ಆ್ಯಪ್ನಗರ

ಅಪಾಯದ ಮಟ್ಟದಲ್ಲಿ ಕುಮಾರಧಾರಾ

ಬಿಸಿಲೆ, ಕುಮಾರಪರ್ವತ ಹಾಗೂ ಸುಬ್ರಹ್ಮಣ್ಯ ಪರಿಸರದಲ್ಲಿ ಮಂಗಳವಾರ ರಾತ್ರಿಯಿಂದ ನಿರಂತರ ಸುರಿದ ಮಳೆಗೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಕುಮಾರಧಾರಾ ಸ್ನಾನಘಟ್ಟ ಮುಳುಗಡೆಯಾಗಿದೆ. ಭಕ್ತರ ಅನುಕೂಲಕ್ಕಾಗಿ ಸ್ನಾನಘಟ್ಟದಲ್ಲಿ ನಿರ್ಮಿತವಾಗಿದ್ದ ಶೌಚಾಲಯ, ಮಹಿಳೆಯರ ಡ್ರೆಸ್ಸಿಂಗ್‌ ರೂಂ ಜಲಾವೃತಗೊಂಡಿದೆ. ಕುಮಾರಧಾರಾ ಹಳೆಯ ಸೇತುವೆ ಮೇಲೆ ನೀರು ಹರಿಯುತ್ತಿದೆ.

Vijaya Karnataka 9 Aug 2018, 9:22 am
ಸುಬ್ರಹ್ಮಣ್ಯ: ಬಿಸಿಲೆ, ಕುಮಾರಪರ್ವತ ಹಾಗೂ ಸುಬ್ರಹ್ಮಣ್ಯ ಪರಿಸರದಲ್ಲಿ ಮಂಗಳವಾರ ರಾತ್ರಿಯಿಂದ ನಿರಂತರ ಸುರಿದ ಮಳೆಗೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಕುಮಾರಧಾರಾ ಸ್ನಾನಘಟ್ಟ ಮುಳುಗಡೆಯಾಗಿದೆ. ಭಕ್ತರ ಅನುಕೂಲಕ್ಕಾಗಿ ಸ್ನಾನಘಟ್ಟದಲ್ಲಿ ನಿರ್ಮಿತವಾಗಿದ್ದ ಶೌಚಾಲಯ, ಮಹಿಳೆಯರ ಡ್ರೆಸ್ಸಿಂಗ್‌ ರೂಂ ಜಲಾವೃತಗೊಂಡಿದೆ. ಕುಮಾರಧಾರಾ ಹಳೆಯ ಸೇತುವೆ ಮೇಲೆ ನೀರು ಹರಿಯುತ್ತಿದೆ.
Vijaya Karnataka Web kumaradhara river


ಮೈದುಂಬಿದ ದರ್ಪಣ ತೀರ್ಥ: ಕುಮಾರಧಾರಾ ನದಿಯ ಉಪನದಿಯಾದ ದರ್ಪಣತೀರ್ಥ ನದಿ ಮೈದುಂಬಿ ಹರಿಯುತ್ತಿದೆ.ಸುಬ್ರಹ್ಮಣ್ಯ-ಉಪ್ಪಿನಂಗಡಿ-ಮಂಗಳೂರು, ಸುಬ್ರಹ್ಮಣ್ಯ-ಮರ್ಧಾಳ-ಧರ್ಮಸ್ಥಳಕ್ಕೆ ಸಂಚಾರ ವ್ಯವಸ್ಥೆ ಒದಗಿಸುವ ಬಿಳಿನೆಲೆ ಸಮೀಪದ ನೆಟ್ಟಣ ಸೇತುವೆ ಮುಳುಗಡೆಗೊಂಡಿದೆ. ಇದರಿಂದಾಗಿ ಧರ್ಮಸ್ಥಳ, ಮಂಗಳೂರು ಪ್ರಯಾಣಿಕರು ಸಂಕಷ್ಟ ಎದುರಿಸಬೇಕಾಯಿತು. ಸುಬ್ರಹ್ಮಣ್ಯ ರೈಲು ನಿಲ್ದಾಣಕ್ಕೆ ತೆರಳುವ ಭಕ್ತರಿಗೆ ಕೂಡ ಸಮಸ್ಯೆಯಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ