ಆ್ಯಪ್ನಗರ

ಮಂಗಳೂರು: ಚೊಚ್ಚಲ ಹೆರಿಗೆ ಬಳಿಕ ತಾಯಿ-ಮಗು ಸಾವು; ಕುಟುಂಬಸ್ಥರಿಂದ ವೈದ್ಯರ ನಿರ್ಲಕ್ಷ್ಯ ಆರೋಪ

ಚೊಚ್ಚಲ ಹೆರಿಗೆ ಬಳಿಕ ಮಗು ಹಾಗೂ ತಾಯಿ ಸಾವನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಗರ್ಭಿಣಿ ಮಹಿಳೆ ಮಗುವಿಗೆ ಜನ್ಮ ನೀಡಿದ್ದಾಳೆ. ಆದರೆ ನವಜಾತ ಶಿಶು ಸಾವನಪ್ಪಿದೆ. ನಂತರ ತಾಯಿ ಕೂಡ ಸಾವನಪ್ಪಿದ್ದಾರೆ. ಬಂಟ್ವಾಳದ ಮಹಿಳೆ ಆಗಿದ್ದು ಕುಟುಂಬಸ್ಥರು ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Vijaya Karnataka Web 23 Nov 2020, 3:21 pm
ಮಂಗಳೂರು: ಮೊದಲ ಹೆರಿಗೆ ಬಳಿಕ ತಾಯಿ ಹಾಗೂ ಮಗು ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ರಾಮನಗರ ನಿವಾಸಿ ಕಾಜಲ್ ಮೃತಪಟ್ಟ ಮಹಿಳೆ, ಇನ್ನು ನವಜಾತ ಶಿಶು ಕೂಡ ಮರಣಹೊಂದಿದೆ. ವೈದ್ಯರ ನಿರ್ಲಕ್ಷ್ಯವೇ ತಾಯಿ ಹಾಗೂ ಮಗುವಿನ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿ ಪ್ರತಿಭಟನೆ ನಡೆಸಿದ್ದಾರೆ.
Vijaya Karnataka Web ಬಂಟ್ವಾಳ


ರಾಮನಗರ ನಿವಾಸಿ ಗರ್ಭಿಣಿ ಕಾಜಲ್ ಅವರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆ ತುಂಬೆಯಲ್ಲಿರುವ ಫಾದರ್ ಮುಲ್ಲರ್ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಹೆರಿಗೆ ಬಳಿಕ ಮಗು ಸಾವನಪ್ಪಿದೆ. ಇನ್ನು ಇತ್ತ ಜನ್ಮ ನೀಡಿದ ತಾಯಿ ಕಾಜಲ್‌ಗೂ ತೀವ್ರ ರಕ್ತ ಸ್ರಾವವಾಗಿದೆ. ಈ ಹಿನ್ನೆಲೆ ಕೂಡಲೇ ಮಂಗಳೂರಿನ ಫಾದರ್ ಮುಲ್ಲರ್ಸ್ ಆಸ್ಪತ್ರೆಗೆ ಶಿಫ್ಟ್ ಅವರನ್ನು ಕರೆದುಕೊಂಡು ಹೋಗಲಾಗಿದೆ. ಈ ವೇಳೆ ಕಾಜಲ್‌ ಮೃತಪಟ್ಟಿದ್ದಾರೆ.

ಅಲ್ಲಿನ ವೈದ್ಯರುಗಳು ಹೃದಯಾಘಾತದಿಂದ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ. ಆದರೆ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಹೀಗಾಗಿ ತುಂಬೆಯಲ್ಲಿರುವ ಫಾದರ್ ಮುಲ್ಲರ್ ಆಸ್ಪತ್ರೆ ಎದುರು ಜಮಾಯಿಸಿದ ಕುಟುಂಬಸ್ಥರು ಹಾಗೂ ಸಾರ್ವಜನಿಕರು ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕೆಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ.
ಅನಘ ವಸತಿಗೃಹ ಲೋಕಾರ್ಪಣೆ: ಕುಕ್ಕೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಮುನ್ನುಡಿ, ಸಚಿವ ಕೋಟ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ