ಆ್ಯಪ್ನಗರ

ಮಂಗಳೂರು: ಧರ್ಮಸ್ಥಳದ ಪೂಜ್ಯ ಖಾವಂದರಿಗೆ ಹುಟ್ಟುಹಬ್ಬದ ಸಂಭ್ರಮ: ಸಿಎಂ ಸೇರಿ ಗಣ್ಯರಿಂದ ಶುಭಾಶಯ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿರುವ ಶ್ರೀ ಮಂಜುನಾಥನ ಕ್ಷೇತ್ರವಾದ ಧರ್ಮಸ್ಥಳ ಇಡೀ ಜಗತ್ತಿನಾದ್ಯಂತ ಸುಪ್ರಸಿದ್ದಿಯಾಗಿದೆ. ನಂಬಿ ಬಂದ ಭಕ್ತರನ್ನು ಮಂಜುನಾಥ ಕೈ ಬಿಡನು ಎನ್ನುವ ಮಾತುಗಳಿವೆ. ಇದರ ಧರ್ಮಧಿಕಾರಿಯಾಗಿರುವ ಪೂಜ್ಯ ಖಾವಂದರ ಹುಟ್ಟುಹಬ್ಬದ ಹಿನ್ನೆಲೆ ಅನೇಕ ಗಣ್ಯರು ಶುಭಕೋರಿದ್ದಾರೆ.

Vijaya Karnataka Web 25 Nov 2020, 1:05 pm
ಮಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರಿಗೆ ಇಂದು 72ನೇ ವರ್ಷದ ಜನ್ಮದಿನದ ಸಂಭ್ರಮ. ಈ ಹಿನ್ನೆಲೆ ಧರ್ಮಸ್ಥಳದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇನ್ನು ಸ್ಥಳೀಯರು ಸೇರಿ ಗಣ್ಯರು ಪೂಜ್ಯ ಖಾವಂದರಿಗೆ ಶುಭಾಶಯಗಳನ್ನು ಕೋರುತ್ತಿದ್ದಾರೆ.
Vijaya Karnataka Web Veerendra Heggade


ಇದೀಗ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕೂಡ ಧರ್ಮಸ್ಥಳದ ಧರ್ಮಾಧಿಕಾರಿಯವರಿಗೆ ಟ್ವೀಟ್‌ ಮೂಲಕ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ, ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ಅವರ ಜನ್ಮದಿನದಂದು ಅವರಿಗೆ ಭಕ್ತಿಪೂರ್ವಕ ಶುಭಕಾಮನೆಗಳು. ಶ್ರೀ ಮಂಜುನಾಥ ಸ್ವಾಮಿಯು ತಮಗೆ ಉತ್ತಮ ಆರೋಗ್ಯವನ್ನು, ಶಿಕ್ಷಣ, ಸ್ತ್ರೀಶಕ್ತಿ, ಗ್ರಾಮೀಣಾಭಿವೃದ್ಧಿ ಮೊದಲಾದ ಹಲವಾರು ಕ್ಷೇತ್ರಗಳಲ್ಲಿ ನಿಮ್ಮ ಸೇವಾಕೈಂಕರ್ಯ ಇನ್ನೂ ದೀರ್ಘಕಾಲ ಯಶಸ್ವಿಯಾಗಿ ಮುಂದುವರಿಯುವಂತೆ ಹರಸಲಿ ಎಂದು ಬರೆದುಕೊಂಡಿದ್ದಾರೆ.


ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿರುವ ಶ್ರೀ ಮಂಜುನಾಥನ ಕ್ಷೇತ್ರವಾದ ಧರ್ಮಸ್ಥಳ ಇಡೀ ಜಗತ್ತಿನಾದ್ಯಂತ ಸುಪ್ರಸಿದ್ದಿಯಾಗಿದೆ. ನಂಬಿ ಬಂದ ಭಕ್ತರನ್ನು ಮಂಜುನಾಥ ಕೈ ಬಿಡನು ಎನ್ನುವ ಮಾತುಗಳಿವೆ. ಅಲ್ಲದೇ ಇಲ್ಲಿನ ಭಕ್ತಿ ಹಾಗೂ ಅನ್ನಪ್ರಸಾದ ಇಡೀ ವಿಶ್ವದಲ್ಲಿಯೇ ಹೆಸರುವಾಸಿಯಾಗಿದೆ. ಇನ್ನು ವೀರೇಂದ್ರ ಹೆಗ್ಗಡೆಯವರು ದೂರದೃಷ್ಟಿಯಿಂದ ಅನೇಕ ಸಮಾಜ ಸೇವೆ ಕ್ಷೇತ್ರ ಹಾಗೂ ನಾಡಿನಲ್ಲಿ ನಡೆಯುತ್ತಿದೆ.

ಮಂಗಳೂರು: ಸಂಬಂಧಿಕರ ಮನೆಗೆ ಮದುವೆಗೆ ಹೋಗಿದ್ದ ಜಲಸಮಾಧಿ, ಪ್ರಾಣ ತೆಗೆದ ಮರಳು ಗುಂಡಿ!

ಸಂಸದರಾದ ಬಿಎನ್‌ ಬಚ್ಚೇಗೌಡರಿಂದ ಹುಟ್ಟುಹಬ್ಬದ ಶುಭಾಶಯ


ಶಾಸಕ ಶರತ್‌ ಬಚ್ಚೇಗೌಡರಿಂದು ಶುಭಾಶಯ

ಸಚಿವ ಶ್ರೀರಾಮುಲು ಅವರಿಂದಲೂ ಹುಟ್ಟುಹಬ್ಬಕ್ಕೆ ಶುಭಾಶಯ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ