ಆ್ಯಪ್ನಗರ

ಮಂಗಳೂರು ಬಾಂಬರ್‌ ಪತ್ತೆ; ಪೊಲೀಸರ ಮುಂದೆ ಶರಣಾದ ಆದಿತ್ಯ ರಾವ್

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಆರೋಪಿ ಪತ್ತೆಯಾಗಿದ್ದಾನೆ. ಬೆಂಗಳೂರಿನಲ್ಲಿ ಡಿಜಿ ಐಜಿಪಿ ನೀಲಮಣಿ ಎನ್ ಎನ್ ರಾಜು ಮುಂದೆ ಆರೋಪಿ ಆದಿತ್ಯ ರಾವ್ ಶರಣಾಗಿದ್ದಾನೆ. ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ಅಜ್ಞಾತ ಸ್ಥಳಕ್ಕೆ ಕರೆದೊಯ್ಯಲಾಗಿದೆ.

Vijaya Karnataka Web 22 Jan 2020, 9:53 am
Vijaya Karnataka Web WhatsApp Image 2020-01-22 at 9.48.49 AM.

ಮಂಗಳೂರು: ರಾಜ್ಯದಾದ್ಯಂತ ಭೀತಿ ಸೃಷ್ಟಿಗೆ ಕಾರಣವಾಗಿದ್ದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣದ ಆರೋಪಿ ಪೊಲೀಸರ ಮುಂದೆ ಶರಣಾಗಿದ್ದಾನೆ. ಡಿಜಿ. ಐಜಿಪಿ ನೀಲಮಣಿ ರಾಜು ಮುಂದೆ ಆರೋಪಿ ಆದಿತ್ಯ ರಾವ್ ಬುಧವಾರ ಮುಂಜಾನೆ ಶರಣಾಗಿದ್ದಾನೆ.

ಸೋಮವಾರ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾಗಿತ್ತು. ಇದಾದ ಬಳಿಕ ಇಂಡಿಗೋ ವಿಮಾನದಲ್ಲಿ ಬಾಂಬ್‌ ಇದೆ ಎಂಬ ಬೆದರಿಕೆ ಕರೆಯೂ ಬಂದಿತ್ತು. ಈ ಘಟನೆಯಿಂದ ರಾಜ್ಯಾದ್ಯಂತ ಭಯದ ವಾತಾವರಣ ಸೃಷ್ಟಿಯಾಗಿತ್ತು.


ಬಾಂಬ್‌ ಪತ್ತೆ ಹಚ್ಚಿದ ಬಳಿಕ ಭದ್ರತಾ ಪಡೆ ಹಾಗೂ ಬಾಂಬ್ ನಿಷ್ಕ್ರಿಯ ದಳ ಅಧಿಕಾರಿಗಳು ಸುರಕ್ಷತಾ ವಿಧಾನಗಳನ್ನು ಬಳಸಿಕೊಂಡು ಕೆಂಜಾರು ಮೈದಾನದಲ್ಲಿ ಸ್ಫೋಟಗೊಳಿಸುವ ಮೂಲಕ ನಾಶ ಮಾಡಿದ್ದರು.

ಇದಾದ ಬಳಿಕ ಮಂಗಳೂರು ಪೊಲೀಸರು ಶಂಕಿತ ಆರೋಪಿಯ ಫೋಟೋವನ್ನು ಬಿಡುಗಡೆ ಮಾಡಿದ್ದರು. ಮಂಗಳವಾರ ಆದಿತ್ಯ ರಾವ್ ಶಂಕಿತ ಆರೋಪಿ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಇದರ ಆಧಾರದಲ್ಲಿ ಮೂರು ತಂಡಗಳು ಆರೋಪಿಯ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದವು.

ಇದೀಗ ಆರೋಪಿ ಆದಿತ್ಯರಾವ್ ಬೆಂಗಳೂರಿನಲ್ಲಿ ಡಿಜಿ ಐಜಿಪಿ ನೀಲಮಣಿ ಎನ್‌ ರಾಜು ಅವರ ಮುಂದೆ ಶರಣಾಗಿದ್ದಾನೆ. ಆದಿತ್ಯ ರಾವ್ ವಿರುದ್ಧ ಈ ಹಿಂದೆ ಬೆಂಗಳೂರು ವಿಮಾನ ನಿಲ್ದಾಣ ಹಾಗೂ ರೈಲ್ವೇ ನಿಲ್ದಾಣದಲ್ಲಿ ಬಾಂಬ್‌ ಬೆದರಿಕೆ ಹಾಕಿದ ಆರೋಪವಿದೆ. ಈ ಆರೋಪದಡಿಯಲ್ಲಿ ಬಂದನಕ್ಕೊಳಗಾಗಿ ಒಂದು ವರ್ಷ ಜೈಲು ಸೇರಿದ್ದ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ