ಆ್ಯಪ್ನಗರ

ಚಾರ್ಮಾಡಿ ಘಾಟಿಯಲ್ಲಿ‌ ನೂರು ಅಡಿ ಕಂದಕಕ್ಕೆ ಉರುಳಿದ ಲಾರಿ‌

ಘಟನೆಯಲ್ಲಿ ಲಾರಿ ಚಾಲಕ ಹಾಗೂ ನಿರ್ವಾಹಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

Vijaya Karnataka 2 Aug 2019, 8:58 am
ಬೆಳ್ತಂಗಡಿ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್‌ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಸುಮಾರು 100 ಅಡಿ ಕಂದಕಕ್ಕೆ ಉರುಳಿ ಬಿದ್ದ ಘಟನೆ ಗುರುವಾರ ರಾತ್ರಿ ನಡೆದಿದೆ.
Vijaya Karnataka Web lorry


ಲಾರಿ ಚಾಲಕ ಹ್ಯಾರಿಸ್‌ ಹಾಗೂ ನಿರ್ವಾಹಕ ಮಹಮ್ಮದ್‌ ಹ್ಯಾರೀಸ್‌ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಳ್ಳಾರಿಯಿಂದ ಧರ್ಮಸ್ಥಳ ಕಡೆಗೆ ಕುರಿ ಗೊಬ್ಬರ ಸಾಗಿಸುತ್ತಿದ್ದ ಲಾರಿ ಚಾರ್ಮಾಡಿಯಿಂದ ಕೊಟ್ಟಿಗೆಹಾರಕ್ಕೆ ಹೋಗುವ ಘಾಟ್‌ ರಸ್ತೆಯ ಮೂರನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಸುಮಾರು ನೂರು ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದಿದೆ.

ಧರ್ಮಸ್ಥಳ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿದ್ದು, ಸಾರ್ವಜನಿಕರು ರಕ್ಷ ಣಾ ಕಾರ್ಯದಲ್ಲಿ ತೊಡಗಿದ್ದಾರೆ. ಬಣಕಲ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್‌ನಿಂದ ಬಿದ್ದು ಮಹಿಳೆ ಸಾವು

ಬೆಳ್ತಂಗಡಿ: ದ್ವಿಚಕ್ರ ವಾಹನದಿಂದ ರಸ್ತೆಗೆ ಎಸೆಯಲ್ಪಟ್ಟು ಮಹಿಳೆಯೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನಾಳ ಸಮೀಪದ ಗೋವಿಂದೂರು ಎಂಬಲ್ಲಿ ಗುರುವಾರ ನಡೆದಿದೆ.

ಕಳಿಯ ಗ್ರಾಮದ ಬಟ್ಟೆಮಾರು ನಿವಾಸಿ ಆದಂ ಎಂಬವರ ಪತ್ನಿ ಬೀಪಾತುಮ್ಮ (55) ಮೃತಪಟ್ಟವರು.

ಇವರು ತನ್ನ ಪುತ್ರನ ಜತೆ ಬೈಕ್‌ನಲ್ಲಿ ಔಷಧಕ್ಕಾಗಿ ಕಲ್ಲೇರಿಗೆ ತೆರಳಿದ್ದು, ವಾಪಸ್‌ ಗೇರುಕಟ್ಟೆ ಕಡೆಗೆ ಬರುತ್ತಿದ್ದಾಗ ಗೋವಿಂದೂರು ಸಮೀಪ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ತಲೆಗೆ ಗಂಭೀರ ಗಾಯಗೊಂಡಿದ್ದ ಬೀಪಾತುಮ್ಮ ಅವರನ್ನು ತಕ್ಷ ಣ ಸ್ಥಳೀಯರು ಖಾಸಗಿ ವಾಹನದಲ್ಲಿ ಆಸ್ಪತ್ರೆಗೆ ಸಾಗಿಸಲಾದರೂ ಆ ವೇಳೆ ಮೃತಪಟ್ಟಿರುವುದಾಗಿ ಸರಕಾರಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಅವರಿಗೆ ಐವರು ಪುತ್ರರು, ಒಬ್ಬ ಪುತ್ರಿ ಇದ್ದಾರೆ. ವಿದೇಶದಲ್ಲಿ ಉದ್ಯೋಗಿಯಾಗಿದ್ದ ಈಕೆಯ ಪತಿ ಎರಡು ದಿನಗಳ ಹಿಂದೆ ಊರಿಗೆ ಬಂದಿದ್ದರು. ಮೂವರು ಪುತ್ರರು ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ. ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ