ಆ್ಯಪ್ನಗರ

ಬೆಳ್ತಂಗಡಿ: ಪ್ರೀತಿಗೆ ಅಡ್ಡಿಪಡಿಸಿದ ತಂದೆಯನ್ನೇ ಹೊಡೆದು ಕೊಂದ ಪಾಪಿ ಪುತ್ರ!

ಹರೀಶ್‌ ಬೆಂಗಳೂರಿನಲ್ಲಿ ಪ್ರೀತಿಸಿ ವಿವಾಹವಾಗಿದ್ದು, ಆಕೆಯನ್ನು ಮನೆಗೆ ಕರೆತಂದಿರುವುದನ್ನು ತಂದೆ ವಿರೋಧಿಸಿದ್ದರು. ಇದರಿಂದ ಅಸಮಾಧಾನಗೊಂಡ ಹರೀಶ್‌ ತಂದೆ ಜತೆ ಜಗಳವಾಡಿದ್ದ. ಮಾತಿಗೆ ಮಾತು ಬೆಳೆದು ಕುಡಿದ ಮತ್ತಿನಲ್ಲಿದ್ದ ಹರೀಶ ಮರದ ಬಡಿಗೆಯಿಂದ ತಂದೆಗೆ ಹಲ್ಲೆ ನಡೆಸಿದ್ದಾನೆ. ಗಂಭೀರ ಗಾಯಗೊಂಡ ಶ್ರೀಧರ ಪೂಜಾರಿ ಮೃತಪಟ್ಟಿದ್ದಾರೆ.

Vijaya Karnataka Web 19 Jan 2021, 7:01 am
ಬೆಳ್ತಂಗಡಿ: ತಂದೆಯನ್ನೇ ಮಗನೊಬ್ಬ ಮರದ ಬಡಿಗೆಯಲ್ಲಿ ಬಡಿದು ಕೊಲೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಮುಂಡ್ಯೊಟ್ಟು ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ. ಶ್ರೀಧರ ಪೂಜಾರಿ(55) ಹತ್ಯೆಯಾದವರು. ಹರೀಶ(27) ಕೊಲೆ ಆರೋಪಿ.
Vijaya Karnataka Web harish


ಘಟನೆ ವಿವರ!
ಹರೀಶ್‌ ಬೆಂಗಳೂರಿನಲ್ಲಿ ಪ್ರೀತಿಸಿ ವಿವಾಹವಾಗಿದ್ದು, ಆಕೆಯನ್ನು ಮನೆಗೆ ಕರೆತಂದಿರುವುದನ್ನು ತಂದೆ ವಿರೋಧಿಸಿದ್ದರು. ಇದರಿಂದ ಅಸಮಾಧಾನಗೊಂಡ ಹರೀಶ್‌ ತಂದೆ ಜತೆ ಜಗಳವಾಡಿದ್ದ. ಮಾತಿಗೆ ಮಾತು ಬೆಳೆದು ಕುಡಿದ ಮತ್ತಿನಲ್ಲಿದ್ದ ಹರೀಶ ಮರದ ಬಡಿಗೆಯಿಂದ ತಂದೆಗೆ ಹಲ್ಲೆ ನಡೆಸಿದ್ದಾನೆ. ಗಂಭೀರ ಗಾಯಗೊಂಡ ಶ್ರೀಧರ ಪೂಜಾರಿ ಮೃತಪಟ್ಟಿದ್ದಾರೆ.

ಸ್ಥಳೀಯರು ಹರೀಶನನ್ನು ಹಿಡಿದಿಟ್ಟು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸರ್ಕಲ್‌ ಇನ್ಸ್‌ಪೆಕ್ಟರ್‌ ಸಂದೇಶ್‌ ಪಿ.ಜಿ. ಮತ್ತು ಸಿಬ್ಬಂದಿ ಧಾವಿಸಿದ್ದು, ಸ್ಥಳ ಮಹಜರು ನಡೆಸಿ, ಆಧಿರೋಪಿ ಹರೀಶ್ನನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉದ್ಯಮಿಗಳ ಹನಿ ಟ್ರ್ಯಾಪ್‌: ಕೇರಳ ಮೂಲದ ನಾಲ್ವರ ಸೆರೆ, ಸಾಮಾಜಿಕ ಜಾಲತಾಣ ದುರ್ಬಳಕೆ

ಮರದ ಬಡಿಗೆಯಲ್ಲಿ ತಂದೆಯ ಮೇಲೆ ಹಲ್ಲೆ ನಡೆಸಿದ್ದರಿಂದ ಬಾಯಿಯಿಂದ ರಕ್ತ ಸ್ರಾವವಾಗಿ ತಂದೆ ಶ್ರೀಧರ ಪೂಜಾರಿ ಸ್ಥಳದಲ್ಲೇ ಮೃತಪಟ್ಟಿದ್ದರು, ಗಲಾಟೆ ಜೋರಾಗುತ್ತಿದ್ದಂತೆ ಸಾರ್ವಜನಿಕರು ಸ್ಥಳಕ್ಕೆ ಆಗಮಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ