ಆ್ಯಪ್ನಗರ

ಚಿಕಿತ್ಸೆ ಫಲಕಾರಿಯಾಗದೇ ಮಗು ಸಾವು

ಉಜಿರೆ ಗ್ರಾಮದ ಓಡಲ ಎಂಬಲ್ಲಿ ಸೋಮವಾರ ತನ್ನ ಮಕ್ಕಳೊಂದಿಗೆ ಆತ್ಮಹತ್ಯೆಗೆ ಪ್ರಯತ್ನಿಸಿದ್ದ ಮಹಿಳೆ ಸಾವಿಗೀಡಾದ ಪ್ರಕರಣದಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದ ಅವಳಿ ಹೆಣ್ಣು ಮಕ್ಕಳಿಬ್ಬರಲ್ಲಿ ಒಂದು ಮಗು ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದೆ.

Vijaya Karnataka 6 Feb 2019, 4:11 pm
ಬೆಳ್ತಂಗಡಿ: ಉಜಿರೆ ಗ್ರಾಮದ ಓಡಲ ಎಂಬಲ್ಲಿ ಸೋಮವಾರ ತನ್ನ ಮಕ್ಕಳೊಂದಿಗೆ ಆತ್ಮಹತ್ಯೆಗೆ ಪ್ರಯತ್ನಿಸಿದ್ದ ಮಹಿಳೆ ಸಾವಿಗೀಡಾದ ಪ್ರಕರಣದಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದ ಅವಳಿ ಹೆಣ್ಣು ಮಕ್ಕಳಿಬ್ಬರಲ್ಲಿ ಒಂದು ಮಗು ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದೆ.
Vijaya Karnataka Web medicale failure baby died
ಚಿಕಿತ್ಸೆ ಫಲಕಾರಿಯಾಗದೇ ಮಗು ಸಾವು


ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬೀಸನಗದ್ದೆ ನಿವಾಸಿ ಬೇಬಿ(23) ಅವರನ್ನು ಪ್ರವೀಣ ಎಂಬವರು ವಿವಾಹವಾಗಿದ್ದು, ಪ್ರಸ್ತುತ ಉಜಿರೆ ಓಡಲ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಗಂಡ-ಹೆಂಡತಿಯ ನಡುವೆ ನಡೆದ ಕ್ಷ ುಲ್ಲಕ ವಿಷಯಕ್ಕೆ ಮನನೊಂದು ಸೋಮವಾರ ಮಧ್ಯಾಹ್ನ ಬೇಬಿ ತನ್ನ ಎರಡೂವರೆ ವರ್ಷದ ಹೆಣ್ಣು ಮಕ್ಕಳಾದ ಅಕ್ಷ ರ ಮತ್ತು ಅಪ್ಸರಾ ನೇಣು ಬಿಗಿದು ಆತ್ಮಹತ್ಯೆಗೆ ಪ್ರಯತ್ನಿಸಿದ್ದರು.

ಸ್ಥಳೀಯರು ಮೂವರನ್ನು ರಕ್ಷಿಸಲು ಪ್ರಯತ್ನಿಸಿದ್ದು, ಸೋಮವಾರ ಬೇಬಿ ಅವರು ಮೃತಪಟ್ಟಿದ್ದರು. ಮಕ್ಕಳಿಬ್ಬರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರಲ್ಲಿ ಅಪ್ಸರಾ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ