ಆ್ಯಪ್ನಗರ

ಮಂಗಳೂರು ಗೋಲಿಬಾರ್; ಗಾಯಾಳುಗಳನ್ನು ಭೇಟಿಯಾದ ಸಿದ್ದರಾಮಯ್ಯ

ಮಂಗಳೂರು ಪೊಲೀಸ್ ಗೋಲಿಬಾರ್‌ನಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವವರನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಸಿದ್ದುಗೆ ಮಾಜಿ ಸಚಿವರಾದ ಎಂಬಿ ಪಾಟೀಲ್, ಜಮೀರ್ ಅಹಮ್ಮದ್ ಖಾನ್ ಹಾಗೂ ಇತರರು ಸಾಥ್ ನೀಡಿದರು.

Vijaya Karnataka Web 23 Dec 2019, 6:07 pm
ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ 2019 ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಪೊಲೀಸ್ ಗೋಲಿಬಾರ್‌ನಲ್ಲಿ ಗಾಯಗೊಂಡವರನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
Vijaya Karnataka Web mangalore police fairing siddaramaiah visited hospital
ಮಂಗಳೂರು ಗೋಲಿಬಾರ್; ಗಾಯಾಳುಗಳನ್ನು ಭೇಟಿಯಾದ ಸಿದ್ದರಾಮಯ್ಯ


ಮಂಗಳೂರಿಗೆ ಸೋಮವಾರ ಭೇಟಿ ನೀಡಿದ ಸಿದ್ದರಾಮಯ್ಯ ಗುಂಡೇಟಿನಿಂದ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವವರನ್ನುಭೇಟಿ ಮಾಡಿದರು.

ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಅಶ್ರಫ್ ಅವರು ಪೊಲೀಸ್ ಗೋಲಿಬಾರ್ ಸಂದರ್ಭದಲ್ಲಿ ಗಾಯಗೊಂಡಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಅವರನ್ನು ಸಿದ್ದರಾಮಯ್ಯ ಭೇಟಿಯಾದರು.

ಗೋಲಿಬಾರ್‌ ಘಟನೆ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕು: ಸಿದ್ದರಾಮಯ್ಯ ಪಟ್ಟು

ಸಿದ್ದರಾಮಯ್ಯ ಅವರಿಗೆ ಮಾಜಿ ಸಚಿವ ಜಮೀರ್ ಅಹಮ್ಮದ್, ಎಂ.ಬಿ ಪಾಟೀಲ್ ಹಾಗೂ ಯು.ಟಿ ಖಾದರ್ ಸಾಥ್ ನೀಡಿದರು. ಇದಕ್ಕೂ ಮುನ್ನ ಸಿದ್ದರಾಮಯ್ಯ ಅವರು ಗೋಲಿಬಾರ್‌ನಲ್ಲಿ ಮೃತಪಟ್ಟ ಇಬ್ಬರು ಯುವಕರ ಕುಟುಂಬಸ್ಥರನ್ನು ಭೇಟಿಮಾಡಿ ಸಾಂತ್ವಾನ ಹೇಳಿದ್ದಾರೆ.

ಆಗ ಸಿದ್ದರಾಮಯ್ಯ ಆಜ್ಞಾಪಾಲಕ..! ಈಗ ಮಂಗಳೂರಿಗೆ ಸಿದ್ದು ಬರದಂತೆ ತಡೆಯುವ ಕಾಯಕ..!

ಮಂಗಳೂರು ಗೋಲಿಬಾರ್ ಹಿನ್ನೆಲೆಯಲ್ಲಿ ಘಟನೆಯ ಮರುದಿನ ಸಿದ್ದರಾಮಯ್ಯ ಮಂಗಳೂರು ತೆರಳಲು ಮುಂದಾಗಿದ್ದರು. ಆದರೆ ಕರ್ಫ್ಯೂ ಇದ್ದ ಕಾರಣಕ್ಕಾಗಿ ಪೊಲೀಸ್ ಆಯುಕ್ತ ಡಾ. ಹರ್ಷ ಅವರು ಅವಕಾಶ ನೀಡಿರಲಿಲ್ಲ. ಮಂಗಳೂರಿಗೆ ಬರದಂತೆ ನೊಟೀಸ್ ಜಾರಿಗೊಳಿಸಿದ್ದರು.

ಈ ಹಿನ್ನೆಲೆಯಲ್ಲಿ ಸೋಮವಾರ ಸಿದ್ದರಾಮಯ್ಯ ಮಂಗಳೂರಿಗೆ ಭೇಟಿ ನೀಡಿ ಘಟನೆಯಲ್ಲಿ ಮೃತಪಟ್ಟ ಯುವಕರ ಕುಟುಂಬಸ್ಥರನ್ನು ಹಾಗೂ ಗಾಯಾಳುಗಳನ್ನು ಭೇಟಿ ಮಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ