ಆ್ಯಪ್ನಗರ

ಮಂಗಳೂರು ವಿಶ್ವವಿದ್ಯಾಲಯ ಹಗರಣ: ನ್ಯಾಯಾಂಗ ತನಿಖೆಗೆ ಮನವಿ

ವಿಶ್ವವಿದ್ಯಾಲಯದಲ್ಲಿ ಹಲವಾರು ವರ್ಷಗಳಿಂದ ನಡೆದಿರುವ ನೂರಾರು ಕೋಟಿ ಭ್ರಷ್ಟಾಚಾರ ಹಗರಣಗಳನ್ನು ವಿಚಾರಣೆ ನಡೆಸಿ ತನಿಖೆ ಮಾಡಬೇಕೆಂದು ರಾಜ್ಯ ಸರಕಾರದ ಉನ್ನತ ಶಿಕ್ಷಣ ಇಲಾಖೆ ಈಗಾಗಲೇ ವಿಶ್ವವಿದ್ಯಾಲಯಕ್ಕೆ ಸೂಚನೆ ನೀಡಿದೆ.

Vijaya Karnataka Web 27 Jun 2020, 11:39 pm
ಮಂಗಳೂರು: ವಿಶ್ವವಿದ್ಯಾಲಯದಲ್ಲಿ ಹಲವಾರು ವರ್ಷಗಳಿಂದ ನಡೆದಿರುವ ನೂರಾರು ಕೋಟಿ ಭ್ರಷ್ಟಾಚಾರ ಹಗರಣಗಳನ್ನು ವಿಚಾರಣೆ ನಡೆಸಿ ತನಿಖೆ ಮಾಡಬೇಕೆಂದು ರಾಜ್ಯ ಸರಕಾರದ ಉನ್ನತ ಶಿಕ್ಷಣ ಇಲಾಖೆ ಈಗಾಗಲೇ ವಿಶ್ವವಿದ್ಯಾಲಯಕ್ಕೆ ಸೂಚನೆ ನೀಡಿದೆ.
Vijaya Karnataka Web mangalore unniversity


ಈ ಹಿನ್ನೆಲೆಯಲ್ಲಿನಿವೃತ್ತ ನ್ಯಾಯಾಧೀಶರನ್ನು ಒಳಗೊಂಡ ನ್ಯಾಯಾಂಗ ಸಮಿತಿಯನ್ನು ರಚಿಸಿ ನಿಷ್ಪಕ್ಷಪಾತ ತನಿಖೆ ಮಾಡಿ ನಿಗದಿತ ಅವಧಿಯಲ್ಲಿ ವರದಿಯನ್ನು ಪಡೆದು ತಪ್ಪಿತಸ್ಥರಿಗೆ ಶಿಕ್ಷೆ ಆಗುವಂತೆ ಮಾಡಬೇಕು ಎಂದು ಎಬಿವಿಪಿ ವಿವಿ ಕುಲಪತಿಗಳಿಗೆ ಮನವಿ ಮಾಡಿದೆ.

ಸ್ಕೂಲ್‌ ಆಫ್‌ ಸೋಷಿಯಲ್‌ ವರ್ಕ್ ರೋಶನಿ ನಿಲಯ ಮಂಗಳೂರು ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಟ್ಟಿದ್ದು ಸ್ವಾಯತ್ತತೆ ಪಡೆದಿರುತ್ತದೆ. ಆದರೆ ಇಲ್ಲಿಸ್ನಾತಕೋತ್ತರ ಅಧ್ಯಯನ ಮತ್ತು ಪಿಎಚ್‌ಡಿ ಕಾರ್ಯಕ್ರಮಗಳಲ್ಲಿ ಮಂಗಳೂರು ವಿಶ್ವವಿದ್ಯಾಲಯದ ನಿಯಮಗಳನ್ನು ಗಾಳಿಗೆ ತೂರಿ ಮನಬಂದಂತೆ ವ್ಯವಹರಿಸಲಾಗಹುತ್ತಿದೆ ಎಂಬುದನ್ನು ವಿಶ್ವವಿದ್ಯಾಲಯದ ಕುಲಪತಿಗಳ ಗಮನಕ್ಕೆ ತರಲಾಯಿತು. ಅಲ್ಲದೇ ಪ್ರಸಕ್ತ ಪರಿಸ್ಥಿತಿಯಲ್ಲಿವಿಶ್ವವಿದ್ಯಾಲಯದ ಮುಂದಿನ ಯೋಜನೆಗಳು ವಿದ್ಯಾರ್ಥಿ ಸ್ನೇಹಿಯಾಗಿರಬೇಕೆಂದು ಮನವಿ ಮಾಡಲಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ