ಆ್ಯಪ್ನಗರ

ಉಸ್ತುವಾರಿ ಸಚಿವರ ಭೇಟಿ ಹಿನ್ನೆಲೆ, ಮಂಗಳೂರು ಗೋಲಿಬಾರ್‌ ವಿಚಾರಣೆ ಮುಂದೂಡಿಕೆ

2019ರ ಡಿಸೆಂಬರ್ 19ರಂದು ಮಂಗಳೂರಿನಲ್ಲಿ ಸಿಎಎ ವಿರೋಧಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಅದು ಹಿಂಸಾರೂಪಕ್ಕೆ ತಿರುಗಿ ಲಾಠಿ ಚಾರ್ಜ್‌ ಹಾಗೂ ಗೋಲಿಬಾರ್ ನಡೆಸಲಾಗಿತ್ತು.

Vijaya Karnataka Web 11 Aug 2020, 2:06 pm
ಮಂಗಳೂರು: 2019ರ ಡಿ.19ರಂದು ಮಂಗಳೂರು ನಗರ ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯಲ್ಲಿ ನಡೆದ ಪ್ರತಿಭಟನೆ ಸಮಯದಲ್ಲಿ ಗುಂಡೇಟಿನಿಂದ ನೌಶಿನ್‌ ಹಾಗೂ ಜಲೀಲ್‌ ಕುದ್ರೋಳಿ ಎಂಬವರು ಮೃತಪಟ್ಟಿರುವ ಬಗ್ಗೆ ಉಡುಪಿ ಜಿಲ್ಲಾದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಮ್ಯಾಜಿಸ್ಟೀರಿಯಲ್‌ ವಿಚಾರಣೆ ನಡೆಸುತ್ತಿದ್ದಾರೆ.
Vijaya Karnataka Web mangalore golibar


ಈ ಘಟನೆ ಬಗ್ಗೆ ಮಾಹಿತಿಯುಳ್ಳ ಅಥವಾ ಈ ಘಟನೆಯನ್ನು ಪ್ರತ್ಯಕ್ಷವಾಗಿ ನೋಡಿದ ಯಾವುದೇ ವ್ಯಕ್ತಿಗಳು ಸಾಕ್ಷ್ಯ ಅಥವಾ ಹೇಳಿಕೆ ನೀಡಲು ಅಂತಿಮ ಅವಕಾಶವನ್ನು ಆ.11ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ ಒಂದು ಗಂಟೆ ತನಕ ಮಂಗಳೂರು ಮಿನಿ ವಿಧಾನಸೌಧದ ಸಹಾಯಕ ಆಯುಕ್ತರ ಕೋರ್ಟ್‌ ಹಾಲ್‌ನಲ್ಲಿ ನಿಗದಿಪಡಿಸಲಾಗಿತ್ತು. ಆದರೆ ಆ.11ರಂದು ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರು ಉಡುಪಿ ಜಿಲ್ಲೆಗೆ ಪ್ರವಾಸ ಕೈಗೊಂಡಿದ್ದು, ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಲಿದ್ದು, ಅವರ ಪ್ರವಾಸ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿರುವುದರಿಂದ ಈ ವಿಚಾರಣೆಯನ್ನು ನಡೆಸಲು ಅನಾನುಕೂಲವಾಗಿರುವುದರಿಂದ ಮುಂದೂಡಲಾಗಿದೆ. ಮುಂದಿನ ವಿಚಾರಣಾ ದಿನಾಂಕದ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್‌ ತಿಳಿಸಿದ್ದಾರೆ.

ಮಂಗಳೂರಿನಲ್ಲಿ 2019ರ ಡಿಸೆಂಬರ್ 19ರಂದು ನಡೆದ ಸಿಎಎ ವಿರೋಧಿ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ ಪೊಲೀಸ್‌ ಗೋಲಿಬಾರ್‌ನಲ್ಲಿ ಇಬ್ಬರು ಮೃತಪಟ್ಟು, 9ಕ್ಕೂ ಹೆಚ್ಚು ಮಂದಿ ಗುಂಡೇಟಿನಿಂದ ಗಾಯಗೊಂಡಿದ್ದರು. ಅಲ್ಲದೆ, ಲಾಠಿಚಾರ್ಜ್‌ನಲ್ಲಿ 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ