ಆ್ಯಪ್ನಗರ

ಕಸಾಯಿಖಾನೆ ವಿವಾದ ಕುರಿತು ಪ್ರಧಾನಿಗೆ ಪತ್ರ: ಸಚಿವ ಖಾದರ್‌

​ಬಿಜೆಪಿ ಸರಕಾರದ ಪ್ರಧಾನಮಂತ್ರಿಗಳೇ ಈ ಕುರಿತು ನಿರ್ಧಾರ ಕೈಗೊಳ್ಳಲಿ. ಜನರ ಭಾವನೆಗಳನ್ನು ಕೆರಳಿಸಿ ರೊಚ್ಚಿಗೆಬ್ಬಿಸುವ ಕೆಲಸ ಮಾಡುವುದು ಬೇಡ ಎಂದು ಸಚಿವ ಖಾದರ್ ಹೇಳಿದ್ದಾರೆ.

Vijaya Karnataka Web 16 Oct 2018, 4:26 pm
ಮಂಗಳೂರು: ಮಂಗಳೂರು ಕಸಾಯಿಖಾನೆ ಸಂಬಂಧಿಸಿದಂತೆ ಎದ್ದಿರುವ ವಿವಾದ ಕುರಿತು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ನಗರಾಭಿವೃದ್ಧಿ ಸಚಿವರಿಗೆ ಪತ್ರ ಬರೆಯುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಹೇಳಿದರು.
Vijaya Karnataka Web UT Khader


ಮಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಜನಪ್ರತಿನಿಧಿಗಳೇ ಕಸಾಯಿಖಾನೆ ಅಭಿವೃದ್ಧಿಗೆ ವಿರೋಧ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿಗೆ ಪತ್ರ ಬರೆಯುತ್ತೇನೆ ಎಂದರು

ಬಿಜೆಪಿ ಸರಕಾರದ ಪ್ರಧಾನಮಂತ್ರಿಗಳೇ ಈ ಕುರಿತು ನಿರ್ಧಾರ ಕೈಗೊಳ್ಳಲಿ. ಜನರ ಭಾವನೆಗಳನ್ನು ಕೆರಳಿಸಿ ರೊಚ್ಚಿಗೆಬ್ಬಿಸುವ ಕೆಲಸ ಮಾಡುವುದು ಬೇಡ ಎಂದು ಅವರು ನುಡಿದರು.

ನವೆಂಬರ್ 16ರಂದು ಸ್ಥಳೀಯ ಮಟ್ಟದಲ್ಲಿ ಕಂದಾಯ ಅದಾಲತ್ ನಡೆಸಲಾಗುವುದು. ಕಂದಾಯಕ್ಕೆ ಸಂಬಂಧಿಸಿದ ಎಲ್ಲ ವಿಷಯಗಳನ್ನು ಸ್ಥಳದಲ್ಲೇ ಇತ್ಯರ್ಥ ಪಡಿಸಲಾಗುವುದು ಎಂದು ಸಚಿವ ಖಾದರ್‌ ನುಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ