ಆ್ಯಪ್ನಗರ

ಮಂಗಳೂರು ಗೋಲಿಬಾರ್: ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜೊತೆ ಗೃಹ ಸಚಿವರ ಸಭೆ

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ಹಾಗೂ ಪೊಲೀಸ್ ಗೋಲಿಬಾರ್‌ ಹಿನ್ನೆಲೆಯಲ್ಲಿ ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದರು.

Vijaya Karnataka Web 31 Dec 2019, 3:53 pm
ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ 2019 ಪ್ರತಿಭಟನೆಯ ವೇಳೆ ಮಂಗಳೂರಿನಲ್ಲಿ ನಡೆದ ಗೋಲಿಬಾರ್‌ ಹಿನ್ನೆಲೆಯಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜೊತೆಗೆ ಮಂಗಳವಾರ ಸಭೆ ನಡೆಸಿದರು. ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ವಿವಿಧ ರಾಜಕೀಯ ಪಕ್ಷಗಳು ಹಾಗೂ ಸಂಘಟನೆಗಳ ಮುಖಂಡರು ಹಾಜರಿದ್ದರು.
Vijaya Karnataka Web mangaluru police firing home minister basavaraj bommai meeting in mangaluru
ಮಂಗಳೂರು ಗೋಲಿಬಾರ್: ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜೊತೆ ಗೃಹ ಸಚಿವರ ಸಭೆ


ಸಭೆಯಲ್ಲಿ ಗಲಭೆ ಹಾಗೂ ಗೋಲಿಬಾರ್‌ ವಿಚಾರವಾಗಿ ಚರ್ಚೆ ನಡೆಸಿದ ಅವರು ಅಧಿಕಾರಿಗಳಿಂದ ಸದ್ಯದ ಪರಿಸ್ಥಿತಿಯ ಕುರಿತಾಗಿ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೆ ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸುವಂತೆ ಗೃಹ ಸಚಿವರು ವಿನಂತಿಸಿದರು.

ಈ ನಡುವೆ ಸಿಎಎ ಹಾಗೂ ಎನ್‌ಆರ್‌ಸಿ ವಿರೋಧಿಸಿ ಜನವರಿ 4 ಹಾಗೂ 12 ರಂದು ಪ್ರತಿಭಟನಾ ಸಮಾವೇಶಗಳನ್ನು ಮಂಗಳೂರಿನಲ್ಲಿಹಮ್ಮಿಕೊಳ್ಳಲಾಗಿದೆ. ಆದರೆ ಜಿಲ್ಲೆಯಲ್ಲಿ ಪರಿಸ್ಥಿತಿ ಶಾಂತವಾಗಿದ್ದರೆ ಅನುಮತಿ ನೀಡಲಾಗುವುದು ಇಲ್ಲದಿದ್ದರೆ ಸಭೆಯನ್ನು ಮುಂದೂಡುವಂತೆ ಗೃಹ ಸಚಿವರು ಮನವಿ ಮಾಡಿದರು.


ಮಂಗಳೂರು ಗೋಲಿಬಾರ್ : ಮೃತರಿಗೆ ನೀಡಿದ್ದ ಪರಿಹಾರಕ್ಕೆ ತಡೆ - ಸಿಎಂ ಘೋಷಣೆ

ಸಭೆಯ ಬಳಿಕ ಮಾತನಾಡಿದ ಅವರು, ಘಟನೆ ಹಾಗೂ ಸದ್ಯದ ಪರಿಸ್ಥಿತಿ ಕುರಿತಾಗಿ ಎಲ್ಲಾ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಜೊತೆ ಸುಧೀರ್ಘವಾಗಿ ಚರ್ಚೆ ಮಾಡಿದ್ದೇವೆ. ಸಭೆಯಲ್ಲಿ ಹಲವು ಪಕ್ಷದ ನಾಯಕರು, ಸಂಘಟನೆಗಳ ಮುಖಂಡರು ಇದ್ದರು. ಜನವರಿ 4 ಹಾಗೂ12ರಂದು ಎರಡು ಸಭೆಗಳು ನಡೆಯಲಿದೆ. ಹೀಗಾಗಿ ಈ ಎರಡೂ ಸಭೆಗಳು ಶಾಂತಿಯುತವಾಗಿ ಆಗಬೇಕು ಎಂಬ ನಿಟ್ಟಿನಲ್ಲಿ ಸಭೆಯಲ್ಲಿ ಚರ್ಚೆಗಳು ನಡೆದಿವೆ ಎಂದರು.

ಮಂಗಳೂರು ಹಿಂಸಾಚಾರ: ದುಷ್ಕರ್ಮಿಗಳ ಪತ್ತೆಗೆ 10 ತಂಡ ರಚನೆ, 30ಕ್ಕೂ ಹೆಚ್ಚು ಬಂಧನ

ಗೋಲಿಬಾರ್ ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಕುರಿತಾಗಿ ತನಿಖೆಯ ಬಳಿಕ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು. ಇದೇ ವೇಳೆ ಮಾತನಾಡಿ, ಹಿಂಸಾಚಾರ ಮಾಡಿದವರ ವಿರುದ್ಧ ಕಾನೂನಾತ್ಮಕ ಬಿಗಿ ಕ್ರಮ ಕೈಗೊಳ್ಳಬೇಕು. ಆದರೆ ಅಮಾಯಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ‌ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

ಗೃಹ ಸಚಿವರ ಕಾನೂನು ಸುವ್ಯವಸ್ಥೆ ಸಭೆಯಲ್ಲಿ ಪಿಎಫ್‌ಐ !

ಮಂಗಳೂರು ಗಲಭೆ ಹಾಗೂ ಗೋಲಿಬಾರ್‌ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಕರೆದ ಸಭೆಯಲ್ಲಿ ಮುಸ್ಲಿಂ ಸಂಘಟನೆಗಳ ಜೊತೆಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯ ಮುಖಂಡರೂ ಹಾಜರಿದ್ದರು.

ಮಂಗಳೂರು ಘಟನೆಗೆ ಪಿಎಫ್‌ಐ ಕಾರಣ ಎಂದು ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಪ್ರಮುಖ ಬಿಜೆಪಿ ಮುಖಂಡರು ಆರೋಪಿಸಿದ್ದರು. ಹೀಗಿದ್ದರೂ ಗೃಹ ಸಚಿವರ ಶಾಂತಿ ಸುವ್ಯವಸ್ಥೆ ಕಾಪಾಡುವ ಸಭೆಗೆ ಪಿಎಫ್ಐ ಮುಖಂಡರಿಗೆ ಆಹ್ವಾನ ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ