ಹೊಸದಿಲ್ಲಿ: ಕೊರೊನಾ ವೈರಸ್ ಲಾಕ್ಡೌನ್ ಹಂತ ಹಂತವಾಗಿ ಸಡಿಲಿಕೆ ಮಾಡಲಾಗುತ್ತಿದೆ. ಇದರಂತೆ ಹಲವು ರಾಜ್ಯಗಳಲ್ಲಿ ಬಸ್ ಸೇವೆ ಆರಂಭಗೊಂಡಿದೆ. ಕರ್ನಾಟಕದಲ್ಲೂ ಖಾಸಗಿ ಬಸ್ಗಳು ಸುರಕ್ಷಾ ಮಾನದಂಡಗಳನ್ನು ಪಾಲಿಸಿಕೊಂಡು ಸಂಚಾರವನ್ನು ನಡೆಸುತ್ತಿದೆ.
ಈ ಮಧ್ಯೆ ಮಂಗಳೂರಿನಲ್ಲಿ ಬಸ್ ಕಂಡಕ್ಟರ್ ಓರ್ವರು ಸಂಪೂರ್ಣ ವೈಯಕ್ತಿಕ ರಕ್ಷಣಾ ಕವಚ ಧರಿಸಿ ಕರ್ತವ್ಯಕ್ಕೆ ಹಾಜರಾಗಿರುವುದು ಹೆಚ್ಚು ಗಮನ ಸೆಳೆದಿದೆ.
ಕೊರೊನಾ ಎಫೆಕ್ಟ್: ‘ವೆಡ್ಡಿಂಗ್ ಪ್ಯಾಕೇಜ್’ ಮಂಗಳೂರಿನ ಇವೆಂಟ್ ಸಂಸ್ಥೆಗಳಿಂದ ವಿನೂತನ ಯೋಜನೆ!
ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟಲು ಸಾಕಷ್ಟು ಮುನ್ನಚ್ಚೆರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯವಾಗಿದೆ.
ಮಂಗಳೂರಿನ ಸ್ಟೇಟ್ ಬ್ಯಾಂಕ್ನಿಂದ ಶಕ್ತಿನಗರಕ್ಕೆ ತೆರಳುವ ಖಾಸಗಿ ಬಸ್ಸಿನ ಕಂಡಕ್ಟರ್ ವೈಯಕ್ತಿಕ ರಕ್ಷಣಾ ಕವಚಗಳನ್ನು ಧರಿಸಿ ಕೆಲಸ ಮಾಡುತ್ತಿರುವುದನ್ನು ಎಎನ್ಐ ಸುದ್ದಿ ಸಂಸ್ಥೆ ಚಿತ್ರವನ್ನು ಬಿಡುಗಡೆಗೊಳಿಸಿದೆ.
ನಾಲ್ಕನೇ ಹಂತದ ಲಾಕ್ಡೌನ್ ವೇಳೆಯಲ್ಲಿ ರಾಜ್ಯದಲ್ಲಿ ಬಸ್ ಸಂಚಾರ ಪುನರಾರಂಭಿಸಲು ರಾಜ್ಯ ಸರಕಾರ ಅನುಮತಿಯನ್ನು ನೀಡಿತ್ತು. ಈ ಮಧ್ಯೆ ಕೊರೊನಾ ವೈರಸ್ ನಿಯಮಗಳನ್ನು ಹಲೆವೆಡೆ ಗಾಳಿಗೆ ತೂರಲಾಗುತ್ತಿದೆಯೆಂಬ ಆರೋಪ ಕೇಳಿ ಬರುತ್ತಿದೆ.
ನಿಯಮ ಮೀರಿದ ಉಡುಪಿ-ಮಂಗಳೂರು ಎಕ್ಸ್ಪ್ರೆಸ್ ಬಸ್ಗಳು !
ರಾಜ್ಯದಲ್ಲಿ ಅತಿ ಹೆಚ್ಚು ಕೊರೊನಾ ವೈರಸ್ ಸೋಂಕಿತ ಜಿಲ್ಲೆಗಳ ಪೈಕಿ 13ನೇ ಸ್ಥಾನದಲ್ಲಿರುವ ದಕ್ಷಿಣ ಕನ್ನಡದಲ್ಲಿ ಇದುವರೆಗೆ 143 ಪ್ರಕರಣಗಳು ದಾಖಲಾಗಿದೆ. ಈ ಪೈಕಿ 57 ಮಂದಿ ರೋಗಮುಕ್ತಿಯನ್ನು ಪಡೆದಿದ್ದು, ಆರು ಮಂದಿ ಸಾವಿಗೆ ಶರಣಾಗಿದ್ದಾರೆ.
ಈ ಮಧ್ಯೆ ಮಂಗಳೂರಿನಲ್ಲಿ ಬಸ್ ಕಂಡಕ್ಟರ್ ಓರ್ವರು ಸಂಪೂರ್ಣ ವೈಯಕ್ತಿಕ ರಕ್ಷಣಾ ಕವಚ ಧರಿಸಿ ಕರ್ತವ್ಯಕ್ಕೆ ಹಾಜರಾಗಿರುವುದು ಹೆಚ್ಚು ಗಮನ ಸೆಳೆದಿದೆ.
ಕೊರೊನಾ ಎಫೆಕ್ಟ್: ‘ವೆಡ್ಡಿಂಗ್ ಪ್ಯಾಕೇಜ್’ ಮಂಗಳೂರಿನ ಇವೆಂಟ್ ಸಂಸ್ಥೆಗಳಿಂದ ವಿನೂತನ ಯೋಜನೆ!
ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟಲು ಸಾಕಷ್ಟು ಮುನ್ನಚ್ಚೆರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯವಾಗಿದೆ.
ಮಂಗಳೂರಿನ ಸ್ಟೇಟ್ ಬ್ಯಾಂಕ್ನಿಂದ ಶಕ್ತಿನಗರಕ್ಕೆ ತೆರಳುವ ಖಾಸಗಿ ಬಸ್ಸಿನ ಕಂಡಕ್ಟರ್ ವೈಯಕ್ತಿಕ ರಕ್ಷಣಾ ಕವಚಗಳನ್ನು ಧರಿಸಿ ಕೆಲಸ ಮಾಡುತ್ತಿರುವುದನ್ನು ಎಎನ್ಐ ಸುದ್ದಿ ಸಂಸ್ಥೆ ಚಿತ್ರವನ್ನು ಬಿಡುಗಡೆಗೊಳಿಸಿದೆ.
ನಾಲ್ಕನೇ ಹಂತದ ಲಾಕ್ಡೌನ್ ವೇಳೆಯಲ್ಲಿ ರಾಜ್ಯದಲ್ಲಿ ಬಸ್ ಸಂಚಾರ ಪುನರಾರಂಭಿಸಲು ರಾಜ್ಯ ಸರಕಾರ ಅನುಮತಿಯನ್ನು ನೀಡಿತ್ತು. ಈ ಮಧ್ಯೆ ಕೊರೊನಾ ವೈರಸ್ ನಿಯಮಗಳನ್ನು ಹಲೆವೆಡೆ ಗಾಳಿಗೆ ತೂರಲಾಗುತ್ತಿದೆಯೆಂಬ ಆರೋಪ ಕೇಳಿ ಬರುತ್ತಿದೆ.
ನಿಯಮ ಮೀರಿದ ಉಡುಪಿ-ಮಂಗಳೂರು ಎಕ್ಸ್ಪ್ರೆಸ್ ಬಸ್ಗಳು !
ರಾಜ್ಯದಲ್ಲಿ ಅತಿ ಹೆಚ್ಚು ಕೊರೊನಾ ವೈರಸ್ ಸೋಂಕಿತ ಜಿಲ್ಲೆಗಳ ಪೈಕಿ 13ನೇ ಸ್ಥಾನದಲ್ಲಿರುವ ದಕ್ಷಿಣ ಕನ್ನಡದಲ್ಲಿ ಇದುವರೆಗೆ 143 ಪ್ರಕರಣಗಳು ದಾಖಲಾಗಿದೆ. ಈ ಪೈಕಿ 57 ಮಂದಿ ರೋಗಮುಕ್ತಿಯನ್ನು ಪಡೆದಿದ್ದು, ಆರು ಮಂದಿ ಸಾವಿಗೆ ಶರಣಾಗಿದ್ದಾರೆ.