ಆ್ಯಪ್ನಗರ

ಧರೆಗೆ ತಂಪೆರೆದ ವರುಣ, ಕರಾವಳಿಯಲ್ಲಿ ಧಾರಾಕಾರ ಮಳೆ

ಕರಾವಳಿಯ ಬಹುತೇಕ ಕಡೆಗಳಲ್ಲಿ ಸೋಮವಾರ ರಾತ್ರಿ ಉತ್ತಮ ಮಳೆ ಬಿದ್ದಿದ್ದು, ಬೇಸಿಗೆಯ ಬಿಸಿಲ ತಾಪದಿಂದ ಬಸವಳಿದಿದ್ದ ಜನತೆಗೆ ಒಂದಷ್ಟು ಸಮಾಧಾನ ತಂದಿದೆ. ಬೆಳಗ್ಗೆ ಬಿರುಬಿಸಿಲು, ಸಂಜೆ, ರಾತ್ರಿ ಸೆಕೆ ಇದ್ದು, ಫ್ಯಾನ್ ಗಾಳಿ ಇಲ್ಲದೆ ಮಲಗಲು ಸಾಧ್ಯವೇ ಇಲ್ಲದಂತ ಸ್ಥಿತಿ ಜಿಲ್ಲೆಯಲ್ಲಿ ನಿರ್ಮಾಣವಾಗಿತ್ತು.

Vijaya Karnataka Web 2 Mar 2020, 10:22 am
ಮಂಗಳೂರು: ಬಿಲಿಸಿಲಿನಿಂದ ಬೆಂಡಾಗಿದ್ದ ಕರಾವಳಿ ಜನತೆಗೆ ವರುಣ ಸಮಾಧಾನ ತಂದಿದ್ದಾನೆ. ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಅನೇಕ ಭಾಗಗಳಲ್ಲಿ ಮಾರ್ಚ್ 2ರ ರಾತ್ರಿಯಿಂದ ಧಾರಾಕಾರ ಮಳೆಯಾಗಿದೆ.

ಸೋಮವಾರ ಪುತ್ತೂರು, ಸುಳ್ಯ ತಾಲೂಕಿನ ಕೆಲ ಪ್ರದೇಶಗಳಲ್ಲಿ ಬೆಳಗ್ಗೆ 4ಗಂಟೆಯಿಂದ ಆರಂಭವಾದ ಮಳೆ 8 ಗಂಟೆಯಾದರೂ ನಿಂತಿರಲಿಲ್ಲ. ವರದಿ ಪ್ರಕಾರ 15 ರಿಂದ 25 ಮಿ.ಮೀ ಮಳೆ ಸುರಿದಿದೆ. ಗಾಳಿ ಜೊತೆ ಮಳೆ ಸುರಿದ್ದಿದ್ದರಿಂದ ಜನರ ದೈನಂದಿನ ಚಟುವಟಿಕೆಗಳಿಗೆ ಅಡ್ಡಿಯಾಗಿದೆ. ಜಿಲ್ಲೆಯಲ್ಲಿ ಇನ್ನೂ ಎರಡರಿಂದ ಮೂರು ದಿನಗಳ ಕಾಲ ಬಿಟ್ಟು ಬಿಟ್ಟು ಮಳೆಯಾಗಲಿದೆ ಎಂದು ವರದಿ ತಿಳಿಸಿದೆ. ಕಳೆದವಾರ ಕೂಡ ಕರಾವಳಿ ಜಿಲ್ಲೆಯ ಕೆಲವೆಡೆ ಮಳೆ ಹನಿ ಹಾಕಿತ್ತು.

ಸೋಮವಾರ ಜಿಲ್ಲೆಯಾದ್ಯಂತ ಮೋಡಕಿದ ವಾತಾವರಣವಿದೆ. ಹವಾಮಾನ ಇಲಾಖೆಯ ವರದಿ ಪ್ರಕಾರ ಈ ಬಾರಿ ಮೇ ತಿಂಗಳ ಮಧ್ಯಭಾಗದಲ್ಲೇ ಮಳೆಗಾಲದ ಖುತು ಆರಂಭವಾಗಲಿದೆ ಎಂದು ತಿಳಿದುಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ