ಆ್ಯಪ್ನಗರ

ಮಾಧ್ಯಮ ನಿರ್ಬಂಧ ಸಂವಿಧಾನ ಬಾಹಿರ, ಸ್ವಾತಂತ್ರ್ಯ ವಿರೋಧಿ: ಸಂತೋಷ್‌ ಹೆಗ್ಡೆ

"ಭ್ರಷ್ಟಾಚಾರವನ್ನು ಯಾರಿಂದಲೂ ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸಾಧ್ಯವಿಲ್ಲ. ಆದರೆ ಆ ಪ್ರಯತ್ನ ನಡೆಸಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ," - ಜಸ್ಟೀಸ್‌ ಸಂತೋಷ್‌ ಹೆಗ್ಡೆ, ಮಾಜಿ ಲೋಕಾಯುಕ್ತ.

Vijaya Karnataka 18 Oct 2019, 4:50 pm
ಮೂಡುಬಿದಿರೆ (ಮಂಗಳೂರು): ರಾಜ್ಯ ಸರಕಾರ ಮಾಧ್ಯಮಗಳ ಮೇಲೆ ಹೇರಿರುವ ನಿರ್ಬಂಧ ಸಂವಿಧಾನ ಬಾಹಿರ ಹಾಗೂ ಸ್ವಾತಂತ್ರ್ಯ ವಿರೋಧಿ ಕಾರ್ಯ. ನ್ಯಾಯಾಲಯದಲ್ಲೂ ಮಾಧ್ಯಮಗಳಿಗೆ ಪ್ರವೇಶ ನೀಡಬೇಕು. ಆಗ ಕಾರ್ಯಾಂಗ ಮತ್ತು ನ್ಯಾಯಾಂಗದ ಆಡಳಿತ ಪಾರದರ್ಶಕತೆಯನ್ನು ಕಾಯ್ದುಕೊಳ್ಳಲು ಸಾಧ್ಯ ಎಂದು ಜಸ್ಟಿಸ್‌ ಎನ್‌ ಸಂತೋಷ್‌ ಹೆಗ್ಡೆ ಹೇಳಿದರು.
Vijaya Karnataka Web Santosh Hegde


ಆಳ್ವಾಸ್‌ ಎಂಜಿನಿಯರಿಂಗ್‌ ಕಾಲೇಜು ಆಡಿಟೋರಿಯಂನಲ್ಲಿಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ರೋಸ್ಟ್ರಮ್‌ ವೇದಿಕೆಯಡಿಯಲ್ಲಿ ನಡೆದ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

"ರಾಷ್ಟ್ರದ ಹಿತಾಸಕ್ತಿಯನ್ನು ಕಾಪಾಡಲು ನಮ್ಮ ಹಿರಿಯರು ಸಂವಿಧಾನದಲ್ಲಿ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ವ್ಯವಸ್ಥೆಗಳನ್ನು ರೂಪಿಸಿದ್ದು, ಇಂದು ಅವುಗಳು ತಮ್ಮ ಸ್ಥಾಪಿತ ಉದ್ದೇಶವನ್ನು ಮರೆತು ಕಾರ‍್ಯನಿರ್ವಹಿಸುತ್ತಿವೆ. ಭ್ರಷ್ಟಾಚಾರವನ್ನು ಯಾರಿಂದಲೂ ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸಾಧ್ಯವಿಲ್ಲ. ಆದರೆ ಆ ಪ್ರಯತ್ನ ನಡೆಸಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ," ಎಂದು ಹೇಳಿದರು.

"ಈ ನಿಟ್ಟಿನಲ್ಲಿ ಈ ದೇಶದ ಭವಿಷ್ಯವೆಂದು ಕರೆಯಲ್ಪಡುವ ಯುವ ಜನತೆಯ ಪಾತ್ರ ಮಹತ್ತರವಾದುದು. ಈ ನಿಟ್ಟಿನಲ್ಲಿ ಯುವ ಜನತೆಗೆ ಪ್ರೇರಣೆ ನೀಡುವ ಸಲುವಾಗಿ ಶಿಕ್ಷಣ ಸಂಸ್ಥೆಗಳಲ್ಲಿ ಈ ಕುರಿತು ಜಾಗೃತಿ ಮೂಡಿಸುವ ಕಾರ್ಯವನ್ನು ತಾನು ಮಾಡುತ್ತಿರುವುದಾಗಿ ಅವರು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ