ಆ್ಯಪ್ನಗರ

ಮಿತಿ ಮೀರಿದ ಆದಾಯ: ಮಂಗಳೂರು ಪಾಲಿಕೆ ಅಧಿಕಾರಿಗೆ 5 ವರ್ಷ ಸಜೆ, 35 ಲಕ್ಷ ರೂ. ದಂಡ

ಮಂಜುನಾಥ ಸ್ವಾಮಿ ಆದಾಯಕ್ಕಿಂತ ಹೆಚ್ಚು ಸಂಪಾದನೆ ಮಾಡಿದ್ದಾರೆಂಬ ಆಪಾದನೆ ಹಿನ್ನಲೆಯಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸರು 2007 ರಲ್ಲಿ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು.

Vijaya Karnataka Web 28 Oct 2021, 8:35 pm
ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ಅಧಿಕಾರಿ ಮಿತಿ ಮೀರಿದ ಆದಾಯ ಸಂಪಾದನೆ ಮಾಡಿದ ಆರೋಪ 3ನೇ ಹೆಚ್ಚುವರಿ ಜಿಲ್ಲಾ ಸತ್ರ ಮತ್ತು ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಅಪರಾಧಿಗೆ 5 ವರ್ಷ ಸಜೆ ಮತ್ತು 35 ಲಕ್ಷ ರೂ. ದಂಡ ವಿಧಿಸಿದೆ.
Vijaya Karnataka Web ಜಡ್ಜ್‌ಮೆಂಟ್‌
ಜಡ್ಜ್‌ಮೆಂಟ್‌


ಮಂಗಳೂರು ಮನಪಾ ಸಹಾಯಕ ನಗರ ಯೋಜನಾಧಿಕಾರಿ ಎಸ್.ಇ. ಮಂಜುನಾಥ ಸ್ವಾಮಿ (50) ಶಿಕ್ಷೆಗೊಳಗಾದ ಅಪರಾಧಿ.

ಮಂಜುನಾಥ ಸ್ವಾಮಿ ಆದಾಯಕ್ಕಿಂತ ಹೆಚ್ಚು ಸಂಪಾದನೆ ಮಾಡಿದ್ದಾರೆಂಬ ಆಪಾದನೆ ಹಿನ್ನಲೆಯಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸರು 2007 ರಲ್ಲಿ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು.
ಹಂಪನಕಟ್ಟೆಯಲ್ಲಿ ಮಲ್ಟಿ ಲೆವೆಲ್‌ ಪಾರ್ಕಿಂಗ್‌; 95 ಕೋಟಿ ವೆಚ್ಚದ ಯೋಜನೆಗೆ ಶೀಘ್ರ ಚಾಲನೆ!
ಈ ಬಗ್ಗೆ 3 ನೇ ಹೆಚ್ಚುವರಿ ಜಿಲ್ಲಾ ಸತ್ರ ಮತ್ತು ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಬಿ. ಜಕಾತಿ ಸಮಗ್ರ ವಿಚಾರಣೆ ನಡೆಸಿ ಅಪರಾಧ ಸಾಬೀತುಪಡಿಸಿ ಅಂತಿಮ ತೀರ್ಪು ನೀಡಿದ್ದಾರೆ.

ಅಪರಾಧಿಗೆ 5 ವರ್ಷ ಸಾದಾ ಸಜೆ ಹಾಗೂ 35 ಲಕ್ಷ ರೂ. ದಂಡ ವಿಧಿಸಿದ್ದಾರೆ. ದಂಡ ಕಟ್ಟಲು ವಿಫಲವಾದಲ್ಲಿ ಮತ್ತೆ 1 ವರ್ಷಗಳ ಸಾದಾ ಸಜೆ ಅನುಭವಿಸಬೇಕಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಲಸಿಕಾ ಅಭಿಯಾನಕ್ಕೆ ಮಕ್ಕಳೇ ಅಂಬಾಸಿಡರ್‌..!

ಲೋಕಾಯುಕ್ತ ಇನ್‌ಸ್ಪೆಕ್ಟರ್ ಆಗಿದ್ದ ಪ್ರಸನ್ನ ವಿ.ರಾಜು ದೂರು ನೀಡಿದ್ದು, ಲೋಕಾಯುಕ್ತ ಡಿವೈಎಸ್ಪಿ ಆಗಿದ್ದ ಸದಾನಂದ ವರ್ಣೇಕರ್ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ