ಆ್ಯಪ್ನಗರ

ಪೊಳಲಿ ದೇವಾಲಯಕ್ಕೆ ತೆರಳಿ ಹರಕೆ ತೀರಿಸಿದ ಸಚಿವ ಸುರೇಶ್ ಕುಮಾರ್

ರಾಜ್ಯದಲ್ಲಿ ನಡೆದ ಎಸ್ಎಸ್ಎಲ್‌ಸಿ ಪರೀಕ್ಷೆ ಯಶಸ್ವಿಯಾಗಿ ಪೂರ್ಣಗೊಂಡಿದ್ದರಿಂದ ರಾಜರಾಜೇಶ್ವರಿ ಸನ್ನಿಧಿಗೆ ಬಂದ ಶಿಕ್ಷಣ ಸಚಿವರು ದೇವಿಗೆ ಪೂಜೆ ಸಲ್ಲಿಸಿ ಹರಕೆ ತೀರಿಸಿದರು. ಬಳಿಕ ಎಸ್ಎಸ್ಎಲ್‌ಸಿ ಪರೀಕ್ಷೆಯನ್ನು ಕಾಲಿನಲ್ಲಿ ಬರೆದು ಸುದ್ದಿಯಾಗಿದ್ದ ಕೌಶಿಕ್‌ ಮನೆಗೆ ಭೇಟಿ ನೀಡಿ ವಿದ್ಯಾರ್ಥಿಯ ಪಠ್ಯೇತರ ಚಟುವಟಿಕೆಗಳ ಬಗ್ಗೆ ಮನೆಯವರ ಜೊತೆ ಚರ್ಚೆ ನಡೆಸಿದರು.

Vijaya Karnataka Web 10 Jul 2020, 3:39 pm
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್ ಇಂದು ಪ್ರಸಿದ್ಧ ಪೊಳಲಿ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
Vijaya Karnataka Web SURESH KUMAR S


ಕೊರೊನಾ ಸಂಕಷ್ಟದಲ್ಲೂ ಸುಲಿಗೆ ! ಖಾಸಗಿ ಆಸ್ಪತ್ರೆಗಳ ವಿರುದ್ಧ ವ್ಯಾಪಕ ಆಕ್ರೋಶ

ರಾಜ್ಯದಲ್ಲಿ ನಡೆದ ಎಸ್ಎಸ್ಎಲ್‌ಸಿ ಪರೀಕ್ಷೆ ಯಶಸ್ವಿಯಾಗಿ ಪೂರ್ಣಗೊಂಡಿದ್ದರಿಂದ ರಾಜರಾಜೇಶ್ವರಿ ಸನ್ನಿಧಿಗೆ ಬಂದ ಶಿಕ್ಷಣ ಸಚಿವರು ದೇವಿಗೆ ಪೂಜೆ ಸಲ್ಲಿಸಿ ಹರಕೆ ತೀರಿಸಿದರು. ಬಳಿಕ ಎಸ್ಎಸ್ಎಲ್‌ಸಿ ಪರೀಕ್ಷೆಯನ್ನು ಕಾಲಿನಲ್ಲಿ ಬರೆದು ಸುದ್ದಿಯಾಗಿದ್ದ ಕೌಶಿಕ್‌ ಮನೆಗೆ ಭೇಟಿ ನೀಡಿ ವಿದ್ಯಾರ್ಥಿಯ ಪಠ್ಯೇತರ ಚಟುವಟಿಕೆಗಳ ಬಗ್ಗೆ ಮನೆಯವರ ಜೊತೆ ಚರ್ಚೆ ನಡೆಸಿದರು. ಅಲ್ಲದೇ ಈ ವೇಳೆ ನಿನ್ನ ಸಾಧನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದೆ ಎಂದು ಕೌಶಿಕ್‌ನನ್ನು ಅಭಿನಂದಿಸಿದರು.

ಶವ ಸಂಸ್ಕಾರಕ್ಕೆ ಅಡ್ಡಿಯಾಗದ ಧರ್ಮ: ಹಿಂದೂ ಶವ ದಹನಕ್ಕೆ ವ್ಯವಸ್ಥೆ ಕಲ್ಪಿಸಿದ ಆಪತ್ಬಾಂಧವ

ಜೊತೆಗೆ ಪೊಳಲಿ ದೇವಾಲಯಕ್ಕೆ ತೆರಳುವ ಮಧ್ಯೆ ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರಕ್ಕೆ ಭೇಟಿ ನೀಡಿದ ಸಚಿವರು ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಜೊತೆ ಮಾತುಕತೆ ನಡೆಸಿದರು.

ಅಡಿಕೆಗೆ ಬಂತು ಬಂಗಾರದ ಬೆಲೆ: ಬೆಳೆಗಾರರು ಫುಲ್ ಖುಷ್, ಇಲ್ಲಿದೆ ದರಪಟ್ಟಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ