಿಲ್ಲ. ಮಹಾಪೂಜೆ ಬಳಿಕ ಮಧ್ಯಾಹ್ನ ಮತ್ತು ರಾತ್ರಿ ಭಕ್ತರ ಪ್ರಾರ್ಥನೆ ಸೇವೆಯನ್ನು ಶ್ರೀ ದೇವರ ಗರ್ಭಗುಡಿಯ ಎದುರು ಅರ್ಚಕರು ನೆರವೇರಿಸುತ್ತಿದ್ದರು. ಆದರೆ ಜಾತ್ರಾ ಸಮಯದ ಮೂರು ದಿನ ಭಕ್ತರು ಅಧಿಕ ಸಂಖ್ಯೆಯಲ್ಲಿ ಬರುವುದರಿಂದ ಭಕ್ತರಿಗೆ ದರ್ಶನಕ್ಕೆ ಹೆಚ್ಚು ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.ಅಲ್ಲದೆ ಪಂಚಾಮೃತ ಮಹಾಭಿಷೇಕ ಸೇವೆ ಈ ದಿನಗಳಲ್ಲಿನಡೆಯುವುದಿಲ್ಲ. ಷಷ್ಠಿಯಂದು ಆಶ್ಲೇಷ ಬಲಿ ಹಾಗೂ ನಾಗಪ್ರತಿಷ್ಠೆ ಸೇವೆಗಳು ನೆರವೇರುವುದಿಲ್ಲ.

ಹೂವಿನ ತೇರಿನ ಉತ್ಸವ: ಚೌತಿ ದಿನವಾದ ಶನಿವಾರ ರಾತ್ರಿ ಪುಷ್ಪಾಲಂಕೃತ ರಥದಲ್ಲಿ ಶ್ರೀಸುಬ್ರಹ್ಮಣ್ಯ ದೇವರ ಹೂ ತೇರು ಉತ್ಸವ ನಡೆಯಿತು. ಬಳಿಕ ಉತ್ತರಾಧಿ ಮಠದಲ್ಲಿಮಯೂರ ವಾಹನ ಸುಬ್ರಹ್ಮಣ್ಯ ದೇವರಿಗೆ ಪೂಜೆ ನಡೆಯಿತು. ಹೂವಿನ ತೇರಿನಲ್ಲಿಸುಬ್ರಹ್ಮಣ್ಯ ದೇವರು, ಸಹೋದರರು ಕಾಶಿಕಟ್ಟೆ ಮಹಾಗಣಪತಿ ದೇವಸ್ಥಾನಕ್ಕೆ ಆಗಮಿಸಿ ಅಲ್ಲಿಸೋದರರ ಸಮಾಗಮವಾಗಿ ಬಳಿಕ ರಂಗಪೂಜೆ, ವಾಸುಕಿ ಛತ್ರದ ಕಟ್ಟೆ, ಶಿವರಾತ್ರಿ ಕಟ್ಟೆ, ಸವಾರಿ ಮಂಟಪದಲ್ಲಿ ಕಟ್ಟೆಪೂಜೆ ನಡೆಯಿತು. ಚೌತಿ ದಿನ ಮಧ್ಯಾಹ್ಮ ಎಡೆಸ್ನಾನ ನೆರವೇರಿತು. ನೂರು ಮಂದಿ ಭಕ್ತರು ಎಡೆಸ್ನಾನ ನೆರವೇರಿಸಿದರು.

ಮಧ್ಯಾಹ್ನ ದೇವರಿಗೆ ಮಹಾಪೂಜೆ ಬಳಿಕ ದೇಗುಲದ ಹೊರಾಂಗಣ ಸುತ್ತಲೂ ಬಾಳೆ ಎಲೆ ಹಾಕಿ ಅದರ ಮೇಲೆ ದೇಗುಲದ ಪುರೋಹಿತರು ನೈವೇದ್ಯ ಬಡಿಸಿದರು. ಬಳಿಕ ಗೋವುಗಳು ಎಲೆಯ ಮೇಲೆ ಬಡಿಸಿದ ನೈವೇದ್ಯ ಪ್ರಸಾದ ಸ್ವೀಕರಿಸಿದವು. ನಂತರ ಗೋವುಗಳು ತಿಂದ ಎಂಜಲು ಅನ್ನ ಪ್ರಸಾದದ ಮೇಲೆ ಉರುಳು ಸೇವೆ ನಡೆಯಿತು. ಈ ಸಂದರ್ಭ ಕಾರ್ಯನಿರ್ವಹಣಾಧಿಕಾರಿ ಯತೀಶ್‌ ಉಳ್ಳಾಲ್‌, ಆಗಮ ಪಂಡಿತರು, ದೇಗುಲದ ಶಿಷ್ಟಾಚಾರ ಅಧಿಕಾರಿ ಗೋಪಿನಾಥ ನಂಬೀಶ, ದೇಗುಲದ ಅಧೀಕ್ಷಕ ಬಾಲಸುಬ್ರಹ್ಮಣ್ಯ ಭಟ್‌, ಸಿಬ್ಬಂದಿ ಉಪಸ್ಥಿತರಿದ್ದರು. ಸುಬ್ರಹ್ಮಣ್ಯ ಪೊಲೀಸ್‌ ಠಾಣೆಯ ಪಿಎಸ್‌ಐ ಓಮನ ನೇತೃತ್ವದಲ್ಲಿ ಪೊಲೀಸರು ಭದ್ರತೆ ಒದಗಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ