ಆ್ಯಪ್ನಗರ

ಮೂಡುಬಿದಿರೆ: ಕಡಂದಲೆ ಶಾಂಭವಿ ನದಿಯಲ್ಲಿ ಮುಳುಗಿ 4 ಮಂದಿ ಸಾವು

ಮಂಗಳವಾರ ಮಧ್ಯಾಹ್ನ ಶಾಂಭವಿ ನದಿಗೆ ಇವರು ಸ್ನಾನಕ್ಕೆಂದು ತೆರಳಿದ್ದು, ಈ ಸಂದರ್ಭ ಆಯತಪ್ಪಿ ನೀರಿನಲ್ಲಿ ಮುಳುಗಿದ್ದಾರೆ. ಇಬ್ಬರ ಶವವನ್ನು ಮೇಲಕ್ಕೆತ್ತಲಾಗಿದೆ. ಕುಟುಂಬ ಸದಸ್ಯರ ಆಕ್ರಂದನ ಮುಗಿಲುಮುಟ್ಟಿದೆ.

Vijaya Karnataka Web 24 Nov 2020, 6:22 pm
ಮೂಡುಬಿದಿರೆ: ಮೂಡುಬಿದಿರೆ ಕಡಂದಲೆ ಶಾಂಭವಿ ನದಿಯಲ್ಲಿ ಮುಳುಗಿ ನಾಲ್ವರು ಮೃತಪಟ್ಟಿದ್ದಾರೆ.
Vijaya Karnataka Web ಘಟನಾ ಸ್ಥಳದಲ್ಲಿ ನೆರೆದಿರುವ ಜನ
ಘಟನಾ ಸ್ಥಳದಲ್ಲಿ ನೆರೆದಿರುವ ಜನ


ವಾಮಂಜೂರು ಮೂಡುಶೆಡ್ಡೆ ನಿವಾಸಿಗಳಾದ ನಿಖಿಲ್ (18), ಹರ್ಷಿತಾ (20), ವೇಣೂರಿನ ಸುಭಾಷ್ (19), ಬಜಪೆ ಪೆರಾರ ರವಿ (30) ಮೃತಪಟ್ಟವರು.

ಮೂಡುಬಿದಿರೆ ಕಡಂದಲೆಯ ಮನೆಯೊಂದರಲ್ಲಿ ನಡೆಯಲಿದ್ದ ಮದುವೆ ಸಮಾರಂಭಕ್ಕೆ ಹೋಗಿ ಕಳೆದ 4 ದಿನಗಳಿಂದ ಅಲ್ಲೇ ವಾಸ್ತವ್ಯವಿದ್ದರು.

ಮಂಗಳವಾರ ಮಧ್ಯಾಹ್ನ ಶಾಂಭವಿ ನದಿಗೆ ಇವರು ಸ್ನಾನಕ್ಕೆಂದು ತೆರಳಿದ್ದು, ಈ ಸಂದರ್ಭ ಆಯತಪ್ಪಿ ನೀರಿನಲ್ಲಿ ಮುಳುಗಿದ್ದಾರೆ. ಇಬ್ಬರ ಶವವನ್ನು ಮೇಲಕ್ಕೆತ್ತಲಾಗಿದ್ದು, ಇನ್ನಿಬ್ಬರಿಗಾಗಿ ಹುಡುಕಾಟ ನಡೆಯುತ್ತಿದೆ.

ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಹಲವಾರು ಮುಳುಗು ತಜ್ಞರು ಶೋಧ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ